Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಶಿವಮೊಗ್ಗದಲ್ಲಿ 20 ವರ್ಷದ ವಿದ್ಯಾರ್ಥಿಗೆ ಹಾರ್ಟ್ ಅಟ್ಯಾಕ್..!

---Advertisement---

ಶಿವಮೊಗ್ಗ: ಕಳೆದ ಕೆಲವು ದಿನಗಳಿಂದ ಈ ಹಾರ್ಟ್ ಅಟ್ಯಾಕ್ ಎಂಬ ಭೂತ ಸಾಕಷ್ಟು ಜನರನ್ನು ಬಲಿ ತೆಗೆದುಕೊಂಡಿದೆ. ಹಾರ್ಟ್ ಅಟ್ಯಾಕ್ ನಿಂದ ಸಾವಿನ ಸಂಖ್ಯೆ ಮುಂದುವರೆಯುತ್ತಲೆ ಇದೆ. ಅದರಲ್ಲೂ ಹಾಸನದಲ್ಲಿ ಪ್ರತಿದಿನ ಹಾರ್ಟ್ ಅಟ್ಯಾಕ್ ನಿಂದ ಸಾವನ್ನಪ್ಪುತ್ತಿದ್ದಾರೆ. ಅದಕ್ಕೆ ಕಾರಣವೇನು ಅನ್ನೋದು ಮಾತ್ರ ಇನ್ನು ತಿಳಿದು ಬಂದಿಲ್ಲ. ಇದರ ನಡುವೆ ಇಂದು ಶಿವಮೊಗ್ಗದಲ್ಲೂ ಹಾರ್ಟ್ ಅಟ್ಯಾಕ್ ಸದ್ದು ಮಾಡಿದೆ. ಚಿಕ್ಕ ವಯಸ್ಸಿನವರೇ ಸಾವನ್ನಪ್ಪಿದ್ದಾರೆ.

ಮಕ್ಕಳ ಬಗ್ಗೆ ತಂದೆ ತಾಯಂದಿರು ದೊಡ್ಡ ಕನಸ್ಸನ್ನೇ ಕಂಡಿರುತ್ತಾರೆ. ಮಕ್ಕಳ ಭವಿಷ್ಯ ಉಜ್ವಲವಾಗಲಿ, ದೊಡ್ಡ ಮಟ್ಟಕ್ಕೆ ಬೆಳೆಯಲಿ ಅಂತ ಅವರು ಕೇಳಿದ್ದೆಲ್ಲವನ್ನು ಕೊಟ್ಟು, ಇಷ್ಟವಾಗಿದ್ದನ್ನ ಓದಿಸುತ್ತಾನೇ ಇರ್ತಾರೆ. ಆದರೆ ಕನಸು ನನಸಾಗುವ ಮುನ್ನವೇ ವಿಧಿ ಮಕ್ಕಳ ಬಾಳಲ್ಲಿ ಆಟವಾಡಿದರೆ ತಂದೆ – ತಾಯಂದಿರ ಮನಸ್ಥಿತಿ ಏನಾಗಬಹುದು. ಆ ನೋವನ್ನ ಸಹಿಸಿಕೊಳ್ಳುವುದಾದರೂ ಹೇಗೆ ಹೇಳಿ. ಶಿವಮೊಗ್ಗ ನಗರ ಹೊರವಲಯದ ಬಸವನ ಗಂಗೂರು ಗ್ರಾಮದಲ್ಲಿ ನಡೆದಿದೆ.

20 ವರ್ಷದ ಶ್ರೀನಿಧಿ ಹಾರ್ಟ್ ಅಟ್ಯಾಕ್ ನಿಂದ ಸಾವನ್ನಪ್ಪಿದ್ದಾರೆ. ನಗರದ ಡಿವಿಎಸ್ ಕಾಲೇಜಿನಲ್ಲಿ ಮೂರನೇ ವರ್ಷದ ಇಂಜಿನಿಯರಿಂಗ್ ಪದವಿ ಮಾಡ್ತಾ ಇದ್ದರು. ಆದರೆ ಈಗ ಜೀವಂತವಾಗಿಲ್ಲ ಎಂಬುದನ್ನು ಕೇಳುವುದಕ್ಕೇನೆ ಸಂಕಟವಾಗುತ್ತಿದೆ. ಇಡೀ ಗೆಳೆಯರ ಬಳಗ ದುಃಖತಪ್ತರಾಗಿದ್ದಾರೆ. ಶ್ರೀನಿಧಿಗೆ ಭಾನುವಾರ ಬೆಳಗ್ಗೆ ಆರೋಗ್ಯದಲ್ಲಿ ಏರುಪೇರಾಗಿತ್ತು. ಇದರಿಂದ ಗಾಬರಿಗೊಂಡ ಪೋಷಕರು ತಕ್ಷಣವೇ ಮಗನನ್ನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ. ಹಾರ್ಟ್ ಅಟ್ಯಾಕ್ ಜೊತೆಗೆ ಶ್ರೀನಿಧಿಗೆ ನ್ಯೂಮೋನಿಯಾ ಸಮಸ್ಯೆ ಕೂಡ ಇತ್ತಂತೆ. ಈ ಎರೆಉ ಸಮಸ್ಯೆಯಿಂದ ಶ್ರೀನಿಧಿ ಸಾವನ್ನಪ್ಪಿರುವುದಾಗಿ ವೈದ್ಯರು ತಿಳಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment