Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕೆಮ್ಮಿನ ಸಿರಪ್ ಬಗ್ಗೆ ಕೇಂದ್ರದಿಂದ ತುರ್ತು ಎಚ್ಚರಿಕೆ : ತಾಯಂದಿರೆ ಜೋಪಾನ..!

---Advertisement---

 

ಮಕ್ಕಳಿಗೆ ಕೆಮ್ಮು, ನೆಗಡಿ ಅನ್ನೋದು ಸರ್ವೇ ಸಾಮಾನ್ಯ. ವಾತಾವರಣದ ಮೇಲೂ ಕಾಯಿಲೆಗಳು ಡಿಪೆಂಡ್ ಆಗುತ್ತವೆ. ಮಕ್ಕಳಿಗೆ ಕೆಮ್ಮು ಕಾಣಿಸಿಕೊಂಡ ಕೂಡಲೇ ತಾಯಂದಿರು ಸಿರಪ್ ಅನ್ನು ಹಾಕಿ ಬಿಡುತ್ತಾರೆ. ಆದ್ರೆ ಆ ಸಿರಪ್ ಮಕ್ಕಳ ಜೀವಕ್ಕೆ ಅಪಾಯ ಅನ್ನೋದು ಈಗ ಬಯಲಾಗಿದೆ. ಕೇಂದ್ರ ಸರ್ಕಾರ ಪೋಷಕರಿಗೆ ಎಚ್ಚರಿಕೆಯನ್ನ ನೀಡಿದೆ.

ಮಧ್ಯಪ್ರದೇಶ, ರಾಜಸ್ಥಾನದಲ್ಲಿ 12 ಮಕ್ಕಳ ಸಾವುನ ಪ್ರಕರಣ ಆತಂಕವನ್ನ ಸೃಷ್ಟಿಸಿದೆ. ಮೂತ್ರಪಿಂಡದ ವೈಫಲ್ಯದಿಂದ ಈ ಹನ್ನೆರಡು ಮಕ್ಕಳು ಸಾವನ್ನಪ್ಪಿವೆ. ಇದಕ್ಕೆಲ್ಲ ಕಾರಣ ಕೆಮ್ಮಿನ ಸಿರಪ್ ಎನ್ನಲಾಗಿದೆ. ಈ ದುರಂತದ ಬೆನ್ನಲ್ಲೇ ಕೇಂದ್ರ ಸರ್ಕಾರ ಎಚ್ಚೆತ್ತಿದ್ದು, ಎಲ್ಲಾ ರಾಜ್ಯಗಳಿಗೂ ಆರೋಗ್ಯ ಇಲಾಖೆ ಸೂಚನೆಯನ್ನ ನೀಡಿದೆ. ಕೆಮ್ಮಿನ ಟಾನಿಕ್ ನೀಡುವಾಗ ಬಹಳ ಎಚ್ಚರಿಕೆ ಇರಲಿ ಎಂದೇ ಹೇಳಿದೆ.

ಆರೋಗ್ಯ ಸಚಿವಾಲಯ ಹೊರಡಿಸಿರುವ ಆದೇಶದಲ್ಲಿ ಒಂದಷ್ಟು ಸಲಹೆಗಳನ್ನ ನೀಡಿದೆ. ಪುಟ್ಟ ಮಕ್ಕಳಿಗೆ ಕೆಮ್ಮು ಕಾಣಿಸಿಕೊಂಡರೆ ಅದಾಗಿಯೇ ವಾಸಿಯಾಗುವುದಕ್ಕೆ ಬಿಡಬೇಕು. ಅದರಲ್ಲೂ 5 ವರ್ಷಕ್ಕಿಂತ ಒಳಗಿನ ಮಕ್ಕಳಿಗೆ ಈ ಸೀರಪ್ ಬಳಸಬಾರದು. ಕೆಮ್ಮು ಜಾಸ್ತಿ ಇದೆ, ಕಡಿಮೆ ಆಗ್ತಾನೆ ಇಲ್ಲ ಎಂದಾಗ ವೈದ್ಯರನ್ನ ಸಂಪರ್ಕಿಸಿ, ಸೀರಪ್ ತೆಗೆದುಕೊಳ್ಳಬೇಕು. ಅದು ಸೀಮಿತ ಪ್ರಮಾಣದಲ್ಲಿ ನೀಡಬೇಕಾಗಿರುತ್ತದೆ. ಮಕ್ಕಳ ಆರೈಕೆಯಲ್ಲಿ ಮನೆ ಔಷಧಿಯಲ್ಲದ ಔಷಧಿಗಳನ್ನು ಹೆಚ್ಚು ಬಳಕೆ ಮಾಡಬಾರದು. GMP ಅಡಿಯಲ್ಲಿ ತಯಾರಿಸಿದ ಸುರಕ್ಷಿತ ಔಷಧಿಗಳನ್ನು ಮಾತ್ರ ಸಂಗ್ರಹಿಸಿ ಮಕ್ಕಳಿಗೆ ನೀಡಬೇಕು ಎಂದು ಕೇಂದ್ರ ಆರೋಗ್ಯ ಇಲಾಖೆ ಸೂಚನೆ ನೀಡಿದೆ. ಆರೋಗ್ಯ ಇಲಾಖೆಯ ಉನ್ನತ ಅಧಿಕಾರಿಗಳು ಸರ್ಕಾರಿ ಆಸ್ಲತ್ರೆಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಸಮುದಾಯ ಆರೋಗ್ಯ‌ ಕೇಂದ್ರಗಳು, ಜಿಲ್ಲಾಸ್ಪತ್ರೆ ಹಾಗೂ ವೈದ್ಯಕೀಯ ಕಾಲೇಜುಗಳಿಗೆ ಈ ಸಂಬಂಧ ಮಾಹಿತಿ ನೀಡಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...