Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರೀಚಾರ್ಜ್ ಬೆಲೆ ಏರಿಕೆಗೆ ಬ್ರೇಕ್: ಇಲ್ಲಿದೆ ಸಿಹಿ‌ ಸುದ್ದಿ 

---Advertisement---

ಮೊಬೈಲ್ ರೀಚಾರ್ಜ್ ದರ ಏರಿಕೆಯಿಂದ ಕಂಗೆಟ್ಟಿದ್ದ ಗ್ರಾಹಕರಿಗೆ ಭಾರತೀಯ ಟೆಲಿಕಾಂ ನಿಯಂತ್ರಣ ಪ್ರಾಧಿಕಾರ (TRAI) ಮಹತ್ವದ ಸಿಹಿಸುದ್ದಿ ನೀಡಿದೆ. ಟೆಲಿಕಾಂ ಕಂಪನಿಗಳ ಹೆಚ್ಚುತ್ತಿರುವ ದರಗಳಿಗೆ ಕಡಿವಾಣ ಹಾಕಲು ಮುಂದಾದ ಟ್ರಾಯ್, ಕೇವಲ ಕರೆ ಮತ್ತು ಎಸ್‌ಎಂಎಸ್ ಸೇವೆಗಳನ್ನು ಬಯಸುವ ಗ್ರಾಹಕರಿಗಾಗಿ ಕಡಿಮೆ ದರದ ವಿಶೇಷ ಪ್ಲಾನ್‌ಗಳನ್ನು ಪರಿಚಯಿಸಲು ಸೂಚಿಸಿದೆ.

ಪ್ರಸ್ತುತ ಮಾರುಕಟ್ಟೆಯಲ್ಲಿ ಬಹುತೇಕ ಎಲ್ಲಾ ರೀಚಾರ್ಜ್ ಪ್ಲಾನ್‌ಗಳು ಡೇಟಾ ಆಧಾರಿತವಾಗಿರುವುದರಿಂದ, ಇಂಟರ್ನೆಟ್ ಬಳಸದ ಗ್ರಾಹಕರಿಗೂ ಹೆಚ್ಚಿನ ಮೊತ್ತ ಪಾವತಿಸಬೇಕಾದ ಅನಿವಾರ್ಯತೆ ಎದುರಾಗಿತ್ತು. ಇದೀಗ ಟ್ರಾಯ್ ನಿರ್ದೇಶನದಂತೆ, ಡೇಟಾ ಇಲ್ಲದೆ ಕೇವಲ ವಾಯ್ಸ್ ಕಾಲ್ ಮತ್ತು ಎಸ್‌ಎಂಎಸ್ ಸೇವೆಗಳನ್ನು ಒಳಗೊಂಡ ಅಗ್ಗದ ಪ್ಲಾನ್‌ಗಳು ಶೀಘ್ರದಲ್ಲೇ ಲಭ್ಯವಾಗಲಿವೆ.‘ಟೆಲಿಕಾಂ ಗ್ರಾಹಕರ ರಕ್ಷಣೆ (13ನೇ ತಿದ್ದುಪಡಿ) ನಿಯಮಗಳು, 2026’ ಅಡಿಯಲ್ಲಿ ರೂಪುಗೊಂಡಿರುವ ಈ ಹೊಸ ಮಾರ್ಗಸೂಚಿಗಳ ಪ್ರಕಾರ, ಪ್ರತಿಯೊಂದು ಟೆಲಿಕಾಂ ಸಂಸ್ಥೆಯೂ ಕನಿಷ್ಠ ಒಂದು ಕರೆ–ಎಸ್‌ಎಂಎಸ್ ಪ್ಲಾನ್ ಅನ್ನು ಕಡ್ಡಾಯವಾಗಿ ಒದಗಿಸಬೇಕು. ಈ ಪ್ಲಾನ್‌ಗಳು ದೀರ್ಘಾವಧಿಗೆ ಮಾತ್ರವಲ್ಲದೆ ಕಡಿಮೆ ಅವಧಿಯ ವ್ಯಾಲಿಡಿಟಿಯಲ್ಲಿಯೂ ಲಭ್ಯವಾಗಬೇಕು ಹಾಗೂ ಡೇಟಾ ಪ್ಲಾನ್‌ಗಳಿಗಿಂತ ಕಡಿಮೆ ದರದಲ್ಲಿರಬೇಕು ಎಂದು ಸ್ಪಷ್ಟಪಡಿಸಲಾಗಿದೆ.

ಈ ಕ್ರಮದಿಂದ ಹಿರಿಯ ನಾಗರಿಕರು ಹಾಗೂ ಇಂಟರ್ನೆಟ್ ಬಳಸದ ಗ್ರಾಹಕರಿಗೆ ಹೆಚ್ಚಿನ ಪ್ರಯೋಜನವಾಗಲಿದೆ. ಗ್ರಾಮೀಣ ಭಾಗದ ಜನರಿಗೆ ರೀಚಾರ್ಜ್ ವೆಚ್ಚದಲ್ಲಿ ಉಳಿತಾಯವಾಗುವ ನಿರೀಕ್ಷೆಯಿದ್ದು, ಗ್ರಾಹಕರು ತಮ್ಮ ಅಗತ್ಯಕ್ಕೆ ತಕ್ಕ ಸೇವೆಗಳನ್ನು ಆಯ್ಕೆಮಾಡುವ ಅವಕಾಶ ದೊರೆಯಲಿದೆ. ಟ್ರಾಯ್‌ನ ಈ ನಿರ್ಧಾರ ಟೆಲಿಕಾಂ ಕ್ಷೇತ್ರದಲ್ಲಿ ಪಾರದರ್ಶಕತೆ ಹೆಚ್ಚಿಸುವುದರ ಜೊತೆಗೆ, ಸಾಮಾನ್ಯ ಜನರ ಮೊಬೈಲ್ ಖರ್ಚನ್ನು ಕಡಿಮೆ ಮಾಡುವ ದಿಕ್ಕಿನಲ್ಲಿ ಮಹತ್ವದ ಹೆಜ್ಜೆಯಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...