Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಪರಪ್ಪನ ಅಗ್ರಹಾರದ ವೈರಲ್ ವಿಡಿಯೋ ಕೇಸಲ್ಲಿ ಧನ್ವೀರ್ ಸಂಕಷ್ಟ..!

---Advertisement---

ಬೆಂಗಳೂರು: ಕಳೆದ ಕೆಲವು ದಿನಗಳಿಂದ ಪರಪ್ಪನ ಅಗ್ರಹಾರದಲ್ಲಿ ನಡೆಯುತ್ತಿರುವ ರಾಜಾತಿಥ್ಯದ ವಿಡಿಯೋ ಎಲ್ಲೆಡೆ ವೈರಲ್ ಆಗ್ತಾ ಇದೆ. ಇದು ರಾಜ್ಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ರಾಜ್ಯ ಸರ್ಕಾರದಲ್ಲೂ ಚರ್ಚೆ ಭುಗಿಲೆದ್ದಿದೆ. ರಾಜ್ಯದ ಜನತೆಯ ಕೆಂಗಣ್ಣಿಗೆ ಅಲ್ಲಿನ ಅಧಿಕಾರಿಗಳು ಗುರಿಯಾಗಿದ್ದಾರೆ. ಅಂಥ ಕಾಮುಕ ಉಮೇಶ್ ರೆಡ್ಡಿಗೆ ರಾಜಾತಿಥ್ಯ ನೀಡುತ್ತಿದ್ದಾರೆ. ಉಗ್ರವಾದಿಗೆ ಫೋನ್ ಕೊಡ್ತಾ ಇದ್ದಾರೆ ಎಂಬೆಲ್ಲಾ ಚರ್ಚೆ ನಡೆಯುತ್ತಿರುವಾಗಲೇ ದರ್ಶನ್ ಗೆ ಮಾತ್ರ ಯಾಕೆ ಕೊಡ್ತಾ ಇಲ್ಲ ಎಂಬೆಲ್ಲಾ ಚರ್ಚೆಗಳಿಗೂ ದಾರಿ ಮಾಡಿಕೊಟ್ಟಿದ್ದಾರೆ. ಇದೀಗ ಸಿಸಿಬಿ ಕಣ್ಣು ಧನ್ವೀರ್ ಮೇಲೆ ಬಿದ್ದಿದೆ.

ದರ್ಶನ್ ಆಪ್ತ ಧನ್ವೀರ್ ಈ ವಿಡಿಯೋಗಳನ್ನೆಲ್ಲಾ ಲೀಕ್ ಮಾಡಿದ್ದಾರೆ ಎಂಬ ಅನುಮಾನ ಸಿಸಿಬಿ ಪೊಲೀಸರಿಗೆ ಮೂಡಿದೆ. ಇದೇ ಕಾರಣಕ್ಕೆ ಈಗಾಗಲೇ ಅವರ ಮೊಬೈಲ್ ಅನ್ನು ವಶಕ್ಕೆ ಪಡೆದಿದ್ದು, ತನಿಖೆ ನಡೆಸುತ್ತಿದ್ದಾರೆ. ಧನ್ವೀರ್ ಅವರನ್ನ ವಿಚಾರಣೆಗೂ ಕರೆದಿದ್ದಾರೆ. ಅಷ್ಟಕ್ಕೂ ಧನ್ವೀರ್ ಅವರಿಗೆ ಈ ವಿಡಿಯೋಗಳು ಹೇಗೆ ಸಿಕ್ತು..? ಎಂಬೆಲ್ಲಾ ಅನುಮಾನಗಳು ಹುಟ್ಟಿಕೊಂಡಿವೆ. ಒಂದು ವೇಳೆ ಮೊಬೈಲ್ ಪರೀಕ್ಷೆ ವೇಳೆ ಧನ್ವೀರ್ ಅವರೇ ಈ ವಿಡಿಯೋಗಳನ್ನು ಕಳುಹಿಸಿದ್ದಾರೆ ಎಂಬುದು ಗೊತ್ತಾದರೆ ಈ ಹ್ಯಾಂಗಲ್ ನಿಂದ ತನಿಖೆ ನಡೆಯಲಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಜೊತೆಗೆ ಆರಂಭದಿಂದಾನೂ ನಿಂತಿರೋದು ಧನ್ವೀರ್ ಅವರೇ. ಪರಪ್ಪನ ಅಗ್ರಹಾರದಲ್ಲಿ ದರ್ಶನ್ ಹಾಸಿಗೆ, ದಿಂಬು ಕೂಡ ಸಿಕ್ತಾ ಇಲ್ಲ ಎಂಬ ಅರ್ಜಿ ಕೋರ್ಟ್ ಗೆ ಹಾಕಿದ್ದಾರೆ. ಆದರೂ ಹಾಸಿಗೆ, ದಿಂಬು ಸಿಕ್ತಾ ಇಲ್ಲ. ಹೀಗಿರುವಾಗ ಪರಪ್ಪನ ಅಗ್ರಹಾರದ ರಾಜಾತಿಥ್ಯ ವಿಡಿಯೋಗಳು ವೈರಲ್ ಆಗ್ತಿವೆ. ಇದರಿಂದ ಸಿಸಿಬಿ ಪೊಲೀಸರು ಅನುಮಾನ ಪಟ್ಟರಾ ಎಂಬುದು ಮುಂದಿನ ದಿನಗಳಲ್ಲಿ ತಿಳಿಯಬೇಕಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now