ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 23 : ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ನಡೆಸುತ್ತಿರುವ ಮನೆ ಮನೆ ಗಣತಿ ಸಮೀಕ್ಷೆಯಲ್ಲಿ ಕಡ್ಡಾಯವಾಗಿ ವೀರಶೈವ ಲಿಂಗಾಯತ ಉಪ ಜಾತಿ ರಡ್ಡಿ ಲಿಂಗಾಯತ, ಧರ್ಮ ಹಿಂದೂ ಎಂದು ಬರೆಸುವಂತೆ ಜಿಲ್ಲಾ ವೀರಶೈವ ಲಿಂಗಾಯತ ಹೇಮರಡ್ಡಿ ಮಲ್ಲಮ್ಮ ಸಮಾಜದ ಅಧ್ಯಕ್ಷ ಡಾ.ಪಾಲಾಕ್ಷಪ್ಪ ಮನವಿ ಮಾಡಿದರು.
ಸಮಾಜದ ಕಚೇರಿಯಲ್ಲಿ ಕರೆಯಲಾಗಿದ್ದ ಸಭೆಯಲ್ಲಿ ಚರ್ಚಿಸಿದ ಅವರು ಶೈಕ್ಷಣಿಕ ಮತ್ತು ಔದ್ಯೋಗಿಕವಾಗಿ ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ಪಡೆಯಬೇಕಾದರೆ ಗಣತಿ ಸಮೀಕ್ಷೆಯಲ್ಲಿ ವೀರಶೈವ ಲಿಂಗಾಯತ ಎಂದೆ ಬರೆಸಬೇಕು. ಗಣತಿದಾರರು ಸಮೀಕ್ಷೆಗೆ ಬಂದಾಗ ನಿಖರವಾದ ಮಾಹಿತಿ ನೀಡಿ ಒಗ್ಗಟ್ಟು ಪ್ರದರ್ಶಿಸುವಂತೆ ಜಿಲ್ಲಾ ವೀರಶೈವ ಲಿಂಗಾಯತ ಹೇಮರಡ್ಡಿ ಮಲ್ಲಮ್ಮ ಸಮಾಜದ ಬಾಂಧವರಲ್ಲಿ ಡಾ.ಪಾಲಾಕ್ಷಪ್ಪ ವಿನಂತಿಸಿದರು.
ಜಿಲ್ಲಾ ವೀರಶೈವ ಲಿಂಗಾಯತ ಹೇಮರಡ್ಡಿ ಮಲ್ಲಮ್ಮ ಸಮಾಜದ ಪ್ರಧಾನ ಕಾರ್ಯದರ್ಶಿ ಡಿ.ಟಿ.ಶಿವಾನಂದಪ್ಪ, ಗೌರವಾಧ್ಯಕ್ಷ ಜಿ.ಚಿದಾನಂದಪ್ಪ, ಉಪಾಧ್ಯಕ್ಷರುಗಳಾದ ಆರ್.ಡಿ.ತಿಪ್ಪೇಸ್ವಾಮಿ, ಎಂ.ವಿಜಯಕುಮಾರ್, ಎನ್.ಬಿ.ವಿಶ್ವನಾಥ್, ಖಜಾಂಚಿ ಕೆ.ಪಿ.ಬಸವರಾಜ್, ರವೀಂದ್ರ, ನಿರಂಜನಮೂರ್ತಿ, ಮಹಾಂತೇಶ್ ಹಾಗೂ ನಿರ್ದೇಶಕರುಗಳು ಸಭೆಯಲ್ಲಿ ಭಾಗವಹಿಸಿದ್ದರು.
ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!
ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






