ಮೈಸೂರು: ಮೂಡಾ ಹಗರಣ ಕೇಸ್ ನಲ್ಲಿ ಈಗಾಗಿ ಇಡಿ ಅಧಿಕಾರಿಗಳು ಮಾಜಿ ಆಯುಕ್ತ ದಿನೇಶ್ ಕುಮಾರ್ ಅವರನ್ನು ಬಂಧಿಸಿದೆ. ಇಂದು ಕೋರ್ಟ್ ಮುಂದೆ ಹಾಜರು ಪಡಿಸಿತ್ತು. ಈ ವೇಳೆ ಮಾಜಿ ಆಯುಕ್ತ ದಿನೇಶ್ ಕುಮಾರ್, ಜಾಮೀನಿಗಾಗಿ ಅರ್ಜಿ ಸಲ್ಲಿಕೆ ಮಾಡಿದ್ದರು. ಆದ್ರೆ ಕೋರ್ಟ್ ಜಾಮೀನು ಅರ್ಜಿಯನ್ನು ವಜಾ ಮಾಡಿದೆ. ಈ ಮೂಲಕ ದಿನೇಶ್ ಕುಮಾರ್ ಪೊಲೀಸ್ ಕಸ್ಟಡಿಯಲ್ಲಿಯೇ ಇರಲಿದ್ದಾರೆ. 9 ದಿನಗಳ ಕಾಲ ಕಸ್ಟಡಿಗೆ ನೀಡಿ ಜನಪ್ರತಿನಿಧಿಗಳ ನ್ಯಾಯಲಯವು ಆದೇಶ ನೀಡಿದೆ.
ಒಂದು ವರ್ಷದಿಂದ ಸುಮ್ಮನಿದ್ದ ಇಡಿ ಅಧಿಕಾರಿಗಳು ಈಗ ತನಿಖೆಗೆ ದಿನೇಶ್ ಬೇಕು ಎನ್ನುತ್ತಿದ್ದಾರೆ. ಇಷ್ಟು ದಿನ ಬಂಧನ ಮಾಡದೇ ಇದ್ದವರನ್ನು ಈಗ ಬಂಧಿಸಿದ್ದು ಯಾಕೆ..? ಈಗಾಗಲೇ ಬ್ಯಾಂಕ್ ವಿವರಗಳನ್ನು ಎಲ್ಲವನ್ನು ನೀಡಿದ್ದು, ಈಗ ಮತ್ತೆ ಕಸ್ಟಡಿಗೆ ಕೇಳುವುದು ಸರಿಯಲ್ಲ. ನಮ್ಮ ಕಕ್ಷಿದಾರರು ಅಸ್ತಮಾ ಸೇರಿದಂತೆ ಕೆಲವು ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಾರೆ ಎಂದು ದಿನೇಶ್ ಕುಮಾರ್ ಪರ ವಕೀಲರು ಕೋರ್ಟ್ ಗೆ ಮನವಿ ಮಾಡಿದರು. ಅಷ್ಟೇ ಅಲ್ಲ ದೆಹಲಿಯ ಮಾಜಿ ಸಿಎಂ ಕೇಜ್ರಿವಾಲ್ ಅವರಿಗೆ ನೀಡಿದಂತೆ ಮಧ್ಯಂತರ ಜಾಮೀನು ನೀಡಬೇಕೆಂದು ಅರ್ಜಿ ಸಲ್ಲಿಕೆಯಲ್ಲಿ ಉಲ್ಲೇಖ ಮಾಡಿದ್ದರು.
ಅದಕ್ಕ ಉತ್ತರಿಸಿರುವ ಜಡ್ಜ್, ದಿನೇಶ್ ಕುಮಾರ್ ರಾಜಕಾರಣಿ ಅಲ್ಲ. ಮೂಡಾ ಪ್ರಕರಣದಲ್ಲಿ ಈ ಅಂಶವನ್ನು ಪ್ರಸ್ತಾಪ ಮಾಡುವ ಅಗತ್ಯವಿಲ್ಲ ಎಂಬ ಅಭಿಪ್ರಾಯ ಪಟ್ಟಿದೆ. ಹಾಗೇ ಇಡಿ ಪರ ವಕೀಲರು ಇನ್ನಷ್ಟು ದಿನ ಕಸ್ಟಡಿಗೆ ಬೇಕಾಗಿದೆ ಎಂದು ಮನವಿ ಮಾಡಿದರು. ವಾದ ಪ್ರತಿ ವಾದ ಆಲಿಸಿದ ಜನಪ್ರತಿನಿಧಿಗಳ ನ್ಯಾಯಾಲಯವು ಒಂಭತ್ತು ದಿನಗಳ ಕಾಲ ದಿನೇಶ್ ಕುಮಾರ್ ಅವರನ್ನು ಕಸ್ಟಡಿಗೆ ನೀಡಿದೆ.









