Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕಾಂತಾರ ಸಿನಿಮಾ ನೋಡಿದ್ರಾ : ಟಿಕೆಟ್ ಜೋಪಾನ, ಹಣ ವಾಪಸ್ ಬರಬಹುದು..!

---Advertisement---

ಬೆಂಗಳೂರು: ಈಗಂತೂ ಕಾಂತಾರ ಕಲರವ. ನಾ ಮುಂದು ತಾ ಮುಂದು ಅಂತ ಸಿನಿಮಾ ನೋಡುವುದಕ್ಕೆ ಕ್ಯೂ ನಿಂತಿದ್ದಾರೆ. ಈಗಾಗಲೇ ನೋಡಿರುವವರು ಟಿಕೆಟ್ ಜೋಪಾನವಾಗಿಟ್ಟುಕೊಂಡರೆ ಮುಂದೊಂದು ದಿನ ಟಿಕೆಟ್ ಹಣ ವಾಪಾಸ್ ಸಿಕ್ಕರು ಸಿಗಬಹುದು. ಸರ್ಕಾರ ಈ ಬಗ್ಗೆ ಸಿನಿ ಪ್ರೇಮಿಗಳಿಗೆ ಮಾಹಿತಿ ನೀಡಿದೆ.

 

ಇತ್ತೀಚೆಗೆ ಸರ್ಕಾರ ಎಲ್ಲಾ ಮಲ್ಟಿಪ್ಲೆಕ್ಸ್ ಗಳಲ್ಲಿ ಟಿಕೆಟ್ ದರವನ್ನು ಕೇವಲ 200 ರೂಪಾಯಿಗೆ ನಿಗದಿ ಮಾಡಿತ್ತು. ಆದ್ರೆ ಇದನ್ನ ವಿರೋಧಿಸಿದ ಹೊಂಬಾಳೆ ಬ್ಯಾನರ್ ಹಾಗೂ ಮಲ್ಟಿಪ್ಲೆಕ್ಸ್ ಅಸೋಸಿಯೇಷನ್ ಹೈಕೋರ್ಟ್ ಮೊರೆ ಹೋಗಿತ್ತು. ಹೈಕೋರ್ಟ್, ರಾಜ್ಯ ಸರ್ಕಾರದ ಆದೇಶವನ್ನು ತಡೆಹಿಡಿದಿತ್ತು. ಇದರ ಪರಿಣಾಮ ಕಾಂತಾರ ಸಿನಿಮಾ 500, 600, 700 ರೂಪಾಯಿ ದರ ನಿಗದಿ ಮಾಡಿದೆ. ಈ ಸಂಬಂಧ ಹೈಕೋರ್ಟ್ ಏಕಸದಸ್ಯ ಪೀಠದ ಆದೇಶ ರದ್ದು ಕೋರಿ ಹೈಕೋರ್ಟ್ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಕೆ ಮಾಡಲಾಗಿತ್ತು.

 

ಇನ್ನು ಈ ಟಿಕೆಟ್ ದರದ ವಿಚಾರಕ್ಕೆ ಕೋರ್ಟ್ ಮತ್ತೊಂದು ಕಿವಿ ಮಾತನ್ನ ಹೇಳಿದೆ. ಒಂದು ವೇಳೆ ಸರ್ಕಾರದ ನಿರ್ಧಾರವನ್ನ ಹೈಕೋರ್ಟ್ ಎತ್ತಿ ಹಿಡಿದರೆ ವೀಕ್ಷಕರ ಹಣವನ್ನು ವಾಪಾಸ್ ನೀಡಬೇಕಾಗುತ್ತದೆ ಎಂಬುದನ್ನ ತಿಳಿಸಿದೆ. ಹೀಗಾಗಿ ಸರ್ಕಾರ ಜನತೆಗೆ ಸೂಚನೆ ನೀಡಿದ್ದು, ಎಲ್ಲಾ ದಾಖಲೆಗಳನ್ನು ಜೋಪಾನವಾಗಿಡಿ ಎಂದಿದೆ. ಅಂದ್ರೆ ನೀವೂ ಟಿಕೆಟ್ ಬುಕ್ ಮಾಡಿದ ರೀತಿ, ಆನ್ಲೈನ್ ಆದ್ರೆ ಅದರ ಸ್ಕ್ರೀನ್ ಶಾಟ್, ಡೈರೆಕ್ಟ್ ಆಗಿ ಹೋಗಿ ತೆಗೆದುಕೊಂಡಿದ್ದರೆ, ಆ ಟಿಕೆಟ್ ಹಾಗೇ ಉಳಿಸಿಕೊಳ್ಳುವುದು, ಹಣ ಸಂದಾಯ ಮಾಡಿದ್ದಕ್ಕೆ ಸಾಕ್ಷಿ. ಈ ಎಲ್ಲಾ ದಾಖಲೆಗಳನ್ನು ಜೋಪಾನ ಮಾಡಿಕೊಂಡರೆ, ಸರ್ಕಾರದ ನಿರ್ಧಾರವನ್ನು ಸರಿ ಎಂಬ ತೀರ್ಪು ಬಂದರೆ ಹಣ ವಾಪಾಸ್ ಸಿಗುವ ಸಾಧ್ಯತೆ ಇದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now