Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ತಾಕತ್ತಿದ್ರೆ ಶ್ರೀಮಂತರ ಮನೆ ವಿದ್ಯುತ್ ಕಟ್ ಮಾಡಿ : ಚೆಸ್ಕಾಂ ಅಧಿಕಾರಿಗೆ ತರಾಟೆ ತೆಗೆದುಕೊಂಡ ಯತೀಂದ್ರ ಸಿದ್ದರಾಮಯ್ಯ..!

Facebook
Twitter
Telegram
WhatsApp

 

ಮೈಸೂರು: ಬಿಲ್ ಕಟ್ಟಿಲ್ಲ ಎಂಬ ಕಾರಣಕ್ಕೆ ಪಂಚಾಯ್ತಿ ವಿದ್ಯುತ್ ಸಂಪರ್ಕ ಕಟ್ ಮಾಡಿದ ಅಧಿಕಾರಿಗೆ ಶಾಸಕ ಯತೀಂದ್ರ ಸಿದ್ದರಾಮಯ್ಯ ತರಾಟೆ ತೆಗೆದುಕೊಂಡಿರುವ ಘಟನೆ ನಡೆದಿದೆ. ನಂಜನಗೂಡು ತಾಲೂಕಿನ ತಗಡೂರು ಗ್ರಾಮದಲ್ಲಿ ಈ ಘಟನೆ ನಡೆದಿದೆ. ನಿಮಗೆ ತಾಕತ್ತಿದ್ದರೆ ಶ್ರೀಮಂತರ ಮಬೆಯ ಕರೆಂಟ್ ಕಟ್ ಮಾಡಿ ನೋಡೋಣಾ ಎಂದು ಕ್ಲಾಸ್ ತೆಗೆದುಕೊಂಡಿದ್ದಾರೆ.

ಗ್ರಾಮ ಪಂಚಾಯ್ತಿಯ ವಿದ್ಯುತ್ ಬಿಲ್ ಕೋಟಿ ರೂಪಾಯಿ ದಾಟಿದೆ. ಆದ್ರೆ ಬಿಲ್ ಕಟ್ಟುವ ಗೋಜಿಗೆ ಹೋಗಿರಲಿಲ್ಲ. ಹೀಗಾಗಿ ಗ್ರಾಮ ಪಂಚಾಯ್ತಿ ವಿದ್ಯುತ್ ಸಂಪರ್ಕವನ್ನ ಕಟ್ ಮಾಡಲಾಗಿತ್ತು. ಈ ಹಿನ್ನೆಲೆ ಗ್ರಾಮಸ್ಥರು ಹಾಗೂ ಶಾಸಕರು ಚೆಸ್ಕಾಂ ಅಧಿಕಾರಿ ದೀಪಕ್ ರನ್ನ ತರಾಟೆಗೆ ತೆಗೆದುಕೊಂಡಿದ್ದಾರೆ. ಶಾಸಕ ಯತೀಂದ್ರ ಸಿದ್ದರಾಮಯ್ಯ ಚೆಸ್ಕಾಂ ಅಧಿಕಾರಿಗೆ ಕ್ಲಾಸ್ ತೆಗೆದುಕೊಂಡಿದ್ದು, ನೀವೂ ಸರ್ಕಾರಿ ಕೆಲಸಕ್ಕೆ ಅನ್ ಫಿಟ್ ಎಂದಿದ್ದಾರೆ. ಬಾಯಿ ಮುಚ್ಚಿಕೊಳ್ರೀ.. ಏನ್ರೀ ನಿಮ್ಮ ಹೆಸರು.. ತಾಕತ್ತಿದ್ರೆ ಫ್ಯಾಕ್ಟರಿಗಳಿಗೆ ಹೋಗಿ ವಸೂಲಿ ಮಾಡಿ, ಶ್ರೀಮಂತರ ಮನೆಗಳಿಗೆ ಹೋಗಿ ಕರೆಂಟ್ ಕಟ್ ಮಾಡಿ ಎಂದು ಗರಂ ಆಗಿದ್ದರು.

ಚೆಸ್ಕಾಂ ಅಧಿಕಾರಿ ಶಾಸಕರಿಗೆ ವಿವರಣೆ ನೀಡಲು ಮುಂದಾಗಿದ್ದರು. ಕೋಟಿ ಕೋಟಿ ಹಣ ಬಾಕಿ ಇದೆ ಸರ್ ಎಂದು ಹೇಳಿದರು ಶಾಸಕರು ಕೇಳಲಿಲ್ಲ. ಕೋಟಿ ರೂಪಾಯಿ ಬಾಕಿ ಇದ್ದರೆ ಏನು..? ಕಂತಿನ ರೂಪದಲ್ಲಿ ಹಣ ಪಡೆಯಿರಿ. ಇಲ್ಲ 500 ಕೊಟ್ಟರು ತೆಗೆದುಕೊಳ್ಳಬೇಕು ಎಂದು ಸಲಹೆ ನೀಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರ ಮದುವೆ ಯಾವಾಗ ಆಗುತ್ತೆ? ಎಂಬ ಚಿಂತೆಯಲ್ಲಿ ವಯಸ್ಸು ಮೀರುತಿದೆ.

ಈ ರಾಶಿಯವರ ಮದುವೆ ಯಾವಾಗ ಆಗುತ್ತೆ? ಎಂಬ ಚಿಂತೆಯಲ್ಲಿ ವಯಸ್ಸು ಮೀರುತಿದೆ. ಈ ರಾಶಿಯವರು ತುಂಬಾ ದಿವಸದಿಂದ ಪ್ರೀತಿಸುತ್ತಿದ್ದಾರೆ ಆದರೆ ಇವರ ಜೊತೆ ಮದುವೆ ಆಗುತ್ತೋ ಇಲ್ವೋ ಎಂಬ ಅನುಮಾನ, ಭಾನುವಾರ- ರಾಶಿ ಭವಿಷ್ಯ

ಪ್ರಜ್ವಲ್ ವಿಡಿಯೋ ಕೇಸ್ : ದೇಹದ ಆರೋಗ್ಯ ಮಾತ್ರವಲ್ಲ ಸಮಾಜದ ಆರೋಗ್ಯವನ್ನು ಸುಧಾರಿಸಬೇಕು ಡಾ. ಮಂಜುನಾಥ್

ರಾಮನಗರ: ರಾಜ್ಯದಲ್ಲಷ್ಟೇ ಅಲ್ಲ ದೇಶದಲ್ಲೂ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣ ಸದ್ದು ಮಾಡುತ್ತಿದೆ. ಎಸ್ಐಟಿ ಅಧಿಕಾರಿಗಳು ಪ್ರಜ್ವಲ್ ರೇವಣ್ಣ ತನಿಖೆಗೆ ಕಾಯುತ್ತಿದ್ದಾರೆ. ಆದರೆ ಪ್ರಜ್ವಲ್ ರೇವಣ್ಣ ರಾಜ್ಯಕ್ಕೆ ಬರುವ ಸಾಹಸ ಮಾಡುತ್ತಿಲ್ಲ.

ಸರ್ಕಾರಿ ಮತ್ತು ಖಾಸಗಿ ಶಾಲೆಗಳ ಗಂಭೀರ ಸಮಸ್ಯೆಗಳ ಪರಿಹಾರಕ್ಕೆ ಡಿ.ಟಿ. ಶ್ರೀನಿವಾಸ್ ಅವರನ್ನು ಬೆಂಬಲಿಸಿ : ಶಾಸಕ ಟಿ. ರಘುಮೂರ್ತಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮೇ. 18 : ಜನಪರ ಆಡಳಿತ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ ಸರ್ವರಿಗೂ ಅನುಕೂಲವಾಗುವಂತೆ ರೂಪಿಸುವ ಯೋಜನೆಗಳು

error: Content is protected !!