ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಬೆಂಗಳೂರು: ಬಿಹಾರದ ಚುನಾವಣೆಗೆ ಸಂಬಂಧಿಸಿದಂತೆ ಕರ್ನಾಟಕದಲ್ಲೂ ಪ್ರಚಾರ ಕಾರ್ಯ ಆರಂಭವಾಗಿದೆ. ಇತ್ತೀಚೆಗಷ್ಟೇ ಡಿಸಿಎಂ ಡಿಕೆ ಶಿವಕುಮಾರ್ ಅವರು ಬಿಹಾರಿಗಳನ್ನ ಭೇಟಿ ಮಾಡಿ, ಪ್ರಚಾರ ಮಾಡಿದ್ದಾರೆ. ಅದೇ ವೇಳೆ ಬಿಹಾರಿ ಮುಖಂಡರೆಲ್ಲಾ ಸೇರಿ ನೀವೆ ಮುಂದಿನ ಸಿಎಂ ಆಗ್ಬೇಕು ಎಂಬುದನ್ನು ಹೇಳಿದ್ದಾರೆ. ಮುಂದಿನ ಸಿಎಂ ಡಿಕೆಶಿ ಎಂಬ ಘೋಷಣೆಯನ್ನು ಕೂಗಿದ್ದಾರೆ.
ಈ ಸಂಬಂಧ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಬಿಹಾರದ ಚುನಾವಣೆಯ ಪ್ರಚಾರಕ್ಕೆ ನೀವೂ ಹೋಗ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಸಿದ್ದರಾಮಯ್ಯ ಅವರು, ನನಗಿನ್ನು ಯಾವುದೇ ರೀತಿಯ ಮಾಹಿತಿ ಬಂದಿಲ್ಲ. ಕರೆದಾಗ ಹೋಗ್ತೀನಿ ಎಂದಿದ್ದಾರೆ. ಜನ ಅಥವಾ ಮಾಧ್ಯಮಗಳು ಈ ಬಗ್ಗೆ ಚರ್ಚಿಸುವುದು ಅನಗತ್ಯ. ಹೈಕಮಾಂಡ್ ಆದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅಥವಾ ಮಲ್ಲಿಕಾರ್ಜುನ ಖರ್ಗೆ ಈ ಬಗ್ಗೆ ಯಾವುದೇ ಹೇಳಿಕೆ ನೀಡಿಲ್ಲ. ಹೀಗಾಗಿ ಹೈಕಮಾಂಡ್ ನಿರ್ಧಾರವೇ ಅಂತಿಮ. ಬೇರೆಯವರು ಮಾತನಾಡಿದರೆ ಅದಕ್ಕೆ ಕಿಮ್ಮತ್ತಿಲ್ಲ ಎಂದಿದ್ದಾರೆ.
ಆಂಟಿ ಇನ್ ಕಮ್ ಟ್ಯಾಕ್ಸ್, ಬಿಜೆಪಿಯವರ ಭ್ರಷ್ಟಾಚಾರ, ಮಹಿಳೆಯರಿಗೆ ಪ್ರತಿ ತಿಂಗಳು ಎರಡು ಸಾವಿರ ಕೊಡ್ತಾ ಇದ್ದೀವಿ. ನಿತೀಶ್ ಹಲವು ವರ್ಷಗಳಿಂದ ಮುಖ್ಯಮಂತ್ರಿಯಾಗಿದ್ದಾರೆ. ಆದ್ರೆ ಯಾವುದೇ ರೀತಿಯ ಸಿದ್ಧಾಂತ ಇಲ್ಲ. ಬಡತನ ಜಾಸ್ತಿ ಇದ್ದಾರೆ. ಹೀಗಾಗಿ ಬಡವರು, ಅಲ್ಪಸಂಖ್ಯಾತರು ಕಾಂಗ್ರೆಸ್ ಗೆ ಬೆಂಬಲ ಜಾಸ್ತಿ ಇದೆ. ಹೀಗಾಗಿ ಕಾಂಗ್ರೆಸ್ ಗೆ ಮತ ಹಾಕ್ತಾರೆ ಎಂಬ ಮಾತನ್ನ ಹೇಳಿದ್ದಾರೆ. ಸದ್ಯ ರಾಜ್ಯ ಕಾಂಗ್ರೆಸ್ ನಾಯಕರು ಕೂಡ ಬಿಹಾರದ ಚುನಾವಣೆಗೆ ಮತ ಪ್ರಚಾರ ಮಾಡ್ತಾ ಇದ್ದಾರೆ. ಅಲ್ಲಿಯೂ ಕಾಂಗ್ರೆಸ್ ಪಕ್ಷವನ್ನು ಆಡಳಿತಕ್ಕೆ ತರಬೇಕೆಂದು ಕೊಂಡಿದ್ದಾರೆ.


ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್