Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಿದ್ದರಾಮಯ್ಯ ಸರ್ಕಾರ ಏನು ಮಾಡಿಲ್ಲವೆಂಬ ತಪ್ಪು ಮಾಹಿತಿ ನೀಡುತ್ತಿದೆ : ಬಿಜೆಪಿ ವಿರುದ್ಧ ಸಿದ್ದರಾಮಯ್ಯ ಗರಂ..!

Facebook
Twitter
Telegram
WhatsApp

ಬೆಂಗಳೂರು: ಮೇಕೆದಾಟು ಯೋಜನೆ ಬರೀ ರಾಜಕೀಯ ಪಾದಯಾತ್ರೆ, ಅವರ ಸರ್ಕಾರವೇ ಅಧಿಕಾರದಲ್ಲಿದ್ದಾಗಲೇ ಇದನ್ನ ಅನುಷ್ಠಾನಗೊಳಿಸಬಹುದಾಗಿತ್ತು ಅಂತ ಬಿಜೆಪಿಗರು ಈಗಾಗಲೇ ಸಾಕಷ್ಟು ಬಾರಿ ಹೇಳಿದ್ದರು. ಆರೋಪಿಸಿದ್ದರು. ಇದೀಗ ಆ ಆರೋಪಕ್ಕೆ ತಿರುಗೇಟು ನೀಡಿರುವ ಮಾಜಿ ಸಿಎಂ ಸಿದ್ದರಾಮಯ್ಯ, ಎಲ್ಲಾ ತಪ್ಪು ಮಾಹಿತಿ ನೀಡ್ತಿದ್ದಾರೆಂದು ಆಕ್ರೋಶ ಹೊರ ಹಾಕಿದ್ದಾರೆ.

ಜೊತೆಗೆ ರಾಜ್ಯ ಸರ್ಕಾರ ವಿಧಿಸಿರುವ ಕರ್ಫ್ಯೂ ಬಗ್ಗೆಯೂ ಕಿಡಿಕಾರಿದ್ದಾರೆ. ಇಂದಿನಿಂದ ಮೇಕೆದಾಟು ಯೋಜನೆಗಾಗಿ ಶುರುವಾದ ಪಾದಯಾತ್ರೆಗೆ ಚಾಲನೆ ನೀಡಿದ ಬಳಿಕ ಸಿದ್ದರಾಮಯ್ಯ ಅವರು ಮಾತನಾಡಿದ್ದು, ಯೋಜನೆ ಜಾರುಗೆ ತರಲು ವಿಳಂಬ ಮಾಡುತ್ತಿರುವುದಲ್ಲದೆ, ಜನರಿಗೆ ತಪ್ಪು ಮಾಹಿತಿ ನೀಡುತ್ತಿದ್ದಾರೆ. ಬಿಜೆಪಿ ಅಧಿಕಾರಕ್ಕೆ ಬಂದು ಎರಡು ವರ್ಷಗಳ ಮೇಲಾಗುತ್ತಿದೆ. ಆದರೂ ಯೋಜನೆ ಜಾರಿಗೆ ತರಲು ವಿಳಂಬ ಮಾಡುತ್ತಿದೆ. ಅಷ್ಟೇ ಅಲ್ಲದೆ ಸಿದ್ದರಾಮಯ್ಯ ಸರ್ಕಾರವಿದ್ದಾಗ ಏನು ಮಾಡಿಲ್ಲ ಎಂಬ ತಪ್ಪು ಮಾಹಿತಿಯನ್ನು ನೀಡುತ್ತಿದೆ.

2013 ರಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಾಗ ಆ ಯೋಜನೆ ಬಗ್ಗೆ ಸಭೆ ಮಾಡಿ, ಡಿಪಿಆರ್ ಮಾಡಬೇಕೆಂದು ತೀರ್ಮಾನಿಸಿ, ಎಲ್ಲವನ್ನು ತಯಾರಿ ಮಾಡಿಕೊಂಡಿದ್ದೆವು. ಡಿಪಿಆರ್ ಕೂಡ ಸಿದ್ಧವಾಗಿತ್ತು. ಆಗಿನ ಜಲಸಂಪನ್ಮೂಲ ಸಚಿವರಾಗಿದ್ದ ಡಿಕೆ ಶಿವಕುಮಾರ್, ರಿವೈಸ್ಡ್ ಡಿಪಿಆರ್ ಸಲ್ಲಿಸಿದ್ದಾರೆ. ನಮ್ಮ ಕಾಲದಲ್ಲಿ ಯಾವುದೇ ವಿಳಂಬವಾಗಿಲ್ಲ. ಬಿಎಸ್ವೈ, ಸದಾನಂದಗೌಡ, ಶೆಟ್ಟರ್ ಸಿಎಂ ಆಗಿದ್ದವರು. ಅವರ್ಯಾರು ಆ ಯೋಜನೆಯನ್ನ ಕೈಗೆತ್ತಿಕೊಳ್ಳಲೇ ಇಲ್ಲ ಎಂದು ಬಿಜೆಪಿ ವಿರುದ್ಧ ಆಕ್ರೋಶಗೊಂಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ : ಡಿಕೆ ಶಿವಕುಮಾರ್ ರುವಾರಿ.. ವೈರಲ್ ಆದ ವಿಡಿಯೋಗಳ ನನ್ನ ಪೆನ್ ಡ್ರೈವ್ ನಲ್ಲಿ ಇರೋದಲ್ಲ ಎಂದ ದೇವರಾಜೇಗೌಡ..!

ಕಳೆದ ಕೆಲವು ದಿನಗಳಿಂದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋಗಳ ಪೆನ್ ಡ್ರೈವ್ ಹಾಸನದ ಹಾದಿ ಬೀದಿಯಲ್ಲಿ ಸಿಕ್ಕಿದ್ದಲ್ಲದೆ, ರಾಷ್ಟ್ರಮಟ್ಟದಲ್ಲೂ ಚರ್ಚೆಗೆ ಗ್ರಾಸವಾಗಿದೆ. ಈ ಪ್ರಕರಣ ಸಂಬಂಧ ಈಗಾಗಲೇ ಪ್ರಜ್ವಲ್ ರೇವಣ್ಣ ಅವರಿಗೆ ನೋಟೀಸ್

ಮುರುಘಾಮಠದಲ್ಲಿ ಮೇ 8 ರಿಂದ 10 ರವರೆಗೆ ಬಸವ ಜಯಂತಿ ,:  ಕಾರ್ಯಕ್ರಮಗಳ ವಿವರ ಇಂತಿದೆ..!

ಸುದ್ದಿಒನ್,ಚಿತ್ರದುರ್ಗ, ಮೇ. 06 : ನಗರದ ಶ್ರೀ ಮುರುಘರಾಜೇಂದ್ರ ಬೃಹನ್ಮಠದಲ್ಲಿ ಮೇ 8 ರಿಂದ 10ರವರೆಗೆ ಮಹಾಮಾನವತಾವಾದಿ ಸಾಂಸ್ಕøತಿಕ ನಾಯಕ ಶ್ರೀ ಬಸವೇಶ್ವರ ಜಯಂತಿ ನಿಮಿತ್ತ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಚಿತ್ರದುರ್ಗ ಆಕಾಶವಾಣಿಯಲ್ಲಿ ಮೇ

ನಾಳೆ ಬರಗೇರಮ್ಮ-ತಿಪ್ಪಿನಘಟ್ಟಮ್ಮ ಭೇಟಿ ಉತ್ಸವ :   ಸಿದ್ದತೆ ಹೇಗಿದೆ ?

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಮೇ.06 : ಸಹೋದರಿಯರ ನಡುವೆ ಜಗಳ, ಮುನಿಸು ಇರುವುದು ಸಹಜ. ಆದ್ರೆ, ಕೋಟೆನಾಡಿನಲ್ಲಿ ಮಾತ್ರ ಮುನಿದು

error: Content is protected !!