Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ನಿದ್ದೆಗಣ್ಣಿನಲ್ಲಿ ಟ್ರಕ್ ಗೆ ಕಾರು ಡಿಕ್ಕಿ : ಬಾಲಕ ಸೇರಿ 6 ಮಂದಿ ಸಾವು.. ಮೃತದೇಹ ಹೊರಗೆ ತೆಗೆಯಲು ಹರಸಾಹಸ..!

---Advertisement---

ಹಾಸನ: ಬೆಳ್ಳಬೆಳಗ್ಗೆ ಇಂದು ಅಪಘಾತಕ್ಕೆ ಆರು ಜನರು ಸಾವನ್ನಪ್ಪಿರುವ ಘಟನೆ ಹಾಸನ ಹೊರವಲಯದ ಈಚನಹಳ್ಳಿ ಬಳಿ ನಡೆದಿದೆ. ಮೃತರಲ್ಲಿ ಬಾಲಕ ಕೂಡ ಸೇರಿದ್ದಾನೆ. ಆ ಮಗುವಿನ ಮೃತದೇಹ ಕಂಡು ಸಾರ್ವಜನಿಕರು ಕೂಡ ಕಣ್ಣೀರಾಗಿದ್ದಾರೆ.

ಡ್ರೈವರ್ ಗಳು ಗಾಡಿ ಓಡಿಸುವಾಗ ಬಹಳ ಎಚ್ಚರದಿಂದ ಇರಬೇಕಾಗುತ್ತದೆ. ನಿದ್ದೆ ಬಂದರೂ ಅದನ್ನು ಕಂಟ್ರೋಲ್ ಮಾಡಿಕೊಂಡು ಓಡಿಸುವ ಸಾಹಸಕ್ಕೆ ಹೋಗಬಾರದು. ಎದುರು ಬರು ವಾಹನಗಳ ಲೈಟ್ ಗಳಿಂದ ಕಣ್ಣಿಗೆ ತೊಂದರೆಯಾಗಿ ಅದೆಷ್ಟೋ ಅಪಘಾತಗಳು ಸಂಭವಿಸಿವೆ. ಇದೀಗ ಹಾಸನದಲ್ಲೂ ಅಂಥದ್ದೇ ಘಟನೆ ನಡೆದಿದೆ. ಕಾರು ಡ್ರೈವರ್ ನಿದ್ದೆ ಗಣ್ಣಿನಲ್ಲಿ ಕಾರು ಚಲಾಯಿಸಿದ ಪರಿಣಾಮ ಭೀಕರ ಅಪಘಾತವಾಗಿದೆ. ಬೆಳಗ್ಗಿನ ಜಾವ 5.30 ಈ ಘಟನೆ ನಡೆದಿದೆ.

ನಿದ್ದೆಗಣ್ಣಿನಲ್ಲಿದ್ದ ಡ್ರೈವರ್ ಕಾರು ಚಲಾಯಿಸುವಾಗ ಡಿವೈಡರ್ ಗೆ ಡಿಕ್ಕಿ ಹೊಡೆದಿದೆ. ಅಲ್ಲಿಂದ ಎಗರಿ ಟ್ರಕ್ ಗೆ ಗುದ್ದಿದೆ. ನಾರಾಯಣಪ್ಪ, ಸುನಂದಾ, ರವಿಕುಮಾರ್, ನೇತ್ರಾ, ಚೇತನ್, ರಾಕೇಶ್ ಎಂಬುವವರು ಸಾವನ್ನಪ್ಪಿದ್ದಾರೆ. ಮೃತರನ್ನೆಲ್ಲಾ ಹೊಸಕೋಟೆ ತಾಲೂಕಿನ ಅಂದರಹಳ್ಳಿ ಹಾಗೂ ದೇವನಹಳ್ಳಿ ಬಳಿಯ ಕಾರಹಳ್ಳಿ ಮೂಲದವರು ಎನ್ನಲಾಗಿದೆ. ಈಗಾಗಲೇ ಮೃತರನ್ನು ಪತ್ತೆ ಹಚ್ಚಲಾಗಿದೆ. ಆದರೆ ಮೃತದೇಹವನ್ನು ಕಾರಿನಿಂದ ಹೊರಗೆ ತೆಗೆಯುವುದಕ್ಕೆ ಹರಸಾಹಸ ಪಟ್ಟಿದ್ದಾರೆ. ಮೃತದೇಹಗಳು ಛಿದ್ರ ಛಿದ್ರವಾಗಿದ್ದು, ಕಷ್ಟಪಟ್ಟು ಮೃತದೇಹಗಳನ್ನು ಹೊರ ತೆಗೆದಿದ್ದಾರೆ. ಪೊಲೀಸರು ಸ್ಥಳದಲ್ಲಿಯೇ ಇದ್ದು, ಜೆಸಿಬಿಯನ್ನು ತರಿಸಿ, ಮೃತದೇಹಗಳನ್ನು ಹೊರಗೆ ತೆಗೆಸಿದ್ದಾರೆ. ಹಾಸನ ಸಂಚಾರಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಮೃತರ ಸಂಬಂಧಿಕರಿಗೆ ವಿಷಯವನ್ನು ತಿಳಿಸಲಾಗಿದೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment