331 ಹೊಸ ಜಾತಿಗಳಿಗೆ ಸಚಿವರಿಂದಲೇ ವಿರೋಧ : ಸಚಿವ ಸಂಪುಟದಲ್ಲಿ ಏನೆಲ್ಲಾ ಆಯ್ತು..?

1 Min Read

ಬೆಂಗಳೂರು: ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆದಿದೆ. ಈ ಸಭೆಯಲ್ಲಿ ಜಾತಿ ಗಣತಿಯ ವಿಚಾರದ ಬಗ್ಗೆ ಸದ್ಯ ಸಂಪುಟದಲ್ಲೂ ಜೋರು ಚರ್ಚೆಯಾಗಿದೆ. ಈ ವಿಚಾರಕ್ಕೆ ಸಚಿವರೆಲ್ಲಾ ವಿರೋಧ ವ್ಯಕ್ತಪಡಿಸಿದ್ದಾರೆ. ಜಾತಿ ಗಣತಿ ಸಮೀಕ್ಷೆ ಸರ್ಕಾರದ ಮಹಾತ್ವಕಾಂಕ್ಷೆಯ ಯೋಜನೆಯಾಗಿದೆ. ಸೆಪ್ಟೆಂಬರ್ 22ರಿಂದ ಜಾತಿಗಣತಿ ಆರಂಭವಾಗಲಿದೆ.

ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಂಪುಟ ಸಭೆ ನಡೆದಿದೆ. ಈ ಸಭೆಯಲ್ಲಿ ಕೆಲ ಸಚಿವರು ಸಿದ್ದರಾಮಯ್ಯ ಮುಂದೆಯೂ ಏರುಧ್ವನಿಯಲ್ಲಿಯೇ ವಿರೋಧ ಮಾಡಿರುವ ಘಟನೆ ನಡೆದಿದೆ. 331 ಹೊಸದಾಗಿ ಜಾತಿಗಳ ಸೇರ್ಪಡೆ ಯಾಗುತ್ತಿರುವುದಕ್ಕೆ ವಿರೋಧಿಸಿರುವ ಕೆಲ ಸಚಿವರು ಹೊಸ ಜಾತಿಗಳ ಸೇರ್ಪಡೆಯಿಂದ ಗೊಂದಲ ಸೃಷ್ಟಿಯಾಗಿದೆ. ಈ ಗೊಂದಲವನ್ನು ಸರಿಪಡಿಸದ ಹೊರತು ಜಾತಿಗಣತಿ ಬೇಡ. ಒಂದು ವೇಳೆ ಗೊಂದಲದ ನಡುವೆ ಜಾತಿಗಣತಿ ಮುಂದುವರೆಸಿದರೆ ತೊಂದರೆಯೂ ಬರಬಹುದು ಎಂದು ಸಂಪುಟ ಸಭೆಯಲ್ಲಿ ಅಭಿಪ್ರಾಯ ವ್ಯಕ್ತವಾಗಿದೆ ಎನ್ನಲಾಗಿದೆ.

ಸಮೀಕ್ಷೆ ಮುಂದುವರಿಕೆ ಬಗ್ಗೆ ಸಿಎಂ ಸಿದ್ದರಾಮಯ್ಯ, ಭೈರತಿ ಸುರೇಶ್, ಸಂತೋಷ್ ಲಾಡ್ ಹಾಗೂ ಕೆ.ಹೆಚ್.ಮುನಿಯಪಗಪ ಮಾತ್ರ ಒಲವು ತೋರಿಸಿದ್ದಾರೆ. ಸಂಪುಟ ಸಭೆಯಲ್ಲಿ ಸೇರಿದ್ದ ಭಾಗಶಃ ಸಚಿವರು ವಿರೋಧಿಸಿದ್ದಾರೆ. ಹೀಗಾಗಿ ಜಾತಿಗಣತಿ ಸಮೀಕ್ಷೆ ಮುಂದೂಡಿಕೆಯಾಗುತ್ತಾ ಎನ್ನುವ ಪ್ರಶ್ನೆಗಳು ಉದ್ಭವಿಸಿವೆ. ಈ ಮೊದಲೇ ಬಿಡುಗಡೆಯಾದ ಜಾತಿಗಣತಿಯ ವರದಿಯನ್ನ ವಿರೋಧ ಪಕ್ಷದವರು ಸೇರಿದಂತೆ ಹಲವರು ವಿರೋಧಿಸಿದ್ದರು. ಹೀಗಾಗಿ ಕಾಂಗ್ರೆಸ್ ಹೈಕಮಾಂಡ್ ಹೊಸದಾಗಿ ಜಾತಿಗಣತಿ ಮಾಡುವಂತೆ ಸೂಚನೆ ನೀಡಿತ್ತು. ಅದರಂತೆ ಕಾಂಗ್ರೆಸ್ ಸರ್ಕಾರ ಮತ್ತೆ ಜಾತಿಗಣತಿಗೆ ಸಮೀಕ್ಷೆಗೆ ಸೂಚನೆ ನೀಡಿದೆ. ಸೆಪ್ಟೆಂಬರ್ 22 ರಿಂದ ಶುರುವಾಗಲಿದೆ.

Share This Article
Enable Notifications OK No thanks