Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರೋಟರಿ ಕ್ಲಬ್ ಚಿನ್ಮುಲಾದ್ರಿ ವತಿಯಿಂದ ಶಿಕ್ಷಕರಿಗೆ ಸನ್ಮಾನ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 14 : ರೋಟರಿ ಬಾಲಭವನದಲ್ಲಿ ಇತ್ತೀಚೆಗೆ ಶಿಕ್ಷಕರ ದಿನಾಚರಣೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ ಹಮ್ಮಿಕೊಳ್ಳಲಾಗಿತ್ತು.

ರೋಟರಿ ಕ್ಲಬ್ ಚಿನ್ಮುಲಾದ್ರಿ ಅಧ್ಯಕ್ಷರಾದ ರೊ.ದಿಲ್‍ಶಾದ್ ಉನ್ನಿಸ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡುತ್ತ ಡಾ.ಸರ್ವಪಲ್ಲಿ ರಾಧಾಕೃಷ್ಣನ್‍ ರವರ ಹುಟ್ಟುಹಬ್ಬವನ್ನು ಪ್ರತಿ ವರ್ಷ ಸೆ.5 ರಂದು ಶಿಕ್ಷಕರ ದಿನಾಚರಣೆಯನ್ನಾಗಿ ಆಚರಿಸಲಾಗುತ್ತದೆ. ಶಿಕ್ಷಕ ವೃತ್ತಿಯಿಂದ ದೇಶದ ಸರ್ವೋನ್ನತ ರಾಷ್ಟ್ರಪತಿ ಹುದ್ದೆಯನ್ನೇರಿದ ಡಾ.ಸರ್ವಪಲ್ಲಿ ರಾಧಾಕೃಷ್ಣನ್‍ರವರ ಆದರ್ಶಗಳನ್ನು ಪ್ರತಿಯೊಬ್ಬ ಶಿಕ್ಷಕರು ಮೈಗೂಡಿಸಿಕೊಳ್ಳುವಂತೆ ತಿಳಿಸಿದರು.

ಜಿಲ್ಲಾ ಕಾರ್ಮಿಕ ಅಧಿಕಾರಿ ಅನಿಲ್‍ಗಟ್ಟಿ ಸಮಾರಂಭ ಉದ್ಗಾಟಿಸಿ ಮಾತನಾಡುತ್ತ ರೋಟರಿ ಕ್ಲಬ್ ಚಿನ್ಮೂಲಾದ್ರಿ ಶಿಕ್ಷಕರ ದಿನಾಚರಣೆ ಆಚರಿಸುವ ಮೂಲಕ ಶಿಕ್ಷಕರುಗಳನ್ನು ಸನ್ಮಾನಿಸಿ ಪ್ರಶಸ್ತಿ ನೀಡುತ್ತಿರುವುದು ನಿಜಕ್ಕೂ ಗುರುಗಳನ್ನು ಗೌರವಿಸಿದಂತಾಗಿದೆ. ಡಾ.ಸರ್ವಪಲ್ಲಿ ರಾಧಾಕೃಷ್ಣನ್‍ರವರ ಜನ್ಮದಿನವನ್ನು ಪ್ರತಿ ವರ್ಷವೂ ಸೆ. 5 ರಂದು ಶಿಕ್ಷಕರ ದಿನಾಚರಣೆಯನ್ನಾಗಿ ಆಚರಿಸುತ್ತಿರುವುದು ಅರ್ಥಪೂರ್ಣ ಎಂದು ಹೇಳಿದರು.

ಸೈಯದ್ ಸ್ವಾಲೇಹ, ಅಡ್ವೆಂಚರ್ ಸ್ಪೋಟ್ರ್ಸ್ ತರಬೇತುದಾರ ನ್ಯಾಯವಾದಿ ಬಿ.ಟಿ.ಬಸವರಾಜು, ಶಿಕ್ಷಕಿ ನಸೀಮ್ ಉನ್ನಿಸಾ, ದೈಹಿಕ ಶಿಕ್ಷಕ ಬೋರನಾಯ್ಕ ಇವರುಗಳನ್ನು ಸನ್ಮಾನಿಸಲಾಯಿತು.  ರೋಟರಿ ಕ್ಲಬ್ ಚಿನ್ಮೂಲಾದ್ರಿ ಉಪಾಧ್ಯಕ್ಷ ರೊ.ಗುರುಮೂರ್ತಿ ಎಸ್.ವಿ. ಕಾರ್ಯದರ್ಶಿ ಅಮೃತ ಸಂತೋಷ್ ಇವರುಗಳು ವೇದಿಕೆಯಲ್ಲಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now