Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ದರ್ಶನ್, ಪವಿತ್ರಾ ಸೇರಿದಂತೆ ಆರೋಪಿಗಳ ಮೇಲೆ ದೋಷಾರೋಪ ಪಟ್ಟಿಗೆ ದಿನಾಂಕ ನಿಗದಿ : ಯಾವಾಗ ಗೊತ್ತಾ..?

---Advertisement---

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಆರೋಪಿಗಳ ಮೇಲೆ ತೂಗುಗತ್ತಿ ಇದೆ. ಯಾಕಂದ್ರೆ ಪೊಲೀಸರು ದೋಷಾರೋಪ ಪಟ್ಟಿ ಸಲ್ಲಿಸಲು ದಿನಾಂಕ ನಿಗದಿ ಮಾಡಿಕೊಂಡಿದ್ದಾರೆ. ಅದುವೆ ನವೆಂಬರ್ 3 ರಂದು. ಇನ್ನು ಈಗ ಜೈಲು ಸೇರಿರುವ ಆರೋಪಿಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ಆರೋಪಿಗಳು ಕೂಡ ನವೆಂಬರ್ 3ರಂದು ವಿಚಾರಣೆಗೆ ಹಾಜರಾಗಬೇಕು. ಇಲ್ಲವಾದರೆ ಆರೋಪಿಗಳ ವಿರುದ್ಧ ಜಾಮೀನು ರಹಿತ ವಾರೆಂಟ್ ಅನ್ನು ಹೊರಡಿಸಲಾಗುವುದು ಎಂಬುದನ್ನು ಕೋರ್ಟ್ ತಿಳಿಸಿದೆ.
ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಎಲ್ಲಾ ಆರೋಪಿಗಳು ಕೋರ್ಟ್ ಗೆ ಹಾಜರಾಗಿದ್ದರು. ಕೋರ್ಟ್ ಜಡ್ಜ್ ಇಂದೇ ಆರೋಪಿಗಳ ವಿರುದ್ಧ ದೋಷಾರೋಪ ಹೊರಿಸುವುದಾಗಿ ಹೇಳಿದ್ದರು. ಆದರೆ ನಟ ದರ್ಶನ್ ಪರ ವಕೀಲರಾದ ಸುನೀಲ್ ಕುಮಾರ್ ಅವರು ಸ್ವಲ್ಪ ಕಾಲಾವಕಾಶ ಬೇಕು ಎಂದು ಕೋರ್ಟ್ ಗೆ ಮನವಿ ಮಾಡಿದ್ದಾರೆ. ಕೋರ್ಟ್ ಸಮಯವಾಕಾಶ ನೀಡುತ್ತಾ ಹೇಗೆ ಎಂಬುದನ್ನು ನೋಡಬೇಕಿದೆ.

ಇನ್ನು ನಟ ದರ್ಶನ್, ಪವಿತ್ರಾ ಗೌಡ ವಿರುದ್ಧ ಕೊಲೆ, ಹಲ್ಲೆ, ಕಿಡ್ನ್ಯಾಪ್, ಸಾಕ್ಷ್ಯಾ ನಾಶ, ಷಡ್ಯಂತ್ರ ಸೇರಿದಂತೆ ವಿವಿಧ ಆರೋಪಗಳನ್ನು ಹೊರಿಸುವ ಸಾಧ್ಯತೆಯೂ ಸಾಕಷ್ಟು ಇದೆ. ಈ ಸಂಬಂಧವೂ ಕೋರ್ಟ್ ನಲ್ಲಿ ವಾದ ಪ್ರತಿವಾದ ನಡೆಯಲಿದೆ. ಸದ್ಯ ರೇಣುಕಾಸ್ವಾಮಿ ಕೊಲೆ ಆರೋಪದಲ್ಲಿ ಸಿಕ್ಕಿರುವ ಸಾಕ್ಷ್ಯಾಧಾರಗಳನ್ನೆಲ್ಲಾ ಲೆಕ್ಕ ಹಾಕಿ ಆರೋಪ ಪಟ್ಟಿ ಹೊರಿಸುವ ಸಾಧ್ಯತೆ ಇದೆ. ಇಂದು ದರ್ಶನ್ ಅವರ ಮಗ ವಿನೀಶ್ ಅವರ ಬರ್ತ್ ಡೇ ಕೂಡ ಇದೆ. ಆದರೆ ಕುಟುಂಬಸ್ಥರು ದರ್ಶನ್ ಜೈಲಿನಲ್ಲಿರುವ ನೋವಲ್ಲಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...