ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ, ಚಳ್ಳಕೆರೆ
ಮೊ : 8431413188
ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 21 : ವೇದಾಧ್ಯನ ವಿಧ್ಯಾರ್ಥಿ ಪೊಷಕರಿಗೆ ಪೋನ್ ಮಾಡಿದನೆಂಬ ಕ್ಷುಲ್ಲಕ ಕಾರಣಕ್ಕೆ ಮುಖ್ಯ ಶಿಕ್ಷಕ ವೀರೇಶ್ ಹಿರೇಮಠ ಅವರು ವಿದ್ಯಾರ್ಥಿಗೆ ಮನಸೋ ಇಚ್ಚೆ ಥಳಿಸು, ಕಾಲಿಂದ ತುಳಿದು ಜಾಡಿಸಿ ಹೊಡೆದು ಹಲ್ಲೆಮಾಡಿ ಕ್ರೌರ್ಯ ಮೆರೆದಿದ್ದಾನೆ.
ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ನಾಯಕನಹಟ್ಟಿಯಲ್ಲಿರುವ ಶ್ರೀ ಗುರು ತಿಪ್ಪೇರುದ್ರಸ್ವಾಮಿ ಸಂಸ್ಕೃತ, ವೇದ ವೀರಶೈವಾಗಮ ಪಾಠ ಶಾಲೆಯಲ್ಲಿ ಈ ಘಟನೆ ನಡೆದಿದೆ. ಮುಖ್ಯ ಶಿಕ್ಷಕ ವೀರೇಶ್ ಹಿರೇಮಠ ಎಂಬುವವರು ವಿಧ್ಯಾರ್ಥಿಗೆ ಕಾಲಿನಿಂದ ತಳಿದು ಹಲ್ಲೆ ಮಾಡಿದ್ದಾನೆ. ಬಾಲಕ ಕೈ ಮುಗಿದರೂ ಬಿಡದೆ ಕಾಲಲ್ಲಿ ತುಳಿದು ಮನಸೋ ಇಚ್ಚೆ ಥಳಿಸಿದ್ದಾನೆ. ಪೊಷಕರಿಗೆ ಫೋನ್ ಮಾಡಿದ್ದಕ್ಕೆ ಅಮಾನವೀಯವಾಗಿ ಹಲ್ಲೆ ಮಾಡಿದ್ದಾನೆ.

ನಾಯಕನಹಟ್ಟಿ ಗುರು ತಿಪ್ಪೇರುದ್ರ ಸ್ವಾಮಿ ದೇವಾಲಯದ ಸುಪರ್ದಿಯಲ್ಲಿರುವ ಶಾಲೆ ಇದಾಗಿದ್ದು ವಿದ್ಯಾರ್ಥಿ ಮೇಲೆ ಕ್ರೌರ್ಯ ಮೆರೆದ ಶಿಕ್ಷಕನ ದೃಶ್ಯ ಮೊಬೈಲ್ ನಲ್ಲಿ ಸೆರೆಯಾಗಿದೆ. ಎಲ್ಲೆಡೆ ವೈರಲ್ ಆಗಿದೆ. ವಿದ್ಯಾರ್ಥಿಯ ಮೇಲಿನ ಹಲ್ಲೆಗೆ ಸರ್ವಾಜನಿಕ ವಲಯದಲ್ಲಿ ತ್ರೀವ ಆಕ್ರೋಶ ವ್ಯಕ್ತವಾಗುತ್ತಿದೆ.
ವಿದ್ಯಾರ್ಥಿಯನ್ನು ಚಿತ್ರಹಿಂಸೆ ನೀಡಿದ ಮುಖ್ಯ ಶಿಕ್ಷಕ ವೀರೇಶ್ ಹಿರೇಮಠ್ ಮೇಲೆ ಕಾನೂನು ಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.









