Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಇಂಡಿಯಾ ಬುಕ್ ಆಫ್ ರೆಕಾರ್ಡ್, ಗಿನ್ನಿಸ್ ರೆಕಾರ್ಡ್ ಪಡೆದ ಸರಸ್ವತಿ ಕೆ.ಸಿ ವೀರೇಂದ್ರ

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ, ನ. 06 : ಕೆ.ಸಿ ವೀರೇಂದ್ರರವರ ಮಗಳಾದ ಸರಸ್ವತಿ ಅವರು ಇತ್ತೀಚಿಗೆ ಕಿಬ್ಬೊಟ್ಟೆಯ ಪ್ಲ್ಯಾಂಕ್ ಸ್ಥಾನದ ವಿಭಾಗದಲ್ಲಿ 10 ಪೌಂಡ್ ತೂಕದ ಬ್ಯಾಗನ್ನು ಹೊತ್ತು 2 ನಿಮಿಷ 12 ಸೆಕೆಂಡುಗಳ ಸ್ಥಿರವಾಗಿ ಹಿಮ್ಮುಖ ಹೊಟ್ಟೆಯ  ಮೇಲೆ ಹೆಚ್ಚು ಸಮಯ ಇರಿಸಿಕೊಂಡು ಗಿನ್ನಿಸ್ ವರ್ಡ್ ರೆಕಾರ್ಡ್ ನಿರ್ಮಿಸಿದ್ದಾರೆ.

 

ಗಿನ್ನಿಸ್ ವರ್ಡ್ ರೆಕಾರ್ಡ್ ಸಂಸ್ಥೆಯು 2025ನೇ ಸಾಲಿನ ಸಾಧಕರನ್ನ ಪಟ್ಟಿಯನ್ನ ಬಿಡುಗಡೆಗೊಳಿಸಿ, ಅಧಿಕೃತ ಪ್ರಮಾಣ ಪತ್ರವನ್ನ ಸರಸ್ವತಿ ಕೆ.ಸಿ ವೀರೇಂದ್ರ ಅವರಿಗೆ ನೀಡಿ ಗೌರವಿಸಿದೆ.

ಕಳೆದ 2024ನೇ ಸಾಲಿನಲ್ಲಿ ಪಾಕಿಸ್ತಾನದ ಇರ್ಫಾನ್ ಮೆಹಸೂದ್ ಅವರು 2024ರಲ್ಲಿ 10 ಪೌಂಡ್ ತೂಕದ ಬ್ಯಾಗ್ ಹೊತ್ತು 2ನಿಮಿಷ 02 ಸೆಕೆಂಡುಗಳ ಕಾಲ ಸ್ಥಿರವಾಗಿ ಉಳಿದು ವಿಶ್ವದಾಖಲೆ ನಿರ್ಮಿಸಿದ್ದರು ಆದ್ರೆ ಭಾರತದ ಯುವತಿ ಸರಸ್ವತಿ ಕೆ.ಸಿ ವೀರೇಂದ್ರ ಅವರು ಆ ದಾಖಲೆಯನ್ನು 10 ಸೆಕೆಂಡುಗಳ ಕಾಲದ ಅಂತರದಲ್ಲಿ ಮುರಿದು, ಹೊಸ ಇತಿಹಾಸ ಬರೆದಿದ್ದಾರೆ. ಇದರಿಂದ ಭಾರತಕ್ಕೆ ಹೊಸ ಕೀರ್ತಿ, ಕರ್ನಾಟಕಕ್ಕೆ ಹೆಮ್ಮೆ ಮತ್ತು ಚಿತ್ರದುರ್ಗಕ್ಕೆ ಶಾಶ್ವತ ಗೌರವ ಲಂಬಿಸಿದೆ.
ಸರಸ್ವತಿ ಕೆ.ಸಿ ವೀರೇಂದ್ರ ಅವರು ಬೆಂಗಳೂರು ನಗರದ ಜೈನ ಇಂಟನ್ರ್ಯಾಷನಲ್ ರೆಸಿಡೆನ್ಸಿಯಲ್ ಸ್ಕೂಲ್ ನಲ್ಲಿ 9ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು,  ತರಬೇತಿದಾರರಾದ ತುಷಾರ್ ಸೋನಾಲಿಕರ್ ಅವರ ಮಾರ್ಗದರ್ಶನದಲ್ಲಿ ಸರಸ್ವತಿ ಕೆ.ಸಿ ವೀರೇಂದ್ರ ತಮ್ಮ ದೈಹಿಕ ಸಾಮಥ್ರ್ಯದ  ಮೂಲಕ ವಿಶ್ವ ಮಟ್ಟದಲ್ಲಿ ಗುರುತಿಸಿಕೊಂಡಿದ್ದಾರೆ.

2023 ನೇ ಸಾಲಿನ “ಲಾಂಗೆಸ್ಟ್ ಸಿಟ್ ಇನ್ ಥಾ ವಾಲ್ ಪೋಸಿಶನ್ ಆನ್ ಟೋ” ವಿಭಾಗದಲ್ಲಿ 2ಗಂಟೆ 36 ಸೆಕೆಂಡುಗಳ ಕಾಲ ಸ್ಥಿರವಾಗಿ ಉಳಿದು, `ಇಂಡಿಯಾ ಬುಕ್ ಆಫ್ ರೆಕಾಡ್ರ್ಸ್” ನಲ್ಲಿ ತಮ್ಮ ಹೆಸರು ದಾಖಲಿಸಿಕೊಂಡು, 2025 ನೇ ಸಾಲಿನ ಕಿಬ್ಬೊಟ್ಟೆಯ ಪ್ಲ್ಯಾಂಕ್ ಸ್ಥಾನದ ವಿಭಾಗದಲ್ಲಿ 10 ಪೌಂಡ್ ತೂಕದ ಬ್ಯಾಗನ್ನು ಹೊತ್ತು 2 ನಿಮಿಷ 12 ಸೆಕೆಂಡುಗಳ ಸ್ಥಿರವಾಗಿ ಹಿಮ್ಮುಖ ಹೊಟ್ಟೆಯ  ಮೇಲೆ ಹೆಚ್ಚು ಸಮಯ ಇರಿಸಿಕೊಂಡು ಗಿನ್ನಿಸ್ ವರ್ಡ್ ರೆಕಾರ್ಡ್ ನಿರ್ಮಿಸಿದ್ದಾರೆ.

ಕಠಿಣ ಪರಿಶ್ರಮ, ಅಚಲ ನಂಬಿಕೆ ಮತ್ತು ನಿರಂತರ ಅಭ್ಯಾಸದ ಮೂಲಕ ಯಾವ ದಾಖಲೆಯಾದರೂ ಕೂಡ ಮಾಡಬಹುದು, ತಂದೆ ತಾಯಿಗಳ ಪ್ರೇರಣೆಯಿಂದ ವಿಶ್ವದ ಮಟ್ಟದಲ್ಲಿ ನನ್ನ ಹೆಸರು ಗುರುತಿಸಿಕೊಂಡಿದೆ ಅದಕ್ಕೆ ತಂದೆ ತಾಯಿಗಳ ಆಶೀರ್ವಾದ ಅತ್ಯಂತ ಮುಖ್ಯವಾಗಿದೆ ಎಂದು ಸರಸ್ವತಿ ಕೆ.ಸಿ ವೀರೇಂದ್ರ ಅವರು ತಿಳಿಸಿದ್ದಾರೆ

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...