Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಹಿರಿಯೂರಿಗೆ 3 ಬಿಎಂಸಿ ಕೇಂದ್ರ ಮಂಜೂರು : ಬಿಸಿ ಸಂಜೀವಮೂರ್ತಿ

---Advertisement---

ಸುದ್ದಿಒನ್, ಹಿರಿಯೂರು, ಅಕ್ಟೋಬರ್. 03 : ನಗರದ ಅನ್ನಪೂರ್ಣೇಶ್ವರಿ ಖಾಸಗಿ ಹೋಟೆಲಿನಲ್ಲಿ ತಾಲ್ಲೂಕು ಹಾಲು ಉತ್ಪಾದಕರ ಸಹಕಾರ ಸಂಘಗಳ ಮಾಸಿಕ ಪ್ರಗತಿ ಪರಿಶೀಲನಾ ಸಭೆ ಜರುಗಿತು.

ಸಭೆ ಕುರಿತು ಶಿಮುಲ್ ನಿರ್ದೇಶಕ ಬಿಸಿ ಸಂಜೀವಮೂರ್ತಿ ಮಾತನಾಡಿ ತಾಲೂಕಿನಲ್ಲಿ ಯಾವುದೇ ಸಮಸ್ಯೆಯಿಲ್ಲದೆ ಹಾಲು ಉತ್ಪಾದಕರ ಸಹಕಾರ ಸಂಘಗಳು ಕಾರ್ಯ ನಿರ್ವಹಿಸುತ್ತಿರುವುದು ಸಂತಸ ತಂದಿದೆ. ತಾಲ್ಲೂಕಿನ ಬೇತೂರು, ರಂಗೇನಹಳ್ಳಿ 5ಸಾವಿರ ಹಾಗೂ ಬ್ಯಾಡರಹಳ್ಳಿ ಸಹಕಾರ ಸಂಘ 3 ಸಾವಿರ ಹಾಲು ಉತ್ಪಾದನೆ ಹಿನ್ನೆಲೆಯಲ್ಲಿ ಮೂರು ಬಿಎಂಸಿ ಕೇಂದ್ರಗಳನ್ನು ಮಂಜೂರು ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಬೀರೆನಹಳ್ಳಿ ಗ್ರಾಮದಲ್ಲೂ ಬಿಎಂಸಿ ಕೇಂದ್ರ ತೆರೆಯಲು ಚಿಂತನೆ ನಡೆಸಲಾಗುವುದು. ಹೈನುಗಾರಿಕೆ ರೈತರ ಉಪಕಸುಬಾಗಿದ್ದು ಅವರ ಕುಟುಂಬ ನಿರ್ವಹಣೆಗೆ ಬಹಳ ಉಪಯುಕ್ತವಾಗಿದೆ. ಪ್ರತಿಯೊಬ್ಬರೂ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.

ಸಹಾಯಕ ನಿರ್ದೇಶಕ ಎಂ. ಪುಟ್ಟರಾಜು ಅವರು ಹಾಲು ಉತ್ಪಾದಕರ ಸಹಕಾರ ಸಂಘಗಳ ವಾರ್ಷಿಕ ವರದಿ, ಲೆಕ್ಕಪತ್ರ, ಅಡಿಟ್ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ವಿಸ್ತರಣಾಧಿಕಾರಿ ಜಿ. ಕೃಷ್ಣಕುಮಾರ್, ಪಶುವೈದ್ಯ ದೀರಾಜ್ ಪ್ರಕಾಶ್ ಜಿ, ಸೂಪರ್ವೈಸರ್ ಮಂಜುನಾಥ್ ಸೇರಿದಂತೆ ತಾಲೂಕಿನ ಹಾಲು ಉತ್ಪಾದಕರ ಸಹಕಾರ ಸಂಘಗಳ ಕಾರ್ಯದರ್ಶಿಗಳು ಇದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now