Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಕರ್ನಾಟಕ ದಲಿತ ಸಂಘರ್ಷ ಸಮಿತಿ ಪರಿವರ್ತನಾವಾದದ ಜಿಲ್ಲಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 11 : ಕರ್ನಾಟಕ ದಲಿತ ಸಂಘರ್ಷ ಸಮಿತಿ ಪರಿವರ್ತನಾವಾದ ಜಿಲ್ಲಾ ಸಮಿತಿಗೆ ರಾಜ್ಯ ಪ್ರಧಾನ ಸಂಚಾಲಕರಾದ ಎಂ.ಗೋವಿಂದರಾಜುರವರ ಆದೇಶದ ಮೇರೆಗೆ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

ಜಿಲ್ಲಾಧ್ಯಕ್ಷರಾಗಿ ಕೋದಂಡರಾಮ ಪಿ. ಮಹಿಳಾ ಜಿಲ್ಲಾಧ್ಯಕ್ಷರಾಗಿ ಆರ್.ಭಾಗ್ಯಮ್ಮ, ಮಹಿಳಾ ಘಟಕದ ಸಂಘಟನಾ ಸಂಚಾಲಕರಾಗಿ ಭಾರತಿ, ಸಂಘಟನಾ ಸಂಚಾಲಕರಾಗಿ ಶಿಲ್ಪ ಮಂಜುನಾಥ್ ಹೆಚ್.ಆರ್. ಕಣುಮಪ್ಪ, ತಿಪ್ಪೇಸ್ವಾಮಿ, ಯೋಗೀಶ್, ವೀರೇಶ್, ಜಯಣ್ಣ, ಉಮೇಶ್, ಗಿರಿಜಮ್ಮ, ಶಿವಮ್ಮ, ಅಂಬಿಕಾ, ರಾಘವೇಂದ್ರ, ಪುಟ್ಟರಾಜು, ಹನುಮೇಶ್, ಅಲ್ಪಸಂಖ್ಯಾತ ಜಿಲ್ಲಾ ಘಟಕದ ಸಂಚಾಲಕರಾಗಿ ದಾದಾಪೀರ್ ಇವರುಗಳನ್ನು ನೇಮಕಗೊಳಿಸಲಾಯಿತು.

ಪದಾಧಿಕಾರಿಗಳನ್ನು ಆಯ್ಕೆಗೊಳಿಸಿ ಮಾತನಾಡಿದ ಕರ್ನಾಟಕ ದಲಿತ ಸಂಘರ್ಷ ಸಮಿತಿ ಪರಿವರ್ತನಾವಾದದ ರಾಜ್ಯ ಬೆಂಗಳೂರು ವಿಭಾಗೀಯ ಪ್ರಧಾನ ಸಂಚಾಲಕ
ಕೆ.ಮಂಜುನಾಥ್ ಹೆಗ್ಗೆರೆ ಬುದ್ದ, ಬಸವ, ಅಂಬೇಡ್ಕರ್‍ರವರ ತತ್ವ ಸಿದ್ದಾಂತದ ಮೇಲೆ ದೀನ ದಲಿತರ, ಶೋಷಿತರ, ಧ್ವನಿಯಿಲ್ಲದವರ ಪರವಾಗಿ ಕೆಲಸ ಮಾಡುತ್ತಿದೆ. ದಲಿತರ ಮೇಲೆ ಎಲ್ಲಿಯೆ ದೌರ್ಜನ್ಯ, ದಬ್ಬಾಳಿಕೆ, ಅನ್ಯಾಯವಾದರೆ ಪದಾಧಿಕಾರಿಗಳು ಹೋರಾಡಬೇಕು. ಅದಕ್ಕೆ ನಮ್ಮ ಸಂಘಟನೆ ಸದಾ ಬೆಂಬಲವಾಗಿರುತ್ತದೆ. ಮುಂದಿನ ದಿನಗಳಲ್ಲಿ ಚಿತ್ರದುರ್ಗದಲ್ಲಿ ರಾಜ್ಯ ಮಟ್ಟದ ಬೃಹತ್ ಸಮಾವೇಶ ನಡೆಸಲಾಗುವುದೆಂದು ಹೇಳಿದರು.

ಹೆಚ್.ಎಸ್.ಮಾರುತೇಶ್, ಹನುಮೇಶ್ ಕೆ. ಉಮೇಶ್ ವಿ, ಆರ್.ಭಾಗ್ಯಮ್ಮ, ಹೆಚ್.ಆರ್.ಮಂಜುನಾಥ್, ಪುಟ್ಟರಾಜ್, ಹೆಚ್.ರಾಘವೇಂದ್ರ ಇವರುಗಳು ಈ ಸಂದರ್ಭದಲ್ಲಿ ಹಾಜರಿದ್ದರು.

 

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...