ಸುದ್ದಿಒನ್, ಚಿತ್ರದುರ್ಗ, ನವೆಂಬರ್. 02 : ನಾಡಿನ ಹೆಸರಾಂತ ಸಾಹಿತಿ ಡಾ.ಬಿ.ಎಲ್.ವೇಣು ಅವರು ‘ಕೆಂಧೂಳಿ ರಾಜ್ಯೋತ್ಸವ’ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಕೆಂಧೂಳಿ ಪತ್ರಿಕೆ ಐದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಸಾಹಿತ್ಯ, ಪತ್ರಿಕೋದ್ಯಮ, ಕೃಷಿ ಮತ್ತು ಸಾಮಾಜಿಕ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ಗಣ್ಯರಿಗೆ ಪ್ರತಿ ವರ್ಷ ಪ್ರಶಸ್ತಿ ಕೊಡಲು ತೀರ್ಮಾನಿಸಿದೆ. ಈ ನಿಟ್ಟಿನಲ್ಲಿ ಚಿತ್ರದುರ್ಗದ ಹಿರಿಯ ಸಾಹಿತಿ ಡಾ.ಬಿ.ಎಲ್.ವೇಣು ಅವರಿಗೆ ಮೊದಲನೇ ವರ್ಷದ ಪ್ರಶಸ್ತಿಯನ್ನು ಕೊಡಲು ಸಮಿತಿ ಆಯ್ಕೆ ಮಾಡಿದೆ.
ಪ್ರಶಸ್ತಿಯೂ 10 ಸಾವಿರ ನಗದು, ಪ್ರಶಸ್ತಿ ಫಲಕ ಹೊಂದಿರುತ್ತದೆ. ಈ ಪ್ರಶಸ್ತಿಯನ್ನು ಶೀಘ್ರ ನೀಡಲಾಗುವದು.
ಡಾ.ಶಿವಕುಮಾರ್ ಕಂಪ್ಲಿ ಅಧ್ಯಕ್ಷತೆಯಲ್ಲಿ ತುರುವನೂರು ಮಂಜುನಾಥ, ಶ್ರೀದೇವಿ ಕೆರೆಮನೆ ಮತ್ತು ಪರಶಿವ ಧನಗೂರು
ಅವರ ಸಮಿತಿ ಈ ಆಯ್ಕೆ ಮಾಡಿದೆ.





