ಡಿಕೆಶಿ ಆಗ್ಲಿ, ಸತೀಶ್ ಜಾರಕಿಹೊಳಿಯೂ ಅಲ್ಲ : ಯತ್ನಾಳ್ ಹೇಳಿದ ಹೆಸರೇನು..?

1 Min Read

ಬೆಂಗಳೂರು: ಕಾಂಗ್ರೆಸ್ ಸರ್ಕಾರದಲ್ಲಿ ಸದ್ಯದ ಹಾಟ್ ಟಾಪಿಕ್ ಅಂದ್ರೆ ಅದು ಸಿಎಂ ಬದಲಾವಣೆ ವಿಚಾರ. ಡಿಸಿಎಂ ಡಿಕೆ ಶಿವಕುಮಾರ್ ಈ ವಿಚಾರಕ್ಕೆ ತುದಿಗಾಲಲ್ಲಿ ನಿಂತಿರುವುದು ಎಲ್ಲರಿಗೂ ಗೊತ್ತಿರುವ ವಿಚಾರ. ಇದನ್ನ ಹೊರತುಪಡಿಸಿದರೆ ಸತೀಶ್ ಜಾರಕಿಹೊಳಿ ಅವರು ಕೂಡ ಸಿಎಂ ಆಗ್ತಾರೆ ಎಂಬ ಚರ್ಚೆ ಹುಟ್ಟುಕೊಂಡಿತ್ತು. ಇದೀಗ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಅವರು ಶಾಕಿಂಗ್ ನ್ಯೂಸ್ ಒಂದನ್ನ ಹೇಳಿದ್ದಾರೆ. ಸಿಎಂ ಬದಲಾದರೆ ಯಾರಾಗಬಹುದು ಎಂಬುದನ್ನು ಹೇಳಿದ್ದಾರೆ.

ಸಿಎಂ ಹುದ್ದೆಗೆ ಸಾಕಷ್ಟು ಪೈಪೋಟಿ ಇದೆ. ಆದರೆ ಯಾರೂ ಸಿಎಂ ಆಗುವುದಿಲ್ಲ. ಡಾರ್ಕ್ ಹಾರ್ಸ್ ಒಬ್ಬರು ಮುಖ್ಯಮಂತ್ರಿಯಾಗಲಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಿಎಂ ಆಗಲಿದ್ದಾರೆ ಎಂಬ ಮಾತನ್ನ ಹೇಳಿದ್ದಾರೆ. ಈ ಮೂಲಕ ಬಸನಗೌಡ ಪಾಟೀಲ್ ಮಲ್ಲಿಕಾರ್ಜುನ ಖರ್ಗೆ ವಿಚಾರವನ್ನ ಹುಟ್ಟುಹಾಕಿದ್ದಾರೆ.

ಯಾರು ಸಿಎಂ ಆಗಬೇಕು ಅಂತ ನಿರ್ಧಾರ ಮಾಡುತ್ತಾರೆಯೇ? ಎಂದರು. ನವೆಂಬರ್ ಕ್ರಾಂತಿ ಏನೂ ನಡೆಯಲ್ಲ. ಉತ್ತರಾಧಿಕಾರಿ ವಿಚಾರದಲ್ಲಿ ಯತೀಂದ್ರ ಅವರ ಹೇಳಿಕೆ‌ ಅದು ಅವರು ವೈಯಕ್ತಿಕ‌ ವಿಚಾರ. ಸಿಎಂ ಮುಂದಿನ ಚುನಾವಣೆ ನಿಲ್ಲುವ ವಿಚಾರ ಅದು ಅವರು ವೈಯಕ್ತಿಕ ವಿಚಾರ. ಎಲ್ಲಾ ಸಮಾಜದವರು ಸಿಎಂ ಆಗಬೇಕು ಎಂದು ಬಯಸುತ್ತಾರೆ.‌ ದಲಿತ ಸಿಎಂ ವಿಚಾರ ಕೂಡಾ ಹಾಗೆ. ಅದನ್ನು ಎಲ್ಲಿ ಚರ್ಚೆ ನಡೆಸಬೇಕೋ ಅಲ್ಲೇ ನಡೆಸಬೇಕು ಎಂದು ಪ್ರಿಯಾಂಕ ಖರ್ಗೆ ಹೇಳಿದರು. ದಲಿತ ಸಿಎಂ ಒತ್ತಾಯವೂ ಕೇಳಿ ಬರ್ತಿದೆ. ಜೊತೆಗೆ ಇತ್ತೀಚೆಗಷ್ಟೇ ಮಲ್ಲಿಕಾರ್ಜುನ ಖರ್ಗೆ ಅವರು ಈ ಹಿಂದೆ ಸಿಎಂ ಆಗುವ ಅವಕಾಶ ಕೈ ತಪ್ಪಿದ್ದರ ಬಗ್ಗೆ ಮಾತನಾಡಿದ್ದರು.

Share This Article