ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಬೆಂಗಳೂರು: ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಕೇಸಲ್ಲಿ ಹೇಗೋ ಜಾಮೀನು ಪಡೆದು ಹೊರಗೆ ಬಂದಿದ್ದ ದರ್ಶನ್ ಮತ್ತೆ ಅದೇ ಜೈಲುಪಾಲಾಗಿದ್ದಾರೆ. ಆದರೆ ಮೊದಲೇ ಇದ್ದ ಬೆನ್ನು ನೋವಿಗೆ ಸರ್ಜರಿ ಮಾಡಿಸಿಕೊಳ್ಳದೆ, ಇಂದು ಅದರಿಂದ ಭಾರೀ ನೋವು ಅನುಭವಿಸುವಂತಾಗಿದೆ. ಕೂರಲು ಆಗ್ತಿಲ್ಲ, ಮಲಗಲು ಆಗ್ತಿಲ್ಲ ಎಂಬ ಸ್ಥಿತಿಗೆ ಬಂದಿದ್ದಾರೆ. ವೈದ್ಯರು ಕೂಡ ಒಂದಷ್ಟು ಸಲಹೆಯನ್ನ ನೀಡಿದ್ದಾರೆ.
ಸದ್ಯಕ್ಕೆ ಸಿವಿ ರಾಮನ್ ಆಸ್ಪತ್ರೆಯ ವೈದ್ಯರು ವಾರಕ್ಕೆ ಎರಡು ಬಾರಿ ಫಿಸಿಯೋಥೆರಪಿ ಚಿಕಿತ್ಸೆಯನ್ನ ನೀಡುತ್ತಿದ್ದಾರೆ. ಆದರೂ ಇನ್ನಷ್ಟು ಆರೋಗ್ಯದ ಕಾಳಜಿ ಬೇಕು ಎಂಬುದನ್ನ ವೈದ್ಯರು ತಿಳಿಸಿದ್ದಾರೆ. ನೆಲದ ಮೇಲೆ ಕೂರಬಾರದು, ಹೀಟಿಂಗ್ ಬೆಲ್ಟ್ ಕೊಡಿ ಎಂಬುದನ್ನ ತಿಳಿಸಿದ್ದಾರೆ. ಯಾಕಂದ್ರೆ ಈ ಮೊದಲೇ ದರ್ಶನ್ ಅವರಿಗೆ ಮೊಣಕೈ ಆಪರೇಷನ್ ಕೂಡ ಆಗಿದೆ. ಹೀಗಾಗಿ ಅಲ್ಲಿ ರಾಡ್ ಹಾಕಿರುವ ಕಾರಣ ಅದಕ್ಕೆ ಕೋಲ್ಡ್ ಆಗಬಾರದು. ಹೀಗಾಗಿ ಹೀಟಿಂಗ್ ಬೆಲ್ಟ್ ಅನ್ನು ನೀಡಿ ಎಂದಿದ್ದಾರೆ.
ಇನ್ನು ಜೈಲಿಗೆ ಭೇಟಿ ಕೊಟ್ಟು ಅಧಿಕಾರಿಗಳು ವರದಿ ರೆಡಿ ಮಾಡಿ ಕೋರ್ಟ್ ಗೆ ಸಲ್ಲಿಕೆ ಮಾಡಿದ್ದು, ಸೌಲಭ್ಯವನ್ನ ಕೊಡಬೇಕಿದೆ ಎಂದಿದ್ದಾರೆ. ಈ ವರದಿಯನ್ನು ತಿಳಿದ ನಟ ದರ್ಶನ್ ಜೈಲಿನಲ್ಲಿಯೇ ಕೂಗಾಡಿದ್ದಾರೆ ಎನ್ನಲಾಗಿದೆ. ನಾನು ಜೈಲಿನಲ್ಲಿ ಹೀಗೆ ಇರಬೇಕಾ..? ನನಗೆ ಯಾವುದೇ ಸೌಲಭ್ಯ ಕೊಡುವುದಿಲ್ಲವಾ ಎಂದು ರೇಗಿದ್ದಾರಂತೆ. ಜೊತೆಗೆ ಇದ್ದ ಸ್ನೇಹಿತ ನಾಗರಾಜ್ ಸಮಾಧಾನ ಮಾಡಿದ್ದಾರೆ ಎನ್ನಲಾಗಿದೆ. ಸದ್ಯ ನಟ ದರ್ಶನ್ ಜೈಲಿನಲ್ಲಿ ಹಾಸಿಗೆ, ದಿಂಬಿಗಾಗಿ ಅರ್ಜಿ ಮೇಲೆ ಅರ್ಜಿಯನ್ನ ಹಾಕುತ್ತಿದ್ದಾರೆ. ಆದರೂ ಯಾವುದೇ ರೀತಿಯ ಸೌಲಭ್ಯ ಸಿಗುತ್ತಿಲ್ಲ ಎಂದು ವರದಿಯಲ್ಲೂ ಉಲ್ಲೇಖವಾಗಿದೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್