Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸಿಎಂ ಆಗೋದಕ್ಕೆ ನಂಗೆ ಆತುರವೇನು ಇಲ್ಲ : ಡಿಕೆ ಶಿವಕುಮಾರ್

ಡಿಕೆ ಶಿವಕುಮಾರ್
---Advertisement---

ಬೆಂಗಳೂರು: ಸಿಎಂ ಸ್ಥಾನದ ರೇಸ್ ನಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಮೊದಲ ಸಾಲಿನಲ್ಲಿ ಇದ್ದಾರೆ. ಇದೇ ಅವಧಿಯಲ್ಲಿಯೇ ನಾನು ಕೂಡ ಸಿಎಂ ಆಗ್ತೀನಿ ಎಂಬ ಆಸೆಯನ್ನ ಇಟ್ಟುಕೊಂಡಿದ್ದಾರೆ. ಆದ್ರೆ ಕೆಲವೊಂದು ಪರಿಸ್ಥಿತಿ ಸಿಎಂ ಹುದ್ದೆ ಬದಲಾವಣೆ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಅದರಲ್ಲೂ ಡಿಕೆ ಶಿವಕುಮಾರ್ ಅವರು ನನಗೆ ಸಿಎಂ ಆಗುವ ಆತುರವೇನು ಇಲ್ಲ ಎಂದಿದ್ದಾರೆ.

ಅದರಲ್ಲೂ ಸೆಪ್ಟೆಂಬರ್ ಕ್ರಾಂತಿ ಸೈಲೆಂಟ್ ಆದ್ಮೇಲೆ ನವೆಂಬರ್ ಕ್ರಾಂತಿ ಬಗ್ಗೆ ಚರ್ಚೆ ಶುರುವಾಗಿದೆ. ಈ ಸಂಬಂಧ ವಿಪಕ್ಷಗಳಿಗೆ ಡಿಕೆ ಶಿವಕುಮಾರ್ ಟಾಂಗ್ ಕೊಟ್ಟಿದ್ದಾರೆ. ಮುಖ್ಯಮಂತ್ರಿ ಆಗುವುದಕ್ಕೆ ನನಗೆ ಆತುರವಿಲ್ಲ. ಯಾರೋ ಪಬ್ಲಿಕ್ ನೀವೂ ಸಿಎಂ ಆಗುವ ಸಮಯ ಹತ್ತಿರ ಬರಲಿ ಎಂದರು. ನಾನು ಅದಕ್ಕೆ ಪ್ರತಿಕ್ರಿಯೆ ನೀಡಿಲ್ಲ. ನನ್ನ ಹೇಳಿಕೆಯನ್ನು ತಿರುಚುವ ಕೆಲಸ ಆಗ್ತಿದೆ. ಯಾರೋ ನಾಗರಿಕರು ಮುಖ್ಯಮಂತ್ರಿ ಆಗುವ ಸಮಯ ಹತ್ತಿರ ಬಂತಾ ಅಂತ ಕೇಳಿದ್ರು. ಅದಕ್ಕೆ ನಾನು ಉತ್ತರಿಸಿಲ್ಲ. ನನ್ನ ಮಾತು ಹತ್ರ ಬರ್ತಿದೆ ಅಂತ ತಿರುಚಲಾಗಿದೆ. ಆ ರೀತಿ ತೋರಿಸಬೇಡಿ. ಸುಳ್ಳು ನ್ಯೂಸ್ ಕ್ರಿಯೇಟ್ ಮಾಡ್ತೀರಾ..? ಮೀಡಿಯಾದವರು ರಾಜಕಾರಣ ಮಾಡಬೇಡಿ.

ನಾನು ಮುಖ್ಯಮಂತ್ರಿ ಆಗೋ ಟೈಂ ಹತ್ತಿರ ಬಂದಿದೆ ಅಂತ ಹೇಳಿಲ್ಲ. ನನ್ನ ರಾಜ್ಯದ ಜನರಿಗೆ ಒಳ್ಳೆಯ ಕೆಲಸ ಮಾಡಲು ಹೊರಟಿದ್ದೇನೆ. ಸುಳ್ಳು ಸುದ್ದಿ ಹಾಕಿದ್ರೆ ಮಾನನಷ್ಟ ಕೇಸ್ ಹಾಕ್ತೀನಿ ಎಂದು ಸುಳ್ಳು ಸುದ್ದಿ ಹಬ್ಬಿಸಿದವರಿಗೆ ಎಚ್ಚರಿಕೆ ನೀಡಿದ್ದಾರೆ. ಮುಂದಿನ ದಿನಗಳಲ್ಲಿ ಖಂಡಿತ ಸಿಎಂ ಆಗ್ತೀನಿ ಎಂಬ ಭರವಸೆಯನ್ನ ಡಿಸಿಎಂ ಡಿಕೆ ಶಿವಕುಮಾರ್ ಇಟ್ಟುಕೊಂಡಿದ್ದಾರೆ.

 

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now