Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮೂಡಾ ಕೇಸ್ : ಮಾಜಿ ಆಯುಕ್ತ ದಿನೇಶ್ ಅವರ 12 ಸೈಟ್.. 15 ಕೋಟಿ ಹಣ ವಶಕ್ಕೆ..!

---Advertisement---

ಮೈಸೂರು: ಮೂಡಾ ಕೇಸ್ ಹಗರಕ್ಕೆ ಸಂಬಂಧಿಸಿದಂತೆ ಇಡಿ ತನಿಖೆಯನ್ನ ಚುರುಕುಗೊಳಿಸಿದೆ. ಅದರಲ್ಲೂ ಸಿಎಂ ಸಿದ್ದರಾಮಯ್ಯ ಅವರ ಬುಡಕ್ಕೂ ಬಂದಿದ್ದ ಕೇಸ್, ಹಾಗೇ ಸರಾಗವಾಗಿ ಸಾಗಿತ್ತು. ಈ ಕೇಸ್ ಗೆ ಸಂಬಂಧಿಸಿದಂತೆ ಈಗಾಗಲೇ ಮೂಡಾ ಮಾಜಿ ಆಯುಕ್ತ ಜಿಟಿ ದಿನೇಶ್ ಅವರ ಬಂಧನವಾಗಿದೆ. ಅವರಿಗೆ ಸಂಬಂಧಿಸಿದಂತೆ ಎಲ್ಲೆಡೆ ತಪಾಸಣೆ ಕೂಡ ನಡೆಯುತ್ತಿದೆ. ಇದೀಗ ಮಹತ್ವದ ಬೆಳವಣುಗೆಯೊಂದು ಬೆಳಕಿಗೆ ಬಂದಿದೆ.

ಮೂಡಾ ಕೇಸ್ ಗೆ ಸಂಬಂಧಿಸಿದಂತೆ ಹಲವರ ಆಸ್ತಿಗಳನ್ನ ಮುಟ್ಟುಗೋಲು ಹಾಕಿಕೊಂಡಿರುವ ಇಡಿ, ಹಲವರ ಬ್ಯಾಂಕ್ ಅಕೌಂಟ್ ಅನ್ನು ಸೀಜ್ ಮಾಡಿದೆ. ಈಗ ಮತ್ತಷ್ಟು ತನಿಖೆಯನ್ನು ಚುರುಕುಗೊಳಿಸಿದ್ದು, ದಿನೇಶ್ ಅವರ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. 52 ಕೋಟಿ ಆಸ್ತಿಯನ್ನು ದಾಳಿ ವೇಳೆ ಪತ್ತೆ ಮಾಡಲಾಗಿದೆ. ಬೇನಾಮಿ ಆಸ್ತಿಯನ್ನ ಮಾಡಿದ್ದಾರೆ ಎಂಬುದು ಈ ದಾಳಿಯಿಂದ ಇಡಿ ಅಧಿಕಾರಿಗಳಿಗೆ ತಿಳಿದು ಬಂದಿದೆ.

 

ಅದರಲ್ಲೂ ಶಾಕಿಂಗ್ ವಿಚಾರ ಅಂದ್ರೆ ಮನೆ ಕೆಲಸದವರ ಹೆಸರಲ್ಲೂ ಆಸ್ತಿ ಮಾಡಲಾಗಿದೆ. ಸಂಬಂಧಿಕರು ಸೇರಿದಂತೆ ಹಲವರ ಹೆಸರಲ್ಲಿ ಅಂದ್ರೆ ಜಿಟಿ ದಿನೇಶ್ ಅವರ ಜೊತೆಗೆ ಯಾರೆಲ್ಲಾ ಆತ್ಮೀಯವಾಗಿ ಇದ್ದರೋ ಅವರ ಹೆಸರಲ್ಲೆಲ್ಲಾ ಆಸ್ತಿಗಳನ್ನು ಮಾಡಿಟ್ಟಿದ್ದಾರೆ. ಅಲ್ಲಲ್ಲಿ ಭೂವ್ಯವಹಾರವೂ ನಡೆದಿದೆ. ಅವರ ಮನೆ ಕೆಲಸದವರ ಬ್ಯಾಂಕ್ ಅಕೌಂಟ್ ನಲ್ಲಿಯೆ 3 ಕೋಟಿ 4 ಕೋಟಿ ಹಣ ಪತ್ತೆಯಾಗಿದೆ. ಅವರ ಸಂಬಳ ಏನಿಲ್ಲಾ ಅಂದ್ರು 15 ಸಾವಿರ ಇದ್ದರು, ಇಷ್ಟೊಂದು ಹಣ ಹೇಗೆ ಬಂತು ಅನ್ನೋ ತನಿಖೆ ಶುರುವಾಗಿದೆ. 12 ಸೈಟ್.. 15 ಕೋಟಿ ಹಣವನ್ನ ಇಡಿ ವಶಕ್ಕೆ ಪಡೆದು ತನಿಖೆ ನಡೆಸುತ್ತಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now