ಮಾಲೂರು ಕಾಂಗ್ರೆಸ್ ಶಾಸಕ ಕೆ.ವೈ.ನಂಜೇಗೌಡ ಅವರ ಶಾಸಕತ್ವವನ್ನು ಹೈಕೋರ್ಟ್ ಅಸಿಂಧುಗೊಳಿದೆ. ನಾಲ್ಕು ವಾರಗಳಲ್ಲಿ ಮರು ಮತ ಎಣಿಕೆಗೆ ಸೂಚನೆಯನ್ನು ನೀಡಿದೆ. ಜಿಲ್ಲಾ ಚುನಾವಣಾ ಅಧಿಕಾರಿ ಮತ ಎಣಿಕೆಯ ವಿಡಿಯೋವನ್ನು ಸಲ್ಲಿಸಿಲ್ಲ. ಹೀಗಾಗಿ ಜಿಲ್ಲಾ ಚುನಾವಣಾಧಿಕಾರಿ ವಿರುದ್ಧವೂ ಕ್ರಮ ಕೈಗೊಳ್ಳಬೇಕೆಂದು ಸೂಚನೆಯನ್ನ, ನ್ಯಾಯಮೂರ್ತಿ ಆರ್ ದೇವದಾಸ್ ಅವರಿದ್ದ ಪೀಠ ಮಹತ್ವದ ಆದೇಶವನ್ನ ಹೊರಡಿಸಿದೆ. ಕೇವಲ 248 ಮತಗಳ ಅಂತರದಿಂದ ನಂಜೇಗೌಡ ಅವರು ಗೆದ್ದಿದ್ದರು. ಹೀಗಾಗಿ ಬಿಜೆಪಿ ಅಭ್ಯರ್ಥಿ ಮಂಜುನಾಥ್ ಅವರು ದೂರನ್ನು ದಾಖಲಿಸಿದ್ದರು. ಕಳೆದ ಎರಡು ವರ್ಷದಿಂದ ಈ ಸಂಬಂಧ ವಾದ ಪ್ರತಿವಾದ ನಡೆಯುತ್ತಲೆ ಇತ್ತು. ಕೊನೆಗೂ ಹೈಕೋರ್ಟ್ ತೀರ್ಪು ನೀಡಿದೆ. ಆದರೆ ಇದರ ನಡುವೆ 30 ದಿನಗಳ ತಡೆಯನ್ನು ನೀಡಿದೆ.
ಏನಿದು ಮಾಲೂರು ಕೇಸ್..?
ಮತ ಎಣಿಕೆ ಕೇಂದ್ರದಲ್ಲಿ ಸಮರ್ಪಕ ವ್ಯವಸ್ಥೆ ಮಾಡಿರಲಿಲ್ಲ.15 ಅಭ್ಯರ್ಥಿಗಳ ಪರ ಏಜೆಂಟರಿಗೂ ವ್ಯವಸ್ಥೆ ಕಲ್ಪಿಸಿರಲಿಲ್ಲ. ಒಂದೇ ಕೊಠಡಿಯಲ್ಲಿ ಮತ ಎಣಿಕೆ ನಡೆಯಬೇಕಿತ್ತು. ಆದರೆ ಎರಡು ಪ್ರತ್ಯೇಕ ಕೊಠಡಿಯಲ್ಲಿ ಮತ ಎಣಿಕೆ ನಡೆದಿತ್ತು. ಮತ ಎಣಿಕೆ ನಡೆದದ್ದರ ವಿಡಿಯೋ ರೆಕಾರ್ಡ್ ಅನ್ನು ಕೂಡ ಜಿಲ್ಲಾ ಚುನಾವಣಾ ಅಧಿಕಾರಿಗೆ ಸಲ್ಲಿಸಿರಲಿಲ್ಲ. ಹೀಗಾಗಿ ಜಿಲ್ಲಾ ಚುನಾವಣಾ ಅಧಿಕಾರು ವಿರುದ್ಧವೂ ಕ್ರಮಕ್ಕೆ ಸೂಚನೆ ನೀಡಲಾಗಿದೆ.

ಈ ಸಂಬಂಧ ಬಿಜೆಪಿ ಅಭ್ಯರ್ಥಿಯಾಗಿದ್ದ ಮಂಜುನಾಥ್ ಮಾತನಾಡಿ, ನಮ್ಮದು ತಡವಾಯ್ತು ಅಷ್ಟರ. ನ್ಯಾಯಾಲಯದ ವ್ಯವಸ್ಥೆ ಮೇಲೆ ನಮಗೂ ನಂಬಿಕೆ ಇತ್ತು. ಅಲ್ಲಿನ ಎಲ್ಲಾ ರೆಕಾರ್ಡ್ ಅನ್ನು ನಾಶ ಮಾಡಿದ್ದಾರೆ. ಬೇಕು ಬೇಕಂತಲೆರ ಕೋರ್ಟ್ ಗೆ ಬರ್ತಾ ಇರಲಿಲ್ಲ. ಏನೇ ಪ್ರಯತ್ನ ಮಾಡಿದ್ರು ಕಡೆಗೆ ನ್ಯಾಯ ಗೆಲ್ತು ಎಂದಿದ್ದಾರೆ.















