Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಲಿಂಗಾಯತರ ಬಗ್ಗೆ ಅವಹೇಳನ : ಕನ್ನೇರಿ ಸ್ವಾಮೀಗೆ ಕೋರ್ಟ್ ನಿರ್ಬಂಧ..!

---Advertisement---

ಬೆಂಗಳೂರು: ಲಿಂಗಾಯತ ಸಮುದಾಯದ ಬಗ್ಗೆ ಅವಹೇಳನಕಾರಿಯಾಗಿ ನಾತನಾಡಿದ್ದ ಕನ್ನೇರಿ ಮಠದ ಕಾಡುಸಿದ್ದೇಶ್ವರ ಸ್ವಾಮಿಗೆ ಕೋರ್ಟ್ ನಿಷೇಧ ಮಾಡಿ ಆದೇಶ ಹೊರಡಿಸಿದೆ. ಮಹಾರಾಷ್ಟ್ರದ ಜತ್ತ ತಾಲೂಕಿನ ಬೀಳೂರು ಗ್ರಾಮದಲ್ಲಿ ನಡೆದ ಸಮಾರಂಭಕ್ಕೆ ತೆರಳಿದ್ದ ಕಾಡಸಿದ್ದೇಶ್ವರ ಸ್ವಾಮೀಜಿ, ಕರ್ನಾಟಕದ ಕೆಲ ಲಿಂಗಾಯತ ಸ್ವಾಮೀಜಿಗ ವಿರುದ್ಧ ವಾಗ್ದಾಳಿ ನಡೆಸಿದ್ದರು. ಕಳೆದ ಎರಡು ತಿಂಗಳಿನಿಂದ ದೇವಾಲಯಕ್ಕೆ ಹೋಗಬೇಡಿ ಎಂದು ಪ್ರಚಾರ ಮಾಡಲಾಗುತ್ತಿದೆ. ಮುಖ್ಯಮಂತ್ರಿಗಳ ಕೃಪಾಪೋಷಿಯ ಲಿಂಗಾಯತ ಮಠಾಧೀಪತಿಗಳ ಒಕ್ಕೂಟದ ಕಲಾವಿದರು ಸೇರಿ ಬಸವ ಸಂಸ್ಕೃತಿ ಅಭಿಯಾನ ಎನ್ನುವ ನಾಟಕವನ್ನು ರಾಜ್ಯಾದ್ಯಂತ ಮಾಡುತ್ತಿದ್ದಾರೆ. ಗುಡಿಯಲ್ಲಿ ದೇವರಿಲ್ಲ ಮನೆಯಲ್ಲಿನ ದೇವರನ್ನು ಹೊಳೆಗೆ ಹಾಕಿ ಎನ್ನುತ್ತಿದ್ದಾರೆ. ಇವರಿಗೆ ನಾನೇ ಬುದ್ದಿ ಹೇಳಬೇಕು ಎಂದು ಕೆಲ ಅಸಂವಿಧಾನಿಕ ಪದ ಬಳಕೆ ಮಾಡಿದ್ದರು.

ಈ ಸಂಬಂಧ ಲಿಂಗಾಯತ ಮಠಗಳ ಒಕ್ಕೂಟ ದಾಖಲಿಸಿದ ಮಾನನಷ್ಟ ಮೊಕದ್ದಮೆಯಲ್ಲಿ ಒಂದು ಕೋಟಿ ರೂಪಾಯಿ ಪರಿಹಾರಕ್ಕೆ ಒತ್ತಾಯಿಸಿತ್ತು. ಸ್ವಾಮೀಜಿ ಹೇಳಿಕೆಯಿಂದ ಲಿಂಗಾಯತ ಮಠಗಳ ಒಕ್ಕೂಟದ ಗೌರವಕ್ಕೆ ಧಕ್ಕೆಯಾಗಿದೆ. ಇಂತಹ ಹೇಳಿಕೆ ನೀಡದಂತೆ ಸ್ವಾಮೀಜಿಗೆ ನಿರ್ಬಂಧ ವಿಧಿಸುವಂತೆ ಮನವಿ ಮಾಡಿದ್ದರು.

 

ಈ ಪ್ರಕರಣ ಸಂಬಂಧ ಒಕ್ಕೂಟದ ಪರವಾಗಿ ವಕೀಲೆ ವಿಜೇತಾ ಆರ್. ನಾಯ್ಕ್ ವಾದ ಮಂಡಿಸಿದರು. ಈ ವಾದ ಆಲಿಸಿದ ಬೆಂಗಳೂರಿನ 31 ನೇ ಸಿಸಿಹೆಚ್ ಕೋರ್ಟ್, ಅವಹೇಳನಕಾರಿ ಹೇಳಿಕೆ ನೀಡದಂತೆ ನಿರ್ಬಂಧಿಸಿ ಮಧ್ಯಂತರ ಆದೇಶಿಸಿದ್ದು, ಈ ಬಗ್ಗೆ ಸ್ವಾಮೀಜಿಗೆ ನೋಟಿಸ್ ಜಾರಿ ಮಾಡಿದೆ. ಸ್ವಾಮೀಜಿಗೆ ವಿಜಯಪುರ ಜಿಲ್ಲಾ ಪ್ರವೇಶಕ್ಕೆ 2 ತಿಂಗಳ ನಿರ್ಬಂಧ ವಿಧಿಸಿ ಜಿಲ್ಲಾಡಳಿತ ಆದೇಶಿಸಿತ್ತು. ಇದನ್ನು ಪ್ರಶ್ನಿಸಿ ಸ್ವಾಮೀಜಿ ಕಲಬುರಗಿ ಹೈಕೋರ್ಟ್‌ ವಿಭಾಗೀಯ ಪೀಠದ ಮೊರೆ ಹೋಗಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...