Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನಾಳೆ ಮಲ್ಲಾಪುರದಲ್ಲಿ ಕೊಲ್ಲಾಪುರ ಮಹಾಲಕ್ಷ್ಮಿ ದೇವಾಲಯ ಲೋಕಾರ್ಪಣೆ

---Advertisement---

 

ಚಿತ್ರದುರ್ಗ. ಸೆ.27: ಚಿತ್ರದುರ್ಗ ತಾಲ್ಲೂಕು ಮಲ್ಲಾಪುರ ಗ್ರಾಮದಲ್ಲಿ ಸೆಪ್ಟೆಂಬರ್ 28ರಂದು ಸಂಜೆ 5ಕ್ಕೆ ಶ್ರೀ ಆದಿಶಕ್ತಿ ಕೊಲ್ಲಾಪುರ ಮಹಾಲಕ್ಷ್ಮಿ ಅಮ್ಮನವರ ದೇವಾಲಯ ಲೋಕಾರ್ಪಣೆ ಸಮಾರಂಭ ಹಮ್ಮಿಕೊಳ್ಳಲಾಗಿದೆ.

ಚಿತ್ರದುರ್ಗದ ಶ್ರೀ ಶಿವಶರಣ ಮಾದಾರ ಚನ್ನಯ್ಯ ಗುರಪೀಠದ ಡಾ.ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿಯವರು ದೇವಾಲಯ ಲೋಕಾರ್ಪಣೆ ಮಾಡುವರು. ಸಂಸದ ಗೋವಿಂದ ಎಂ.ಕಾರಜೋಳ ಅಧ್ಯಕ್ಷತೆ ವಹಿಸುವರು. ಮಾಜಿ ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಮಾತಂಗಿ ಭಾವಚಿತ್ರದ ಅನಾವರಣ ಮಾಡುವರು. ಮಾಜಿ ಸಂಸದ ಬಿ.ಎನ್.ಚಂದ್ರಪ್ಪ ಶ್ರೀ ಮಹಾಲಕ್ಷ್ಮಿ ಭಾವಚಿತ್ರದ ಅನಾವರಣ ಮಾಡುವರು. ವಿಶೇಷ ಆಹ್ವಾನಿತರಾಗಿ ಮಾಜಿ ಶಾಸಕರಾದ ಜಿ.ಹೆಚ್.ತಿಪ್ಪಾರೆಡ್ಡಿ, ಎಸ್.ಕೆ.ಬಸವರಾಜನ್, ಆದಿಜಾಂಬವ ಅಭಿವೃದ್ಧಿ ನಿಗಮ ಅಧ್ಯಕ್ಷ ಜಿ.ಎಸ್.ಮಂಜುನಾಥ್, ಜಿ.ಪಂ ಮಾಜಿ ಅಧ್ಯಕ್ಷೆ ಸೌಭಾಗ್ಯ ಬಸವರಾಜನ್,
ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷರಾದ ಪಿ.ರಘು,
ರಾಜ್ಯ ಕಾಂಗ್ರೆಸ್ ಮುಖಂಡ ಬಿ.ಸೋಮಶೇಖರ್, ಮಾದಾರ ಚೆನ್ನಯ್ಯ ಸೇವಾ ಸಮಿತಿ ರಾಜ್ಯಾಧ್ಯಕ್ಷ ಹೂಡಿ ಮಂಜುನಾಥ್, ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ, ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಕೆ.ಎಂ.ಹಾಲಸ್ವಾಮಿ, ರಾಜ್ಯ ಬಿಜೆಪಿ ಮುಖಂಡ ಉಮೇಶ ಕಾರಜೋಳ, ಕಾಂಗ್ರೆಸ್ ಮುಖಂಡ ಡಾ.ಬಿ.ತಿಪ್ಪೇಸ್ವಾಮಿ, ಲಿಡ್ಕರ್ ಮಾಜಿ ಅಧ್ಯಕ್ಷ ಹಳಿಯೂರು ಓ.ಶಂಕರ್, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ನರಸಿಂಹರಾಜು, ದಿಶಾ ಸಮಿತಿ ಸದಸ್ಯ ಎಲ್.ಭರತ್, ನಗರಸಭೆ ಮಾಜಿ ಅಧ್ಯಕ್ಷರಾದ ಹೆಚ್.ಜೆ.ಕೃಷ್ಣಮೂರ್ತಿ, ಹೆಚ್.ಮಂಜಪ್ಪ ಸೇರಿದಂತೆ ಮತ್ತಿತರ ಗಣ್ಯರು ಭಾಗವಹಿಸುವರು.

ಒಳ ಮೀಸಲಾತಿಗೆ ಶ್ರಮಿಸಿ ಹೋರಾಟ ಮಾಡಿದ ಡಾ.ಬಸವಮೂರ್ತಿ ಮಾದಾರ ಚನ್ನಯ್ಯ ಶ್ರೀಗಳು, ಸಂಸದ ಗೋವಿಂದ ಎಂ.ಕಾರಜೋಳ, ಮಾಜಿ ಸಚಿವ ಎ.ನಾರಾಯಣಸ್ವಾಮಿ, ಮಾಜಿ ಸಂಸದ ಬಿ.ಎನ್.ಚಂದ್ರಪ್ಪ, ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಹೆಚ್.ಹನುಮಂತಪ್ಪ, ಜಿ.ಪಂ ಮಾಜಿ ಅಧ್ಯಕ್ಷರಾದ ಬಿ.ಪಿ.ಪ್ರಕಾಶಮೂರ್ತಿ, ಹುಲ್ಲೂರು ಕುಮಾರಸ್ವಾಮಿ ಹಾಗೂ ವೈದ್ಯಕೀಯ ಸೇವೆ ಸಲ್ಲಿಸಿದ ಡಾ.ಇ.ಸತೀಶ್ ಅವರಿಗೆ ಸನ್ಮಾನ ಮಾಡಲಾಗುವುದು ಎಂದು ಮಲ್ಲಾಪುರ ಗ್ರಾಮಸ್ಥರು ಹಾಗೂ ಶ್ರೀ ಮಾದಾರ ಚನ್ನಯ್ಯ ನೌಕರರ ಸೇವಾ ಸಮಿತಿ ಪ್ರಕಟಣೆ ತಿಳಿಸಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now