Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕುಂದಲಗುರ ಲಂಬಾಣಿ ತಾಂಡಾ ರಸ್ತೆಗೆ ಕಿರು ಸೇತುವೆ ನಿರ್ಮಾಣ ಮಾಡಿ : ರಾಮಚಂದ್ರ ಕಸವನಹಳ್ಳಿ

---Advertisement---

ಸುದ್ದಿಒನ್, ಹಿರಿಯೂರು, ನವೆಂಬರ್. 07 : ತಾಲ್ಲೂಕಿನ ಕುಂದಲಗುರ ಲಂಬಾಣಿ ತಾಂಡಾ ಗ್ರಾಮದ ದೊಡ್ಡಹಳ್ಳದ ಬಳಿ ಚಿಕ್ಕ ಸೇತುವೆ ನಿರ್ಮಾಣ ಮಾಡಬೇಕು ಎಂದು ಸಾಮಾಜಿಕ ಕಾರ್ಯಕರ್ತ ಕಸವನಹಳ್ಳಿ ರಾಮಚಂದ್ರ ಆಗ್ರಹಿಸಿದ್ದಾರೆ.

ಪತ್ರಿಕಾ ಪ್ರಕಟಣೆ ಹೇಳಿಕೆ ನೀಡಿರುವ ಅವರು ತಾಲೂಕಿನ ವಾಣಿ ವಿಲಾಸ ಜಲಾಶಯ ಕೋಡಿ ಬಿದ್ದ ನೀರು ಬಲನಾಲೆ ಮೂಲಕ ಕುಂದಲಗುರ ತೋಟ್ಟಿ ಸೇರಿದ ನೀರು ಮುಂದೆ ಹಳ್ಳದ ಮೂಲಕ ಸುವರ್ಣಮುಖಿ ನದಿ ಸೇರುತ್ತದೆ. ಆದರೆ ಕುಂದಲಗುರ ಲಂಬಾಣಿ ತಾಂಡಾ ಗ್ರಾಮಕ್ಕೆ ಹಳ್ಳದ ಮೂಲಕವೇ ಹಾದು ಹೋಗಿರುವ ರಸ್ತೆಯಲ್ಲಿ ನೀರು ಹರಿಯುತ್ತಿದೆ. ನೀರು ಹರಿಯುವ ಸ್ಥಳದಲ್ಲಿ ಕಿರು ಸೇತುವೆ ನಿರ್ಮಾಣ ಮಾಡಬೇಕಿದೆ. ನೆಲಮಟ್ಟದ ಸೇತುವೆ ಇದೆ ಆದರೆ ಅದರ ಮೇಲೆ ನೀರು ಹರಿಯುತ್ತಿದೆ. ಈಗಾಗಲೇ ಕಳೆದು ಹದಿನೈದು ದಿನಗಳಿಂದ ರಸ್ತೆ ಮೇಲೆ ನೀರು ಹರಿಯುತ್ತಿರುವುದರಿಂದ ಪಾಚಿ ಕಟ್ಟಿದ್ದು, ಮಹಿಳೆಯರು, ವೃದ್ಧರು ಹಾಗೂ ಮಕ್ಕಳು ಕಾಲು ಜಾರಿ ಬಿದ್ದಿದ್ದು, ನೀರು ಹರಿಯುವ ಸಂದರ್ಭದಲ್ಲಿ ಓಡಾಡಲು ತೊಂದರೆಯಾಗುತ್ತಿದ್ದು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಕೂಡಲೇ ಗಮನ ಹರಿಸಿ ಸಣ್ಣ ಸೇತುವೆ ನಿರ್ಮಾಣ ಮಾಡಬೇಕು ಎಂದು ಸಾಮಾಜಿಕ ಕಾರ್ಯಕರ್ತ ಕಸವನಹಳ್ಳಿ ರಾಮಚಂದ್ರ ಮನವಿ ಮಾಡಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...