ಸುದ್ದಿಒನ್, ಹಿರಿಯೂರು, ಅಕ್ಟೋಬರ್. 23 : ಹಿರಿಯೂರು ವಿಧಾನಸಭಾ ಕ್ಷೇತ್ರದಲ್ಲಿ ಓಡಾಟ ಮಾಡುತ್ತಿರುವ ಸತೀಶ್ ಗೌಡ ಎಂಬ ಅನಾಮಧೇಯ ವ್ಯಕ್ತಿಗೂ ಹಾಗೂ ಜೆಡಿಎಸ್ ಪಕ್ಷಕ್ಕೂ ಸಂಬಂಧವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆಂದು ತಾಲೂಕು ಜೆಡಿಎಸ್ ಅಧ್ಯಕ್ಷ ಹನುಮಂತರಾಯಪ್ಪ ಹೇಳಿದರು.
ಪತ್ರಿಕಾ ಪ್ರಕಟಣೆ ಹೇಳಿಕೆ ನೀಡಿರುವ ಅವರು ಗುರುವಾರ ದೂರವಾಣಿ ಮೂಲಕ ಕರೆ ಮಾಡಿ ಮಾತನಾಡಿ ಅವರು ಕ್ಷೇತ್ರದಲ್ಲಿನ ಅಭಿವೃದ್ಧಿ, ರೈತರ ಸಮಸ್ಯೆಗಳು ಹಾಗೂ ಪ್ರಸ್ತುತ ರಾಜಕೀಯ ವಿದ್ಯಮಾನಗಳ ಬಗ್ಗೆ ಮಾಹಿತಿ ಪಡೆದುಕೊಂಡರು ಎಂದರು.
ಹಿರಿಯೂರು ವಿಧಾನಸಭಾ ಕ್ಷೇತ್ರದಲ್ಲಿ 2028ರ ವಿಧಾನಸಭಾ ಚುನಾವಣೆಯ ನಾನೇ ಜೆಡಿಎಸ್ ಅಭ್ಯರ್ಥಿ ಎಂದು ವ್ಯಕ್ತಿ ಸುಳ್ಳು ಹೇಳಿಕೊಂಡು ಪಕ್ಷದ ಸಂಘಟನೆಯಲ್ಲಿ ಸತೀಶ್ ಗೌಡ ಗೊಂದಲ ಸೃಷ್ಟಿಸಿರುತ್ತಿರುವುದು ನನ್ನ ಗಮನಕ್ಕೆ ಬಂದಿದೆ. ಸುಖ ಸುಮ್ಮನೆ ಮುಂದೇನಾದರೂ ಪಕ್ಷದ ವರಿಷ್ಠರ ಭಾವಚಿತ್ರಗಳು, ಪಕ್ಷದ ಚಿಹ್ನೆ, ಶಾಲು ಬಳಕೆ ಮಾಡಿಕೊಂಡು ಸಂಘಟನೆಯಲ್ಲಿ ಗೊಂದಲ ಮೂಡಿಸಿದರೆ ನಿರ್ದಾಕ್ಷಣವಾಗಿ ಕಾನೂನು ಕ್ರಮ ಕೈಗೊಳ್ಳುವಂತೆ ಹಾಗೂ ಪಕ್ಷದ ಮುಖಂಡರು ಪರೋಕ್ಷವಾಗಿ ಸತೀಶ್ ಗೌಡಗೆ ಬೆಂಬಲ ಸೂಚಿಸಿದರೆ ಅಂತವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ. ಇದೇ ವೇಳೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರನ್ನು ಹಿರಿಯೂರು ಕ್ಷೇತ್ರಕ್ಕೆ ಬರುವಂತೆ ಆಹ್ವಾನ ನೀಡಲಾಗಿದೆ. ಶೀಘ್ರದಲ್ಲೇ ಕೇಂದ್ರ ಸಚಿವರು ಬರಲಿದ್ದಾರೆ ಎಂದು ಜೆಡಿಎಸ್ ತಾಲೂಕು ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದರು.







