Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಗ್ರಾ.ಪಂ. ಸಹಯೋಗದೊಂದಿಗೆ ಬೀದಿ ನಾಯಿಗಳಿಗೆ ರೇಬಿಸ್ ಲಸಿಕೆ : ಡಾ.ಎನ್.ಕುಮಾರ್

---Advertisement---

ಚಿತ್ರದುರ್ಗ. ಸೆ.26 : ಮುಂಬರುವ ದಿನಗಳಲ್ಲಿ ಗ್ರಾ.ಪಂ.ಸಹಯೋಗದೊಂದಿಗೆ ಬೀದಿ ಬದಿಯ ನಾಯಿಗಳಿಗೆ ಲಸಿಕೆಯನ್ನು ಹಾಕಿಸುವ ಕಾರ್ಯ ಹಮ್ಮಿಕೊಳ್ಳಲಾಗುವುದು ಎಂದು ಪಶುಪಾಲನ ಮತ್ತು ಪಶುವೈದ್ಯ ಸೇವಾ ಇಲಾಖೆ ಉಪ ನಿರ್ದೇಶಕ ಡಾ.ಎನ್.ಕುಮಾರ್ ಹೇಳಿದರು.

ಜಿಲ್ಲಾ ಪಂಚಾಯತಿ, ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ, ಹಾಗೂ ಪಶು ವೈದ್ಯಕೀಯ ಪರೀಕ್ಷಕರ ಸಂಘದ ಸಹಯೋಗದಲ್ಲಿ ನಗÀರದ ಒನಕೆ ಓಬವ್ವ ಕ್ರೀಡಾ ಭವನದಲ್ಲಿ ಶುಕ್ರವಾರ ಪಶು ವೈದ್ಯಕೀಯ ಪರಿವೀಕ್ಷಕರಿಗೆ ಹಮ್ಮಿಕೊಂಡಿದ್ದ ತಾಂತ್ರಿಕ ಸಮ್ಮೇಳನ ಹಾಗೂ ರೇಬಿಸ್ ರೋಗ ತಡೆಗಟ್ಟುವಿಕೆ ಕಾರ್ಯಗಾರದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಕೇವಲ 8 ರಿಂದ 10 ರೇಬಿಸ್ ಪ್ರಕರಣಗಳು ದಾಖಲಾಗುತ್ತಿವೆ. ಆದರೆ ಬಹು ಸಂಖ್ಯೆ ಪ್ರಕರಣಗಳು ದಾಖಲಾಗದೆ ಉಳಿಯುತ್ತಿವೆ. ಅಧಿಕಾರಿಗಳು ನಿರ್ಲಕ್ಷ್ಯ ವಹಿಸದೇ ಜಾನುವಾರುಗಳಿಗೆ ಬರುವ ಸಾಂಕ್ರಾಮಿಕ ರೋಗಗಳು ಹಾಗೂ ರೇಬಿಸ್ ಪ್ರಕರಣಗಳನ್ನು ತಪ್ಪದೇ ದಾಖಲಿಸಬೇಕು. ಅಧಿಕಾರಿಗಳು ತಾಂತ್ರಿಕ ವಿಚಾರ ಸಂಕಿರಣ ಮತ್ತು ಕಾರ್ಯಾಗಾರ ಸದುಪಯೋಗವನ್ನು ಪಡೆದು ಪಶು ವ್ಯದ್ಯಕೀಯ ಸೇವಾ ಇಲಾಖೆಯ ಕಾರ್ಯಗಳನ್ನು ಯಶಸ್ವಿಗೊಳಿಸಬೇಕು ಎಂದು ಕರೆ ನೀಡಿದರು.

ಮುಂದಿನ ದಿನಗಳಲ್ಲಿ ರೇಬಿಸ್ ಕುರಿತು ಶಾಲಾ ಕಾಲೇಜುಗಳಲ್ಲಿ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಆಯೋಜಿಸಲಾಗವುದು. ಪ್ರಾಣಿ ಪ್ರಿಯರು ಸಾಕುಪ್ರಾಣಿಗಳಿಗೆ ಸಮಯಕ್ಕೆ ಸರಿಯಾಗಿ ಲಸಿಕೆಗಳನ್ನು ಕೊಡಿಸಬೇಕು. ಒಮ್ಮೆ ರೇಬಿಸ್ ತುತ್ತಾದರೆ ಚಿಕಿತ್ಸೆ ಸಿಗುವುದು ಕಷ್ಟ. ಪ್ರಾಣಹಾನಿ ನಿಶ್ಚಿತ ಎಂದು ಉಪ ನಿರ್ದೇಶಕ ಡಾ.ಎನ್.ಕುಮಾರ್ ಎಚ್ಚರಿಸಿದರು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಜಿ.ಪಂ.ಉಪಕಾರ್ಯದರ್ಶಿ ಡಾ.ರಂಗಸ್ವಾಮಿ ಪಶು ಇಲಾಖೆಯಲ್ಲಿ ಸಾಕಷ್ಟು ಸುಧಾರಣೆಗಳು ಉಂಟಾಗಿವೆ. ತಂತ್ರಜ್ಞಾನವನ್ನು ಬಳಸಿ ಪ್ರತಿಯೊಂದು ಕಾರ್ಯಗಳನ್ನು ನಿರ್ವಹಿಸುವುದರಿಂದ ಅಧಿಕಾರಿಗಳಿಗೆ ದಾಖಲೆಗಳನ್ನು ಬರೆದು ನಿರ್ವಹಿಸುವುದು ತಪ್ಪಿದೆ ಎಂದರು.

ಪಶು ಸಂಪತ್ತು ಕುಂಠಿತಕ್ಕೆ ಕಳವಳ:
ಚಿತ್ರದುರ್ಗ ಜಿಲ್ಲೆಯಲ್ಲಿ 3.80 ಲಕ್ಷ ಸಂಖ್ಯೆಯಲ್ಲಿದ್ದ ಜಾನುವಾರುಗಳ ಸಂಖ್ಯೆ 2.50 ಲಕ್ಷಕ್ಕೆ ಕುಸಿದಿದೆ. ಕೆಲ ವರ್ಷಗಳಲ್ಲಿ 1.50 ಲಕ್ಷ ಜಾನುವಾರುಗಳು ಕುಂಠಿತವಾಗಿವೆ ಎಂದು ಪಾಲಿಕ್ಲಿನಿಕ್ ಉಪ ನಿರ್ದೇಶಕ ಡಾ.ಸಿ.ತಿಪ್ಪೆಸ್ವಾಮಿ ಕಳವಳ ವ್ಯಕ್ತ ಪಡಿಸಿದರು.
ಪಶು ಸಂಗೋಪನೆ ಪ್ರಾಮುಖ್ಯತೆ ಅರಿತು ಇಲಾಖೆ ಅಧಿಕಾರಿಗಳು ಗ್ರಾಮ ಹಾಗೂ ನಗರ ಪ್ರದೇಶದಲ್ಲಿ ಸೇವಾ ಮನೋಭಾವದಿಂದ ಕಾರ್ಯನಿರ್ವಹಿಸಬೇಕು ಎಂದು ಕಾರ್ಯಗಾರದ ಪ್ರಾಸ್ತಾವಿಕ ನುಡಿಯಲ್ಲಿ ತಿಳಿಸಿದರು.

ತಾಂತ್ರಿಕ ವಿಚಾರ ಸಂಕಿರ್ಣ ಹಾಗೂ ಕಾರ್ಯಾಗಾರ ಕುರಿತು ಎನ್.ಐ.ಸಿ ಪ್ರೋಗ್ರಾಮರ್ ಗಾಯಿತ್ರಿ ಕುಲಕರ್ಣಿ ಉಪನ್ಯಾಸ ನೀಡಿದರು.
ಕರ್ನಾಟಕ ರಾಜ್ಯ ಸರ್ಕಾರಿ ನೌಕಾರರ ಸಂಘದ ಜಿಲ್ಲಾಧ್ಯಕ್ಷ ಮಾಲತೇಶ ಮುದ್ದಜ್ಜಿ, ಮುಖ್ಯ ಪಶುವೈದ್ಯಕೀಯ ಉಪ ನಿರ್ದೇಶಕ ಡಾ.ಎನ್.ಗಿರಿರಾಜ್, ಪಶು ವೈದ್ಯಕೀಯ ಪರೀವಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಟಿ.ಆರ್. ಆಂಜನೇಯ, ಪ್ರದಾನ ಕಾರ್ಯದರ್ಶಿಎ.ಆರ್. ತಿಪ್ಪೆಸ್ವಾಮಿ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಕಾರ್ಯಧ್ಯಕ್ಷ ಬಿ.ಟಿ. ವಿಶ್ವನಾಥ ಸೇರಿದಂತೆ ಇತರರು ಇದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...