Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ತರಬೇತಿ ಪಡೆದು ಪರೀಕ್ಷೆಗೆ ಸಿದ್ದರಾಗಿ : ನ್ಯಾಯಾಧೀಶರಾದ ರೋಣ್ ವಾಸುದೇವ್

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್.10 : ಅತಿಯಾದ ಆತ್ಮವಿಶ್ವಾಸದಿಂದ ಕೆಲವೊಮ್ಮೆ ಸಿಗುವ ಅವಕಾಶವನ್ನು ಕಳೆದುಕೊಳ್ಳಬೇಕಾಗುತ್ತದೆ. ಹಾಗಾಗಿ ತರಬೇತಿ ಎಲ್ಲರಿಗೂ ಅತ್ಯವಶ್ಯಕ ಎಂದು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರಾದ ರೋಣ್ ವಾಸುದೇವ್ ತಿಳಿಸಿದರು.

ವಕೀಲರ ಸಂಘದಿಂದ ಸಿವಿಲ್ ನ್ಯಾಯಾಧೀಶರ ಪರೀಕ್ಷಾರ್ಥಿಗಳಿಗೆ ನ್ಯಾಯಾಧೀಶರುಗಳಿಂದ ಹಾಗೂ ಹಿರಿಯ ವಕೀಲರುಗಳಿಂದ ವಕೀಲರ ಭವನದಲ್ಲಿ ಹಮ್ಮಿಕೊಳ್ಳಲಾಗಿರುವ ತರಬೇತಿ ಕಾರ್ಯಕ್ರಮ ಉದ್ಗಾಟಿಸಿ ಮಾತನಾಡಿದರು.

850 ವಕೀಲರುಗಳಲ್ಲಿ ನಾಲ್ಕು ನೂರು ಯುವ ವಕೀಲರುಗಳಿದ್ದಾರೆ. ನೇಪಾಳದಲ್ಲಿ ಆಗಿರುವ ಘಟನೆಯನ್ನು ನೋಡಿದರೆ ಯುವ ಶಕ್ತಿಯ ಗಟ್ಟಿತನ ಎಂತಹದ್ದು, ಎನ್ನುವುದು ಗೊತ್ತಾಗುತ್ತದೆ. ಎಂತಹ ಸರ್ಕಾರವನ್ನಾದರೂ ಕಿತ್ತು ಹಾಕಬಹುದು. ನಿಮ್ಮಲ್ಲಿರುವ ಶಕ್ತಿಯನ್ನು ಸದ್ಬಳಕೆ ಮಾಡಿಕೊಂಡರೆ ಸುಂದರ ದೇಶ ಕಟ್ಟಬಹುದು. ನ್ಯಾಯಾಧೀಶರ ಪರೀಕ್ಷಾರ್ಥಿಗಳಿಗೆ ತರಬೇತಿ ಅಗತ್ಯವೇ ಎನ್ನುವ ಪ್ರಶ್ನೆ ಎಲ್ಲರಲ್ಲೂ ಮೂಡಬಹುದು. ಉಪ ರಾಷ್ಟ್ರಪತಿ ಚುನಾವಣೆಯಲ್ಲಿ ಹೇಗೆ ಮತಚಲಾಯಿಸಬೇಕೆಂದು ಲೋಕಸಭೆ ಹಾಗೂ ರಾಜ್ಯಸಭೆ ಚುನಾಯಿತ ಪ್ರತಿನಿಧಿಗಳಿಗೆ ತರಬೇತಿ ಹಮ್ಮಿಕೊಳ್ಳಲಾಗಿತ್ತು. ಆದಾಗ್ಯೂ ಹದಿನೈದು ಮತಗಳು ತಿರಸ್ಕøತಗೊಂಡಿರುವುದು ಮನಸ್ಸಿಗೆ ನೋವುಂಟು ಮಾಡುತ್ತದೆ. ಪ್ರತಿ ಮತಕ್ಕೂ ಬೆಲೆಯಿದೆ. ತರಬೇತಿ ಪಡೆದು ಪರೀಕ್ಷೆಗೆ ಸಿದ್ದರಾಗದಿದ್ದರೆ ಉತ್ತೀರ್ಣರಾಗುವುದು ಕಷ್ಟವಾಗುತ್ತದೆ ಎಂದು ಹೇಳಿದರು.

ನನ್ನನ್ನು ಸೇರಿಕೊಂಡು ಚಿತ್ರದುರ್ಗ ನ್ಯಾಯಾಲಯದಲ್ಲಿ ಹನ್ನೊಂದು ನ್ಯಾಯಾಧೀಶರುಗಳು ಸೇವೆ ಸಲ್ಲಿಸುತ್ತಿದ್ದೇವೆ. ನಮಗೆ ಗೊತ್ತಿರುವ ವಿಷಯವನ್ನು ತರಬೇತಿಯಲ್ಲಿ ನಿಮ್ಮ ಜೊತೆ ಹಂಚಿಕೊಳ್ಳುತ್ತೇವೆ. ಜಿಲ್ಲೆಯಿಂದ ಹೆಚ್ಚಿನ ನ್ಯಾಯಾಧೀಶರುಗಳು ನ್ಯಾಯಾಂಗ ಇಲಾಖೆಗೆ ಬರಬೇಕು. ಮೂರು ಹಂತದಲ್ಲಿ ಪರೀಕ್ಷೆಗಳು ನಡೆಯುತ್ತವೆ. ಕಾನೂನು ವಿಷಯಗಳ ತರಬೇತಿ ಜೊತೆ ಗಣಕಯಂತ್ರಗಳ ಬಗ್ಗೆಯೂ ನೀವುಗಳು ತಿಳಿದುಕೊಂಡಿದ್ದರೆ ಒಳ್ಳೆಯದು. ತರಬೇತಿಯಲ್ಲಿ ಭಾಗವಹಿಸಿ ಜ್ಞಾನ ಪಡೆದುಕೊಂಡರೆ ಪರೀಕ್ಷೆಗಷ್ಟೆ ಅಲ್ಲ. ವೃತ್ತಿಗೂ ಸಹಾಯವಾಗಲಿದೆ ಎಂದರು.

ನ್ಯಾಯಾಲಯದ ಕಾರ್ಯಕಲಾಪಗಳಲ್ಲಿ ಭಾಗವಹಿಸಿ ವಾದ-ವಿವಾದಗಳನ್ನು ವೀಕ್ಷಿಸಿ ಎಂದು ಕಿರಿಯ ವಕೀಲರುಗಳಿಗೆ ಸೂಚಿಸಿದ ನ್ಯಾಯಾಧೀಶರಾದ ರೋಣ್‍ವಾಸುದೇವ್ ನ್ಯಾಯಾಂಗ ಇಲಾಖೆಗೆ ತನ್ನದೆ ಆದ ಗೌರವವಿದೆ. ಸುಪ್ರೀಂಕೋರ್ಟ್ ಮಾರ್ಗದರ್ಶನದಂತೆ ನಡೆದುಕೊಳ್ಳಬೇಕು. ಅಶಿಸ್ತಿನಿಂದ ವರ್ತಿಸುವುದು ಸರಿಯಲ್ಲ ಎಂದು ನುಡಿದರು.

ವಕೀಲರ ಸಂಘದ ಅಧ್ಯಕ್ಷ ಹೆಚ್.ಎಸ್.ಮಹೇಶ್ವರಪ್ಪ ಮಾತನಾಡಿ ಎಪ್ಪತ್ತು ಯುವ ವಕೀಲರುಗಳು ಪರೀಕ್ಷೆ ತೆಗೆದುಕೊಂಡಿದ್ದೀರಿ. ಸಂಘದಿಂದ ಬೇಕಾದ ಎಲ್ಲಾ ರೀತಿಯ ಸಹಕಾರ ನೀಡಲು ಸಿದ್ದರಿದ್ದೇವೆ. ಒಮ್ಮೆ ಪರೀಕ್ಷೆಯಲ್ಲಿ ಫೇಲಾದೆವೆಂದು ಹಿಂದೆ ಸರಿಯುವುದು ಬೇಡ. ಸತತ ಪ್ರಯತ್ನದಿಂದ ಯಶಸ್ಸು ಕಾಣಬಹುದು. ವಕೀಲರ ಸಂಘದ ಚುನಾವಣೆಯಲ್ಲಿ ಎರಡು ಬಾರಿ ಸೋತಿದ್ದ ನಾನು ಎದೆಗುಂದದೆ ಮೂರನೇ ಸಾರಿ ಸ್ಪರ್ಧಿಸಿ ಗೆದ್ದಿದ್ದೇನೆ. ಗಣಕಯಂತ್ರಗಳ ಬಗ್ಗೆಯೂ ತರಬೇತಿ ನೀಡುವ ಕುರಿತು ಸಂಘದಲ್ಲಿ ಚರ್ಚಿಸುತ್ತೇನೆ. ಗುರಿ-ಆಸೆ, ಆಮಿಷ ದೊಡ್ಡದಿರಬೇಕೆಂದು ಪರೀಕ್ಷಾರ್ಥಿಗಳಿಗೆ ಸಲಹೆ ನೀಡಿದರು.

1 ನೇ ಹೆಚ್ಚುವರಿ ನ್ಯಾಯಾಧೀಶರಾದ ವೀರಣ್ಣ ಸೋಮಶೇಖರ್, ಎರಡನೆ ಹೆಚ್ಚುವರಿ ನ್ಯಾಯಾಧೀಶರಾದ ಗಂಗಾಧರ್ ಅಡಪದ್, ಹಿರಿಯ ಸಿವಿಲ್ ನ್ಯಾಯಾಧೀಶರಾದ ಮಮತ ಡಿ. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ.ವಿಜಯ್, ಒಂದನೆ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ಚೈತ್ರ ಎಂ. ಎರಡನೆ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ಉಜ್ವಲ ವೀರಣ್ಣ ಸಿದ್ದಣ್ಣನವರ್, ಪ್ರಧಾನ ಸಿವಿಲ್ ನ್ಯಾಯಾಧೀಶರು ಕಿರಿಯ ವಿಭಾಗದ ರಶ್ಮಿ ಎಸ್.ಮರಡಿ, ಒಂದನೆ ಅಪರ ಸಿವಿಲ್ ನ್ಯಾಯಾಧೀಶರಾದ ಪೂಜಾ ಬೆಳಕೇರಿ, ಎರಡನೆ ಅಪರ ಸಿವಿಲ್ ನ್ಯಾಯಾಧೀಶರಾದ ನಿಖಿತ ಎಸ್.ಅಕ್ಕಿ, ಮೂರನೆ ಅಪರ ಸಿವಿಲ್ ನ್ಯಾಯಾಧೀಶರಾದ ಸಹನ ಆರ್.
ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಹೆಚ್.ಓ.ಜಗದೀಶ್ ಗುಂಡೇರಿ, ಉಪಾಧ್ಯಕ್ಷೆ ಸಾವಿತ್ರಮ್ಮ, ಖಜಾಂಚಿ ಸೋಮಶೇಖರ್‍ರೆಡ್ಡಿ, ಸಹ ಕಾರ್ಯದರ್ಶಿ ಹೆಚ್.ಟಿ.ಕಾಂತರಾಜು ಇವರುಗಳು ವೇದಿಕೆಯಲ್ಲಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now