Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಶ್ರೀರಾಮುಲು ಕೊಟ್ಟ 300 ಕೋಟಿ ಹಣವನ್ನೇ ಬಿಹಾರ ಚುನಾವಣೆಗೆ ಬಳಸಿದ್ದೇವೆ : ಡಿಕೆಶಿ ಶಾಕಿಂಗ್ ಹೇಳಿಕೆ

---Advertisement---

ಬೆಂಗಳೂರು: ಬಿಹಾರ ಚುನಾವಣೆಯ ಬಗ್ಗೆ ಕರ್ನಾಟಕ ರಾಜ್ಯದಲ್ಲಿ ಜೋರು ಚರ್ಚೆಯಾಗುತ್ತಿದೆ. ಬಿಹಾರ ಎಲೆಕ್ಷನ್ ಗೆ ರಾಜ್ಯದಿಂದ ಹಣ ಸಾಗಾಟ ಆಗ್ತಿದೆ ಎಂಬ ಆರೋಪವನ್ನ ಬಿಜೆಪಿ ನಾಯಕರು ಮಾಡುತ್ತಿದ್ದಾರೆ. ಇದರ ಮಧ್ಯೆ ಶ್ರೀರಾಮುಲು ಅವರು , ಬಿಹಾರ ಚುನಾವಣೆಗೆ ಸಿಎಂ ಹಾಗೂ ಡಿಸಿಎಂ ಕಡೆಯಿಂದ 300 ಕೋಟಿ ದೇಣಿಗೆ ಹೋಗಿದೆ ಎಂದಿದ್ದರು.

ಶ್ರೀರಾಮುಲು ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಡಿಸಿಎಂ ಡಿಕೆ ಶಿವಕುಮಾರ್ ಅವರು, ಶ್ರೀರಾಮುಲು ಅವರು ಕಾಂಗ್ರೆಸ್ ಪಕ್ಷಕ್ಕೆ ಅಂತ ದೇಣಿಗೆ ನೀಡಿದ್ದರು. ನಾವೂ ಅದನ್ನೇ ಬಿಹಾರ ಚುನಾವಣೆಗಾಗಿ ನೀಡಿದ್ದೇವೆ ಎಂದು ಶ್ರೀರಾಮುಲು ಹೇಳಿಕೆಗೆ ಟಾಂಗ್ ನೀಡಿದ್ದಾರೆ.

ಇದೇ ವೇಳೆ ರಾಹುಲ್ ಗಾಂಧಿ ಅವರು ರಾಜ್ಯಕ್ಕೆ ರಾಹುಲ್ ಗಾಂಧಿ ಬರ್ತಾ ಇರುವ ಕಾರ್ಯಕ್ರಮದ ಬಗ್ಗೆ ಮಾತನಾಡಿ, ರಾಹುಲ್ ಗಾಂಧಿ ಅವರು ಇದೇ ತಿಂಗಳು 29 ರಂದು ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಕಾಂಗ್ರೆಸ್ ಕಚೇರಿ ಶಂಕು ಸ್ಥಾಪನೆಗೆ ಇನ್ನೂ ದಿನಾಂಕ ಅಂತಿಮವಾಗಿಲ್ಲ. ನಾನು ಮನವಿ ಸಲ್ಲಿಸಿದ್ದೇನೆ. ಕಚೇರಿ ನಿರ್ಮಾಣ ವಿಚಾರದಲ್ಲಿ ಸಚಿವರು, ಸಂಸದರು, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು ಸೇರಿದಂತೆ ಯಾರ್ಯಾರು ಆಸಕ್ತಿ ತೋರಿದ್ದಾರೆ, ಯಾರು ತೋರಿಲ್ಲ ಎಂದು ವರದಿ ನೀಡುವಂತೆ ಹೈಕಮಾಂಡ್ ನಾಯಕರು ಕೇಳಿದ್ದಾರೆ. ನಾನು ಕೂಡ ವರದಿ ಸಿದ್ಧಪಡಿಸುತ್ತಿದ್ದು, ಅದನ್ನು ಕಳುಹಿಸಬೇಕು. ಆನಂತರ ಅವರು ದಿನಾಂಕ ನಿಗದಿ ಮಾಡುತ್ತಾರೆ ಎಂದು ರಾಹುಲ್ ಗಾಂಧಿ ಬರುವಿಕೆಯ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಸದ್ಯ ಕಾಂಗ್ರೆಸ್ ಪಕ್ಷದಲ್ಲಿ ಸಾಕಷ್ಟು ಬೆಳವಣಿಗೆ ನಡೆಯುತ್ತಿದ್ದು, ಆ ಬಗ್ಗೆಯೂ ಚರ್ಚೆಯಾಗುವ ಸಾಧ್ಯತೆ ಇದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now