ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 17 : ಪ್ರತಿಭೆಗಳನ್ನು ಗುರುತಿಸುವಲ್ಲಿ ಜೀ಼ಕನ್ನಡ ವಾಹಿನಿ ಈಗ ಮತ್ತೊಮ್ಮೆ ಪ್ರತಿಭಾನ್ವಿತ ಕಲಾವಿದರಿಗೆ ಅವಕಾಶ ಕೊಡುತ್ತಿದೆ.
ಇದೇ ಸೆಪ್ಟೆಂಬರ್ 19 ನೇ ತಾರೀಖು, ಶುಕ್ರವಾರದಂದು ನಗರದ ತುರುವನೂರು ರಸ್ತೆಯ ಬಸಪ್ಪ ಆಸ್ಪತ್ರೆ ಸಮೀಪದ ವಿವೇಕಾನಂದ ನರ್ಸಿಂಗ್ ಕಾಲೇಜಿನಲ್ಲಿ ಮಹಾ ಆಡಿಷನ್ ಕಾರ್ಯಕ್ರಮ ನಡೆಯಲಿದೆ.
ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಮತ್ತು ಕಾಮಿಡಿ ಕಿಲಾಡಿಗಳು ಆಡಿಷನ್ 31 ಜಿಲ್ಲೆಗಳಲ್ಲಿ ನಡೆಯುತ್ತಿದ್ದು, ಮುಂದಿನ ಡ್ಯಾನ್ಸಿಂಗ್ ಅಥವಾ ಕಾಮಿಡಿ ಕಿಂಗ್ ಆಗಬೇಕು ಎನ್ನುವವರಿಗೆ ಸುವರ್ಣಾವಕಾಶ.
ಪ್ರತಿಭೆ ಇದ್ದರೂ ಅವಕಾಶ ಸಿಗದೇ ಇರುವವವರಿಗೆ ಜೀ಼ಕನ್ನಡ ಒಂದು ಅತ್ಯತ್ತಮ ವೇದಿಕೆ ಕಲ್ಪಿಸಿಕೊಡುತ್ತಿದೆ. ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್
ಭಾಗವಹಿಸುವವರ ವಯೋಮಿತಿ 6 ರಿಂದ 60 ರವರೆಗೆ ಇರಬೇಕು. ಉತ್ತಮವಾಗಿ ಡ್ಯಾನ್ಸ್ ಮಾಡುವವರಾಗಿರಬೇಕು. ಇನ್ನು, ಕಾಮಿಡಿ ಕಿಲಾಡಿಗಳಲ್ಲಿ ಭಾಗವಹಿಸುವುದಾದರೆ ನಿಮ್ಮ ವಯಸ್ಸು 16 ರಿಂದ 60 ವರುಷದ ಒಳಗಿರಬೇಕು ಮತ್ತು ನಿಮ್ಮದೇ ಕಾಮಿಡಿ ಸ್ಕಿಟ್ ಇರಬೇಕು. ರೀಲ್ಸ್ ವಿಡಿಯೋಗಳಿಗೆ ಅವಕಾಶವಿಲ್ಲ.
ಈ ಪ್ರಕ್ರಿಯೆಯಲ್ಲಿ ಭಾಗವಹಿಸಲು ಇಚ್ಚಿಸುವವರು ಪಾಸ್ಪೋರ್ಟ್ ಸೈಜ್ ಪೋಟೋ ಹಾಗು ಅಡ್ರೆಸ್ ಪ್ರೂಪ್ ಜೆರಾಕ್ಸ್ ಪ್ರತಿಯನ್ನು ತರಬೇಕು. ಜೀಕನ್ನಡ ವಾಹಿನಿಯಲ್ಲಿ ಆಡಿಷನ್ ಗಳಿಗೆ ಯಾವುದೇ ಶುಲ್ಕ ಕಟ್ಟುವಂತಿಲ್ಲ. ವಾಹಿನಿಯ ಹೆಸರಿನಲ್ಲಿ ಹಣ ಪಡೆಯುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ವಾಹಿನಿಯು ತಿಳಿಸಿದೆ. ಹೆಚ್ಚಿನ ಮಾಹಿತಿಗಾಗಿ 9513134434, 7026223311 (WhatsApp ಸಂದೇಶಗಳಿಗೆ ಮಾತ್ರ ) ಸಂಪರ್ಕಿಸಿ.




