Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ ಹಿಂದೂ ಮಹಾಗಣಪತಿ ಶೋಭಾ ಯಾತ್ರೆಯಲ್ಲಿ ನಡೆದ ಹರಾಜು ಪ್ರಕ್ರಿಯೆ ಹೇಗಿತ್ತು ?

---Advertisement---

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 13 : ಹಿಂದೂ ಮಹಾಗಣಪತಿ ಉತ್ಸವದ ಶೋಭಾಯಾತ್ರೆಗೂ ಮೊದಲು ಭಗವಾಧ್ವಜ, ಹೂವಿನ ಹಾರ ಹಾಗೂ ತಿರುಪತಿ ದೇವಸ್ಥಾನದ ಮಾದರಿ ಪ್ರತಿಕೃತಿ ಹರಾಜು ಪ್ರಕ್ರಿಯೆ ನಡೆಸಲಾಯಿತು.

ಭಗವಾ ಧ್ವಜವನ್ನು ಬಿಜೆಪಿ ಮುಖಂಡ ಹನುಮಂತೇಗೌಡ 6 ಲಕ್ಷ ರೂ.ಗಳಿಗೆ ಹರಾಜಿನಲ್ಲಿ ಪಡೆದುಕೊಂಡರು. ತಿರುಪತಿ ತಿಮ್ಮಪ್ಪ ದೇವಸ್ಥಾನದ ಮಾದರಿಯನ್ನು ವಜ್ರ ಮಹೇಶ್ 5.25 ಲಕ್ಷ ರೂ.ಗಳಿಗೆ ಹರಾಜಿನಲ್ಲಿ ಪಡೆದುಕೊಂಡರು.

ಗಣಪತಿಯ ಫಲಾಹಾರವನ್ನು ಐಶ್ವರ್ಯಾ ಗ್ರೂಪ್ ಕಿರಣ್ ಕುಮಾರ್ 1.25 ಲಕ್ಷ ರೂ.ಗಳಿಗೆ ಪಡೆದುಕೊಂಡರು.

ಕೈಯಲ್ಲಿ ರಚಿಸಿರುವ ಗಣಪತಿ ಕಲಾಕೃತಿಯನ್ನು ಮಂಜುನಾಥ್ ಎಂಬುವವರು 1.05 ಲಕ್ಷ ರೂ.ಗಳಿಗೆ ಪಡೆದುಕೊಂಡರು.

ಗಣಪತಿಯ ಹೂವಿನ ಹಾರವನ್ನು ಚಿತ್ರಹಳ್ಳಿ ಲವಕುಮಾ‌ರ್ 1 ಲಕ್ಷ ರೂ.ಗಳಿಗೆ ಹರಾಜಿನಲ್ಲಿ ಪಡೆದುಕೊಂಡರು.

ಈ ಸಂದರ್ಭದಲ್ಲಿ ಶಿವಲಿಂಗಾನಂದ ಶ್ರೀಗಳು , ಶಾಂತವೀರ ಶ್ರೀಗಳು , ಶ್ರೀ ಮಾದಾರ ಚನ್ನಯ್ಯ ಶ್ರೀಗಳು, ಭಗೀರಥ ಶ್ರೀಗಳು, ಇಮ್ಮಡಿ ಸಿದ್ದರಾಮೇಶ್ವರ ಶ್ರೀಗಳು, ಸರ್ದಾರ್ ಸೇವಾಲಾಲ್ ಶ್ರೀಗಳು, ಬಸವ ಮಾಚಿದೇವ ಶ್ರೀಗಳು, ವಿಎಸ್ಪಿ ಮುಖಂಡರಾದ ಷಡಾಕ್ಷರಪ್ಪ, ಡಾ.ಮಂಜುನಾಥ್, ಎಂಎಲ್ಸಿ ಕೆ.ಎಸ್.ನವೀನ್, ಜಿ ಎಸ್ ಅನಿತಕುಮಾರ್,ಡಾ.ಸಿದ್ಧಾರ್ಥ ಇತರರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...