Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಡಿಸಿಎಂ ಆಗಿರುವ ಡಿಕೆಶಿ ಅವರು ತಂದೆ ಆಸೆಯಂತೆ ಹೋಗಿದ್ದರೆ ಏನಾಗ್ತಾ ಇದ್ರು ಗೊತ್ತಾ..?

ಡಿಕೆ ಶಿವಕುಮಾರ್
---Advertisement---

ಬೆಂಗಳೂರು: ಡಿಕೆ ಶಿವಕುಮಾರ್ ಇಂದು ರಾಜಕೀಯದಲ್ಲಿ ಬಹಳ ಗಟ್ಟಿಯಾಗಿ ಬೆಳೆದಿರುವ ವ್ಯಕ್ತಿ. ಪಕ್ಷವನ್ನ ಕಟ್ಟಿ ಬೆಳೆಸುವ ದೊಡ್ಡ ಸಾಮರ್ಥ್ಯವಿರುವ ಶಕ್ತಿ. ಆದರೆ ಡಿಕೆ ಶಿವಕುಮಾರ್ ಅವರು ರಾಜಕೀಯಕ್ಕೆ ಬಾರದೆ ಹೋಗಿದ್ದರೆ ಇಂಜಿನಿಯರ್ ಆಗಿ ಇರ್ತಾ ಇದ್ರು. ಕನಸುಗಳಿದ್ದಾಗ, ಹಠವಿದ್ದಾಗ ದೊಡ್ಡಮಟ್ಟದಲ್ಲಿಯೇ ಸಾಧನೆ ಮಾಡಬಹುದು ಎಂಬುದಕ್ಕೆ ಡಿಕೆ ಶಿವಕುಮಾರ್ ಅವರೇ ಸಾಕ್ಷಿ. ಅವರನ್ನ ಇಂಜಿನಿಯರ್ ಮಾಡಬೇಕೆಂಬುದು ಅವರ ತಂದೆಯವರ ಆಸೆಯಾಗಿತ್ತು. ಆ ಬಗ್ಗೆ ಡಿಕೆ ಶಿವಕುಮಾರ್ ಅವರು ಮನಬಿಚ್ಚಿ ಮಾತನಾಡಿದ್ದಾರೆ.

ಇಂದು ಇಂಜಿನಿಯರ್ಸ್ ದಿನದ ಪ್ರಯುಕ್ತ ಬೆಂಗಳೂತಿನ ಕೆ.ಆರ್.ಸರ್ಕಲ್ ನಲ್ಲಿರುವ ವಿಶ್ವೇಶ್ಚರಯ್ಯ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ಬಳಿಕ ಮಾತನಾಡಿದ ಅವರು, ನಮ್ಮಪ್ಪನಿಗೆ ನಾನು ಇಂಜಿನಿಯರ್ ಆಗಬೇಕು ಅಂತ ಆಸೆಯಿತ್ತು. ಆದರೆ ನನಗೆ ಇಂಜಿನಿಯರ್ ಕೋರ್ಸ್ ಮಾಡುವುದಕ್ಕೆ ಆಗಲಿಲ್ಲ.ಆದರೆ ಇಂಜಿನಿಯರ್ ಗಳನ್ನು ತಯಾರು ಮಾಡುವ ಕಾಲೇಜನ್ನು ಸ್ಥಾಪಿಸಿದ್ದೇನೆ. ನನ್ನ ಇಬ್ಬರು ಮಕ್ಕಳು ಇಂಜಿನಿಯರ್ಸ್. ನಾನು ಜಲಸಂಪನ್ಮೂಲ, ಇಂಧನ ಇಲಾಖೆಯಲ್ಲಿ ಇಂಜಿನಿಯರ್ಸ್ ಜೊತೆಗೆ ಕೆಲಸ ಮಾಡಿದ್ದೇನೆ. ಅವರ ಕೆಲಸ ಕಾರ್ಯಗಳ ಬಗ್ಗೆ ನನಗೆ ಅರಿವು ಇದೆ ಎಂದು ತಮ್ಮ ಮನದಾಳದ ಬಗ್ಗೆ ಹಂಚಿಕೊಂಡಿದ್ದಾರೆ.

ಸದ್ಯ ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಉಪ ಮುಖ್ಯಮಂತ್ರಿಯಾಗಿ ಕಾರ್ಯ ನಿರ್ವಹಿಸ್ತಾ ಇದ್ದಾರೆ. ಇದೇ ಅಧಿಕಾರದ ಅವಧಿಯಲ್ಲಿ ಸಿಎಂ ಕೂಡ ಆಗ್ತಾರೆ ಎಂಬ ಮಾತಿದೆ. ಆ ವಿಚಾರ ಆಗಾಗ ಸದ್ದು‌ ಮಾಡಿ ತಣ್ಣಗಾಗುತ್ತೆ. ಅವರು ಮುಖ್ಯಮಂತ್ರಿ ಆಗ್ತಾರಾ ಹೇಗೆ ಎಂಬುದನ್ನು ಕಾದು ನೋಡಬೇಕಿದೆ. ಆದರೂ ಇಂತಹ ಸಂದರ್ಭದಲ್ಲಿ ಅವರ ಬಾಲ್ಯ, ಓದು, ಆಸೆಗಳ ಬಗ್ಗೆ ಮನಬಿಚ್ಚಿ ಮಾತನಾಡುವುದು ಅವರ ಬೆಂಬಲಿಗರು, ಅಭಿಮಾನಿಗಳಿಗೆ ಖುಷಿಯಾಗಿಸುತ್ತೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now