Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸಚಿವ ಸ್ಥಾನ ಹಂಚಿಕೆ ಗೊಂದಲಕ್ಕೆ 3-4 ದಿನಗಳಲ್ಲಿ ಸಿಗಲಿದೆ ಸ್ಪಷ್ಟ ಉತ್ತರ: ಹೈಕಮಾಂಡ್ ನಿರ್ಧಾರಕ್ಕೆ ಬದ್ಧ ಎಂದ ಲಕ್ಷ್ಮಣ್ ಸವದಿ

---Advertisement---

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ, ಜು.19 : ವಿರೋಧ ಪಕ್ಷದಲ್ಲಿ ಇದ್ದುಕೊಂಡು ಅವರು ಏನು ಮಾಡಬೇಕೋ ಅದನ್ನು ಮಾಡುತ್ತಿದ್ದಾರೆ. ಆದರೆ, ಅವರು ಸ್ವಲ್ಪ ಮೆಲುಕು ಹಾಕುವುದು ಒಳ್ಳೆಯದು. ಹಿಂದೆ ಅವರ ದಿನಮಾನದಲ್ಲಿ ಟೌನ್‍ಶಿಪ್ ಯಾರಿಂದ ಪ್ರಾರಂಭವಾಯಿತು, ಹೇಗೆ ಮತ್ತು ಏನಾಯಿತು ಎಂಬುದನ್ನು ಮೆಲುಕು ಹಾಕಿದರೆ ಅವರಿಗೂ ಕೂಡ ಇದರ ಪರಿಜ್ಞಾನ ಸಿಗುತ್ತದೆ ಎಂದು ಮಾಜಿ ಉಪ ಮುಖ್ಯಮಂತ್ರಿಗಳು ಅಥಣಿಯ ಶಾಸಕರಾದ  ಲಕ್ಷ್ಮಣ್ ಸವದಿ ವಿರೋಧ ಪಕ್ಷದ ನಾಯಕರ ಟೀಕೆಗಳಿಗೆ ಪ್ರತಿಕ್ರಿಯಿಸಿದರು.

ಚಿತ್ರದುರ್ಗ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಚಿವ ಸ್ಥಾನದ ಹಂಚಿಕೆ ಮತ್ತು ಹೈಕಮಾಂಡ್ ನಿರ್ಧಾರದ ಕುರಿತು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ನಾಯಕರು, ಇನ್ನೆರಡು ಮೂರು ದಿನಗಳಲ್ಲಿ ಈ ಬಗ್ಗೆ ಅಂತಿಮ ತೀರ್ಮಾನವಾಗಲಿದೆ. ಹೈಕಮಾಂಡ್ ತೆಗೆದುಕೊಳ್ಳುವ ಯಾವುದೇ ನಿರ್ಧಾರಕ್ಕೆ ನಾವೆಲ್ಲರೂ ಸಹಮತವನ್ನು ವ್ಯಕ್ತಪಡಿಸಲೇಬೇಕಾಗುತ್ತದೆ ಮತ್ತು ನಾವು ಸಹಮತವನ್ನು ವ್ಯಕ್ತಪಡಿಸುತ್ತೇವೆ ಸಚಿವ ಸ್ಥಾನದ ಕುರಿತು ತಮಗೆ ಹೈಕಮಾಂಡ್ ನಾಯಕರು ನೇರವಾಗಿ ಏನನ್ನೂ ಹೇಳಿಲ್ಲ ಅದನ್ನು ತಾವು ಯಾವ ರೀತಿಯಾಗಿ ಸ್ವೀಕರಿಸಬೇಕೋ ಆ ರೀತಿ ಸ್ವೀಕರಿಸಿರುವುದಾಗಿ ಹೇಳಿದರು. ಅಲ್ಲದೆ, ಹಿಂದಿನ ದಿನಮಾನಗಳಲ್ಲಿ ಒಂದೇ ಸಮುದಾಯಕ್ಕೆ ನಾಲ್ಕರಿಂದ ಐದು ಜನರಿಗೆ ಸಚಿವ ಸ್ಥಾನ ನೀಡಿದ ಉದಾಹರಣೆಗಳಿವೆ. 18 ಕ್ಷೇತ್ರಗಳಿರುವ ದೊಡ್ಡ ಜಿಲ್ಲೆಯಾಗಿರುವುದರಿಂದ ನಾಲ್ಕರಿಂದ ಐದು ಸ್ಥಾನಗಳನ್ನು ಕೊಡುವುದರಲ್ಲಿ ತಪ್ಪೇನೂ ಇಲ್ಲ ಮತ್ತು ಕೇಳುವುದರಲ್ಲೂ ತಪ್ಪಿಲ್ಲ. ಕನಿಷ್ಠ ಮೂರು ಸ್ಥಾನಗಳನ್ನಾದರೂ ನೀಡಬಹುದು ಎಂದು ತಾವು ಭಾವಿಸಿರುವುದಾಗಿ ಅವರು ತಿಳಿಸಿ ಸಚಿವ ಸಂಪುಟದ ವಿಸ್ತರಣೆ ಹಾಗೂ ಸ್ಥಾನ ಹಂಚಿಕೆಯ ಗೊಂದಲಗಳಿಗೆ ಮುಂಬರುವ ಮೂರ್ನಾಲ್ಕು ದಿನಗಳಲ್ಲಿ ಸ್ಪಷ್ಟವಾದ ಉತ್ತರ ಸಿಗಲಿದ್ದು, ಹೈಕಮಾಂಡ್‍ನ ಅಂತಿಮ ತೀರ್ಮಾನಕ್ಕೆ ಎಲ್ಲರೂ ಬದ್ಧರಾಗಿರುವುದಾಗಿ ಸ್ಪಷ್ಟಪಡಿಸಿದರು.

ಮಾಜಿ ಪ್ರಧಾನ ಮಂತ್ರಿ ಹೆಚ್.ಡಿ.ದೇವಗೌಡರವರ ಪತ್ನಿ ಚನ್ನಮ್ಮರವರ ನಿಧನಕ್ಕೆ ಸಂತಾಪವನ್ನು ಸೂಚಿಸಿ ಅವರು ಎಲ್ಲರೊಂದಿಗೂ ಉತ್ತಮ ಸಂಪರ್ಕ ಹೊಂದಿದ್ದರು. ಅವರು ಎಲ್ಲರ ಪ್ರೀತಿ, ಗೌರವಕ್ಕೆ ಪಾತ್ರರಾಗಿದ್ದರು. ತಮ್ಮ ಕುಟುಂಬದ ಸದಸ್ಯರಂತೆ ಪ್ರತಿಯೊಬ್ಬರನ್ನು ಕಾಣುತ್ತಿದ್ದರು ಅಂತಹ ತಾಯಿಯ ಆತ್ಮಕ್ಕೆ ಚಿರಶಾಂತಿ ಸಿಗಲಿ ಮತ್ತು ಅವರ ಕುಟುಂಬ ಹಾಗೂ ಅಭಿಮಾನಿಗಳಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸಿದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now