Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಮುರುಘಾಮಠದ ಪರಂಪರೆಯ ಉಳಿವಿಗಾಗಿ ನೂತನ ಶಾಸಕ ಕೆ.ಸಿ.ವೀರೇಂದ್ರ ಅವರ ನೇತೃತ್ವದಲ್ಲಿ ಸಮಿತಿ ರಚಿಸಲಿ : ಹೆಚ್.ಎಂ.ಮಂಜುನಾಥ್

---Advertisement---

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, (ಮೇ.25) : ಮುರುಘಾಮಠದ ಪರಂಪರೆಯ ಉಳಿವಿಗಾಗಿ ವೀರಶೈವ ಲಿಂಗಾಯಿತ ಯುವ ವೇದಿಕೆ ಹೋರಾಟ ಮಾಡಿಕೊಂಡು ಬರುತ್ತಿದ್ದು, ನೂತನ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ನೇತೃತ್ವದಲ್ಲಿ ಸಭೆ ಕರೆದು ಸಮಿತಿಗಳನ್ನು ರಚಿಸಲಿ ಎಂದು ವೀರಶೈವ ಲಿಂಗಾಯಿತ ಯುವ ವೇದಿಕೆ ಜಿಲ್ಲಾಧ್ಯಕ್ಷ ಹೆಚ್.ಎಂ.ಮಂಜುನಾಥ್ ಮನವಿ ಮಾಡಿದರು.

ಪತ್ರಕರ್ತರ ಭವನದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಮುರುಘಾಮಠದ ಡಾ.ಶಿವಮೂರ್ತಿ ಶರಣರ ಅಧಿಕಾರವಧಿಯನ್ನು ಜಿಲ್ಲಾ ನ್ಯಾಯಲಯ ಮೊಟಕುಗೊಳಿಸಿದ್ದು, ಉಚ್ಚ ನ್ಯಾಯಾಲಯ ಸದರಿ ಪ್ರಕರಣವನ್ನು ವಜಾಗೊಳಿಸಿದೆ. ಮುರುಘಾಮಠಕ್ಕೆ ಸರ್ಕಾರ ನೇಮಕ ಮಾಡಿದ್ದ ಆಡಳಿತಾಧಿಕಾರಿಯನ್ನು ವಜಾ ಮಾಡಿದ್ದು, ವೀರಶೈವ ಸಮಾಜ, ಮಠದ ಭಕ್ತರು ಹಾಗೂ ಇತರೆ ಸಮಾಜದವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ನಾಲ್ಕು ವಾರಗಳಲ್ಲಿ ಆಡಳಿತ ಸಮಿತಿಯನ್ನು ರಚಿಸಿ ನ್ಯಾಯಾಲಯಕ್ಕೆ ವರದಿ ನೀಡಲು ಆದೇಶಿಸಿರುವುದರಿಂದ ಚಿತ್ರದುರ್ಗದ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಸಭೆ ಕರೆದು ಸಮಿತಿ ರಚಿಸಲಿ ಎಂದು ಹೆಚ್.ಎಂ.ಮಂಜುನಾಥ್ ವಿನಂತಿಸಿದರು.

ವೀರಶೈವ ಲಿಂಗಾಯಿತ ಯುವ ವೇದಿಕೆ ಗೌರವಾಧ್ಯಕ್ಷ ಕೆ.ಸಿ.ಗಂಗಾಧರ್, ಜಿಲ್ಲಾ ಉಪಾಧ್ಯಕ್ಷ ಗಿರೀಶ್ ಎಂ.ಎಸ್. ಕಾರ್ಯದರ್ಶಿ ಸಿ.ಬಿ.ನಾಗರಾಜ್, ತಾಲ್ಲೂಕು ಅಧ್ಯಕ್ಷ ಪ್ರಶಾಂತ್‍ರೆಡ್ಡಿ ಹೆಚ್. ನಗರಾಧ್ಯಕ್ಷ ಶಿವಕುಮಾರ್ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...