Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮತ್ತೆ 4 ದಿನ ಇಡಿ ಕಸ್ಟಡಿಗೆ ಶಾಸಕ ವೀರೇಂದ್ರ ಪಪ್ಪಿ …!

---Advertisement---

ಸುದ್ದಿಒನ್,  ಚಿತ್ರದುರ್ಗ, ಸೆಪ್ಟೆಂಬರ್. 05 : ಶಾಸಕ ವೀರೇಂದ್ರ ಪಪ್ಪಿ ಅವರನ್ನು ಮತ್ತೆ ನಾಲ್ಕು ದಿನ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. 2023ರ ವಿಧಾನಸಭಾ ಚುನಾವಣಾ ಸಂದರ್ಭದಲ್ಲಿ ಭರ್ಜರಿ ಪ್ರಚಾರ ನಡೆಸಿದ್ದ ವಿರೇಂದ್ರ ಪಪ್ಪಿ ಅವರು, ನಾವೂ ಜನ ಸೇವೆ ಮಾಡುವುದಕ್ಕೆ ರಾಜಕೀಯಕ್ಕೆ ಬರ್ತಾ ಇರೋದು. ಜನಸಾಮಾನ್ಯರದ್ದಾಗಲಿ ಅಥವಾ ಸರ್ಕಾರದ್ದಾಗಲಿ ಹಣ ಬೇಕಿಲ್ಲ. ನಾವೂ ಹಿಂದಿನಿಂದಲೇ ಕೋಟ್ಯಾಧೀಶ್ವರರು ಅಂತ ಹೇಳಿದ್ದರು. ಆದರೆ ಆ ಶ್ರೀಮಂತಿಕೆ ಬಂದಿದ್ದೆಲ್ಲಿಂದ ಅಂತ ಇಡಿ ಅಧಿಕಾರಿಗಳು ಬೆನ್ನತ್ತಿ ಹುಡುಕಾಟ ನಡೆಸಿದ್ದಾರೆ.

ಅಕ್ರಮವಾಗಿ ನಡೆಸುತ್ತಿದ್ದ ಕಿಂಗ್ 567, ರಾಜಾ 567, ಲಯನ್ 568 ಸೇರಿದಂತೆ ಇತ್ಯಾದಿಗಳ ಹೆಸರಿನಲ್ಲಿ ನಡೆಸುತ್ತಿರುವ ಆನ್ಲೈನ್ ಬೆಟ್ಟಿಂಗ್ ತಾಣಗಳನ್ನು ಪತ್ತೆ ಮಾಡಿದ್ದಾರೆ. ಅಲ್ಲದೇ ಹಣ ವರ್ಗಾವಣೆಗೆ ವೆಬ್ಸೈಟ್, ರೂಟಿಂಗ್ ಮಾಡಲು ಹಲವು ಗೇಟ್‌ವೇಗಳನ್ನು ಬಳಕೆ ಮಾಡಿದ್ದು, ಅಲ್ಪಾವಧಿಯಲ್ಲಿಯೇ 2 ಸಾವಿರ ಕೋಟಿ ರೂಪಾಯಿ ಲಾಭಗಳಿಸಿರುವ ಅಕ್ರಮವನ್ನು ಬಯಲಿಗೆಳೆದಿದ್ದಾರೆ. ಈ ದಂಧೆಗೆ ಶಾಸಕ ವೀರೇಂದ್ರ ಪಪ್ಪಿಯ ಸಹೋದರ ಕೆ.ಸಿ. ತಿಪ್ಪೆಸ್ವಾಮಿ ಕಿಂಗ್ ಪಿ‌ನ್ ಎಂದೇ ಹೇಳಲಾಗಿದೆ.

ಇವರು ಬೇರೆ ಬೇರೆ ವ್ಯಾಪಾರ, ವ್ಯವಹಾರದಲ್ಲಿ ಹಣ ಹೂಡಿಕೆ ಮಾಡಿದ್ದಾರೆ‌ ಎನ್ನಲಾಗಿದೆ. ಸದ್ಯ ಇಡಿ ಅಧಿಕಾರಿಗಳು ಇನ್ನು ಸಾಕಷ್ಟು ರೀತಿಯಲ್ಲಿ ತನಿಖೆಯನ್ನು ನಡೆಸುತ್ತಿದ್ದಾರೆ. ಯಾವೆಲ್ಲಾ ಮೂಲಗಳಲ್ಲಿ ಹಣ ಹೂಡಿಕೆ ಮಾಡಿದ್ದಾರೆ, ಎಲ್ಲೆಲ್ಲಾ ಹಣದ ಮೂಲವಿದೆ, ಬೇರೆ ಏನೆಲ್ಲಾ ವ್ಯವಹಾರ ಇರಬಹುದು ಎಂಬೆಲ್ಲಾ ಆಯಾಮದಿಂದ ತನಿಖೆ ನಡೆಯುತ್ತಿದೆ. ಇಂದು ಇಡಿ ಕಸ್ಟಡಿ ಅಂತ್ಯವಾಗಿದ್ದ ಹಿನ್ನೆಲೆ ಕೋರ್ಟ್ ಗೆ ಹಾಜರುಪಡಿಸಲಾಗಿತ್ತು. ಕೋರ್ಟ್ ಮತ್ತೆ ನಾಲ್ಕು ದಿನ ಕಸ್ಟಡಿಗೆ ನೀಡಲಾಗಿದೆ. ಜೊತೆಗೆ ಪೊಲೀಸರಿಗೂ ಒಂದಷ್ಟು ನಿಯಮಗಳನ್ನ ಕೋರ್ಟ್ ನೀಡಿದೆ. 9 ಗಂಟೆಯ ಒಳಗೆ ವಿಚಾರಣೆ ಮುಗಿಸಲು ಸೂಚನೆ‌ ನೀಡಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment