ಚಿತ್ರದುರ್ಗ. ಸೆ.26 : ಸ್ವಚ್ಛತಾ ಹೀ ಸೇವಾ ಕಾರ್ಯಕ್ರಮದಡಿ ‘ಏಕ್ ದಿನ್ ಏಕ್ ಸಾತ್ ಏಕ್ ಘಂಟಾ’ ಎನ್ನುವ ಧ್ಯೇಯ ವಾಕ್ಯದೊಂದಿಗೆ ಚಿತ್ರದುರ್ಗ ನಗರಸಭೆ ವತಿಯಿಂದ ಗುರುವಾರ ಐತಿಹಾಸಿಕ ಚಂದ್ರವಳ್ಳಿ ಸೇರಿದಂತೆ ನಗರದ ವಿವಿಧಡೆ ಸ್ವಚ್ಚತಾ ಕಾರ್ಯ ನಡೆಸಲಾಯಿತು.
ಮುಂಜಾನೆ ಚಂದ್ರವಳ್ಳಿಯಲ್ಲಿ ವಾಯುವಿಹಾರಿಗಳೊಂದಿಗೆ ನಗರ ಸಭೆ ಅಧ್ಯಕ್ಷೆ ಅನಿತಾ ರಮೇಶ್, ಸದಸ್ಯರಾದ ಶಶಿಧರ್, ನಗರ ಸಭೆ ಸಹಾಯಕ ಕಾರ್ಯಪಾಲಕ ಅಭಿಯಂತರ ಜಾಫರ್ ಸೇರಿದಂತೆ ನಗರ ಸಭೆ ಸಿಬ್ಬಂದಿ ಸ್ವಚ್ಛತಾ ಕಾರ್ಯ ನಡೆಸಿದರು.
ರಂಗಯ್ಯನಬಾಗಿಲು ಬಳಿ ಹಾಗೂ ಜೋಗಿಮಟ್ಟಿ ರಸ್ತೆಯ ಮಾಸ್ತಮ್ಮ ದೇವಸ್ಥನಾದ ಬಳಿ ನಗರ ಸಭೆ ಸಿಬ್ಬಂದಿ ಸ್ವಚ್ಛತೆ ಕಾರ್ಯಕೈಗೊಂಡು ರಂಗೋಲಿ ಬಿಡಿಸುವ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದರು.
ಈ ವೇಳೆ ಆರೋಗ್ಯ ನಿರೀಕ್ಷರಾದ ಬಾಬು ರೆಡ್ಡಿ, ನಿರ್ಮಿಲ.ಹೆಚ್.ಆರ್, ರುಕ್ಮಿಣಿ, ಭಾರತಿ.ಕೆ. ಹೀನಾ ಕೌಸರ್, ಜಯಪ್ರಕಾಶ್ ಸೇರಿದಂತೆ ಪೌರ ಕಾರ್ಮಿಕರು, ಸಮುದಾಯ ಪ್ರೇರಕರು ಇದ್ದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.



















