ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817
ಸುದ್ದಿಒನ್, ಚಿತ್ರದುರ್ಗ ಆ. 25 : ರೋಟರಿ ಕ್ಲಬ್ ಚಿತ್ರದುರ್ಗ,ವಾಸವಿ ಕ್ಲಬ್ ಚಿತ್ರದುರ್ಗ, ಲಕ್ಷ್ಮಿ ಸರ್ಜಿಕಲ್ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ರಾಣೇಬೆನ್ನೂರು, ಇವರುಗಳ ಸಂಯುಕ್ತಾಶ್ರಯದಲ್ಲಿ ಚಳ್ಳಕೆರೆ ರಸ್ತೆಯ “ಎಸ್.ಆರ್.ಬಿ.ಎಂ.ಎಸ್. ಸೇವಾ ಭವನದಲ್ಲಿ ಶನಿವಾರ ಮೊಣಕಾಲು ಮಂಡಿ ಚಿಪ್ಪು ಮತ್ತು ಚಪ್ಪೆ ಬದಲಾವಣೆ ಆಪರೇಷನ್” ಗಳಿಗಾಗಿ ವಿಶೇಷ ಉಚಿತ ತಪಾಸಣಾ ಶಿಬಿರ ಏರ್ಪಡಿಸಲಾಗಿತ್ತು.
ಈ ದಿನ ಬೆಳಿಗ್ಗೆ 11 ಗಂಟೆಯಿಂದ 3:00 ಗಂಟೆಯವರೆಗೆ ನಡೆದ ಈ ಶಿಬಿರದಲ್ಲ್ಲಿ 45ಕ್ಕೂ ಹೆಚ್ಚು ಜನ ಪರೀಕ್ಷೆಗೆ ಒಳಗಾಗಿ ಹೆಚ್ಚಿನ ಚಿಕಿತ್ಸೆಗಾಗಿ ಆರು ಜನ ಆಯ್ಕೆಯಾಗಿದ್ದಾರೆ.
ಈ ಕಾರ್ಯಕ್ರಮದಲ್ಲಿ ಡಾ. ಸಂಜೀವ್ ಎಂ.ಮುದ್ರಿ ಹಾಗೂ ಡಾಕ್ಟರ್ ಕೊಟ್ರೇಶ್, ರೋಟರಿ ಅಧ್ಯಕ್ಷರಾದ ಭಾಗ್ಯಲಕ್ಷ್ಮಿ ಮೂರ್ತಿ, ಕಾರ್ಯದರ್ಶಿ ಅನುರಾಧ ವಿಶ್ವನಾಥ್, ವಾಸವಿ ಕ್ಲಬ್ಬಿನ ಅಧ್ಯಕ್ಷರಾದ ರಾಜೇಶ್ವರಿ ಸಿದ್ರಾಮ್, ಸರ್ವಿಸ್ ಪ್ರಾಜೆಕ್ಟ್ ಚೇರ್ಮನ್ ಎ.ಆರ್. ಲಕ್ಷ್ಮಣ್, ಕ್ಲಬ್ ಟ್ರೈನರ್ ಕನಕ ರಾಜ್, ಎಸ್.ವೀರೇಶ್, ಭಾಗವಹಿಸಿದ್ದರು
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.












