ಸುದ್ದಿಒನ್, ಸೆಪ್ಟೆಂಬರ್. 13 : ಹಾಸನ ತಾಲೂಕಿನ ಮೊಸಳೆ ಹೊಸಹಳ್ಳಿ ಗ್ರಾಮದಲ್ಲಿ ಗಣೇಶ ಮೆರವಣಿಗೆ ಸಾವಿನ ಮೆರವಣಿಗೆಯಾಗಿದೆ. ಡಿಜೆ ಸೌಂಡಿಗೆ ಸ್ಟೆಪ್ ಹಾಕುತ್ತಿದ್ದವರ ಮೇಲೆ ಟ್ರಕ್ ಹರಿದು 9 ಜನರು ಸಾವನ್ನಪ್ಪಿದ್ದಾರೆ. ಈ ದುರಂತಕ್ಕೆ ಚಾಲಕರ ನಿರ್ಲಕ್ಷ್ಯವೇ ಕಾರಣ ಎನ್ನಲಾಗಿದೆ. ಬೈಕ್ ಸವಾರ ಬೇಕಾಬಿಟ್ಟಿಯಾಗಿ ಬಂದದ್ದು ಹಾಗೂ ಲಾರಿ ಚಾಲಕ ನಿರ್ಲಕ್ಷ್ಯವೇ ಕಾರಣವಾಗಿದೆ ಎನ್ನಲಾಗಿದೆ.
ಈ ಸಂಬಂಧ ಈಗಾಗಲೇ ಚಾಲಕನನ್ನು ಸ್ಥಳೀಯರು ಹಿಗ್ಗಾಮುಗ್ಗ ಥಳಿಸಿದ್ದಾರೆ. ಅಪಘಾತ ಮಾಡಿದ ವಾಹನ ಮಹಾರಾಷ್ಟ್ರ ಮೂಲದ್ದಾಗಿದೆ. ಚಾಲಕ ಹೊಳೆನರಸೀಪುರ ತಾಲೂಕಿನ ಕಟ್ಟೆಬೆಳಗುಲಿ ಗ್ರಾಮದ ಭುವನೇಶ್ ಕೂಡ ಗಾಯಗೊಂಡಿದ್ದಾನೆ. ಸದ್ಯ ಪೊಲೀಸರು ಪ್ರಕರಣ ಸಂಬಂಧ ಲಾರಿ ಚಾಲಕನ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಹಾಸನ ದುರಂತಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಕಂಬನಿ ಮಿಡಿದಿದ್ದಾರೆ. ಕರ್ನಾಟಕದ ಹಾಸನದಲ್ಲಿ ನಡೆದ ಅಪಘಾತವು ಹೃದಯ ವಿದ್ರಾವಕವಾಗಿದೆ. ಗಾಯಗೊಂಡವರು ಆದಷ್ಟು ಬೇಗ ಚೇತರಿಸಿಕೊಳ್ಳಬೇಕೆಂದು ಹಾರೈಸುತ್ತೇನೆ. ಮೃತರ ಪ್ರತಿ ಸಂಬಂಧಿಕರಿಗೆ PMNRF ನಿಂದ 2 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು. ಹಾಗೂ ಗಾಯಾಳುಗಳಿಗೆ 50 ಸಾವಿರ ರೂಪಾಯಿ ನೀಎಲಾಗುವುದು ಎಂದು ತಿಳಿಸಿದ್ದಾರೆ.
ಈ ದುರ್ಘಟನೆಯಲ್ಲಿ ಸಾವನ್ನಪ್ಪಿರುವವರೆಲ್ಲಾ ಇಂಜಿನಿಯರಿಂಗ್ ವಿದ್ಯಾರ್ಥಿಗಳು ಎಂಬ ನೋವಿದೆ. ಅದರಲ್ಲೂ ಹುಟ್ಟುಹಬ್ಬ ಹಿನ್ನೆಲೆಯಲ್ಲಿ ಹಾಸ್ಟೆಲ್ನಲ್ಲಿ ಸ್ನೇಹಿತರೆಲ್ಲ ಸೇರಿ ಬರ್ತಡೇ ಸೆಲೆಬ್ರೇಸಷನ್ ಕೂಡ ಮಾಡಿದ್ರು. ಆನಂತರ ಹಾಸ್ಟೆಲ್ಗೆ ಬಂದು ಗಣಪತಿ ವಿಸರ್ಜನೆಗೆ ಹೋದಾಗ ದುರಂತ ಅಂತ್ಯಕಂಡಿದ್ದಾನೆ. ಮೃತ ಮಿಥನ್ ಮೂಲತಃ ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲ್ಲೂಕು ಗವಿರಂಗನಾಥಪುರ ನಿವಾಸಿ. ಹಾಸನ ಇಂಜಿನಿಯರಿಂಗ್ ಕಾಲೇಜಿನಲ್ಲಿ ಓದುತ್ತಿದ್ದ. ಗವಿರಂಗಾಪುರ ಗ್ರಾಮದ ನಾಗರಾಜ್ಗೆ ಒಬ್ಬನೇ ಮಗ ಮಿಥುನ್.


















