Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ವಿವಿ ಸಾಗರ ಕೋಡಿಗೆ ಕ್ಷಣಗಣನೆ, ಸಾರ್ವಜನಿಕರು ಎಚ್ಚರಿಕೆಯಿಂದಿರಲು ಮನವಿ

---Advertisement---

ಸುದ್ದಿಒನ್, ಹಿರಿಯೂರು, ಅಕ್ಟೋಬರ್. 11 : ಜಿಲ್ಲೆಯಲ್ಲಿ ಕಳೆದ ಎರಡ್ಮೂರು ದಿನಗಳಿಂದ ಮಳೆಯಾಗುತ್ತಿದ್ದು ಜೊತೆಗೆ ವಾಣಿವಿಲಾಸ ಜಲಾಶಯ ಮೇಲ್ಭಾಗದಲ್ಲಿ ಕೂಡ ಮಳೆ ಪ್ರಮಾಣ ಹೆಚ್ಚಿದ್ದು, ವಾಣಿ ವಿಲಾಸ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ.

ಅಕ್ಟೋಬರ್ 10ರಂದು ಜಲಾಶಯಕ್ಕೆ 1250 ಕ್ಯೂಸೆಕ್ ಒಳಹರಿವು ನೀರು ಹರಿದು ಬಂದಿದ್ದು, ಮರುದಿನ ಶನಿವಾರ ಬೆಳಗ್ಗೆ ಒಳಹರಿನ ಪ್ರಮಾಣದಲ್ಲಿ ಏಕಾಏಕಿ 2917 ಕ್ಯೂಸೆಕ್ ಒಳಹರಿವು ನೀರು ಹೆಚ್ಚಿದೆ. ಇದರಿಂದ ಶನಿವಾರಕ್ಕೆ ಪ್ರಸ್ತುತ ಜಲಾಶಯದಿಂದ ನೀರಿನ ಮಟ್ಟ 129.40 ಅಡಿ ತಲುಪಿದೆ. ಇದೇ ಪ್ರಮಾಣದಲ್ಲಿ ಒಳರಿವು ಮುಂದುವರೆದರೆ ಜಲಾಶಯ ಯಾವ ಕ್ಷಣದಲ್ಲಾದರೂ ಭರ್ತಿಯಾಗಿ ಕೊಡಿಬಿಳಬಹುದು. ವೇದಾವತಿ ನದಿ ಪಾತ್ರದ ಗ್ರಾಮಸ್ಥರು ಎಚ್ಚರಿಕೆಯಿಂದ ಹಾಗೂ ಸುರಕ್ಷಿತ ಜಾಗಗಳಲ್ಲಿ ಇರುವಂತೆ ವಿಶ್ವೇಶ್ವರಯ್ಯ ಜಲ ನಿಗಮದ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆಂದು ತಹಶೀಲ್ದಾರ್ ಎಂ. ಸಿದ್ದೇಶ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now