Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮಾತಾಡಿದ್ರೆ ಸಿಕ್ಕಿ ಹಾಕಿಕೊಳ್ತಾರೆ : ಡಿಕೆಶಿ ಮೌನಕ್ಕೆ ಅಶ್ವಥ್ ನಾರಾಯಣ್ ಟಾಂಗ್

Facebook
Twitter
Telegram
WhatsApp

 

ಬೆಂಗಳೂರು: ಮೇಕೆದಾಟು ಯೋಜನೆಗೆ ಆಗ್ರಹಿಸಿ ಕಾಂಗ್ರೆಸ್ ನಾಯಕರು ಪಾದಯಾತ್ರೆ ನಡೆಸುತ್ತಿದ್ದಾರೆ. ಈ ಪಾದಯಾತ್ರೆ ಆರಂಭವಾಗಿ ಇಂದಿಗೆ ಮೂರು ದಿನ ಕಳೆದಿದೆ. ಮೊದಲ ದಿನವೇ ಸುಸ್ತಾದ ಡಿಕೆ ಶಿವಕುಮಾರ್, ಮೂರು ದಿನಗಳ ಕಾಲ ಮಾತಾಡದೆ ಇರಲು ನಿರ್ಧರಿಸಿದ್ದಾರೆ.

ಮೌನಾಚರಣೆ ಮೂಲಕ ನಡೆಯಲು ನಿರ್ಧರಿಸಿದ್ದಾರೆ. ಆದ್ರೆ ಈ ಮೌನಾಚರಣೆ ಬಗ್ಗೆ ಬಿಜೆಪಿ ನಾಯಕರು ವ್ಯಂಗ್ಯವಾಡಿದ್ದಾರೆ. ಈ ಬಗ್ಗೆ ಸುದ್ದಿಗೋಷ್ಟಿ ನಡೆಸಿದ ಸಚಿವ ಅಶ್ವಥ್ ನಾರಾಯಣ್ ಅವರು, ಡಿಕೆಶಿ ಅವರು ಮಾತನಾಡಿದರೆ ಸಿಕ್ಕಿ ಹಾಕಿಕೊಳ್ಳುತ್ತಾರೆ ಎಂಬ ಭಯಕ್ಕೆ ಮೌನಕ್ಕೆ ಜಾರಿದ್ದಾರೆ ಎಂದಿದ್ದಾರೆ.

ಹೀಗಾಗಿ ಅದರಿಂದ ಬಚಾವ್ ಆಗಲು ಮೌನಕ್ಕೆ ನಿರ್ಧರಿಸಿದ್ದಾರೆ. ರೇಣುಕಾಚಾರ್ಯ ಕಾರ್ಯಕ್ರಮಕ್ಕೆ ಹೋಗಿದ್ದಕ್ಕೆ ಕ್ಷಮೆ ಕೇಳಿದ್ದಾರೆ. ಇನ್ನು ಮುಂದೆ ಜವಬ್ದಾರಿಯುತವಾಗಿ ನಡೆದುಕೊಳ್ಳುತ್ತೇನೆ ಎಂದಿದ್ದಾರೆ. ಕಾಂಗ್ರೆಸ್ನವರ ರೀತಿ ಬಂಡತನಕ್ಕೆ ಬಿದ್ದಿಲ್ಲ ಅಂತ ಸಚಿವ ಅಶ್ವತ್ಥ್ ನಾರಾಯಣ ಹೇಳಿದರು.

ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ನಾಯಕರು ಮೇಕೆದಾಟು ಯೋಜನೆಗಾಗಿ ಪಾದಯಾತ್ರೆ ನಡೆಸುತ್ತಿದ್ದಾರೆ. ಈ ಮಧ್ಯೆ ಕಾಂಗ್ರೆಸ್ ನಾಯಕರ ವಿರುದ್ಧ ಎಫ್ಐಆರ್ ಕೂಡ ದಾಖಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಆರೋಗ್ಯ ಇಲಾಖೆಯ ನೌಕರ ಅವಿನಾಶ್ ನಿಧನ

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 20 : ತಾಲ್ಲೂಕಿನ ಹಾಯ್ಕಲ್ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ನಿರೀಕ್ಷಣಾಧಿಕಾರಿ ಅವಿನಾಶ್ (43 ವರ್ಷ) ಇಂದು ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಯಲ್ಲಿ ನಿಧನರಾದರು. ಕಳೆದ ಶುಕ್ರವಾರ ದ್ವಿಚಕ್ರ ವಾಹನದಲ್ಲಿ

ಚಿತ್ರದುರ್ಗ | ಬ್ರಹ್ಮಶ್ರಿ ನಾರಾಯಣ ಗುರುಗಳ 170 ನೇ ಜಯಂತಿ ಆಚರಣೆ : ಸಚಿವ ಸುಧಾಕರ್ ಸೇರಿದಂತೆ ಗಣ್ಯರು ಭಾಗಿ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 20 : ಹಿಂದಿನಿಂದಲೂ ಈಡಿಗರ ಸಮುದಾಯದ ಜೊತೆ ನಮ್ಮ ಕುಟುಂಬ ಉತ್ತಮ ಬಾಂಧವ್ಯವಿಟ್ಟುಕೊಂಡಿದೆ. ನನ್ನ

ಚಿತ್ರದುರ್ಗ | ಒನಕೆ ಓಬವ್ವ ಜಯಂತಿ ಅದ್ದೂರಿ ಆಚರಣೆಗೆ ಸಿದ್ದತೆ : ಪೂರ್ವಭಾವಿ ಸಭೆಯಲ್ಲಿ ಮುಖಂಡರು ಭಾಗಿ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 20 : ಮುಂದಿನ ತಿಂಗಳು ನಡೆಯುವ ಒನಕೆ ಓಬವ್ವ ಜಯಂತಿಯನ್ನು ಅದ್ದೂರಿಯಾಗಿ ಆಚರಿಸುವ ಸಂಬಂಧ

error: Content is protected !!