ಬೆಂಗಳೂರು, ಅಕ್ಟೋಬರ್ 27: ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಸಚಿವ ಶಿವರಾಜ್ ತಂಗಡಗಿ ಅವರ ನೇತೃತ್ವದಲ್ಲಿ ಭೋವಿ ಜನಾಂಗದ ನಿಯೋಗವು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿತು.
ಸಮಾಜದ ಮುಖಂಡರು ಮಾತನಾಡಿ ಸಾಮಾಜಿಕ ಶ್ರೇಯೋಭಿವೃದ್ಧಿಗೆ ಭೋವಿ ಅಭಿವೃದ್ಧಿ ನಿಗಮ ಸ್ಥಾಪನೆ ಯಾಗಿದ್ದು, ಹೆಚ್ಚಿನ ಅನುದಾನ ಒದಗಿಸುವಂತೆ ಮನವಿ ಮಾಡಿದರು.
ಇದೇ ಸಂದರ್ಭದಲ್ಲಿ ಲೋಕಸಭಾ ಚುನಾವಣೆಯಲ್ಲಿ ಸಮುದಾಯಕ್ಕೆ ಪ್ರಾತಿನಿಧ್ಯ, ವಿಧಾನಪರಿಷತ್ ಸದಸ್ಯ ಸ್ಥಾನ ದೊರಕಬೇಕು ಎಂದು ಬೇಡಿಕೆ ಇಟ್ಟರು.

ಭೋವಿ ಸಮಾಜದ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿಗಳು ಈ ಕುರಿತು ಪಕ್ಷದ ವರಿಷ್ಠರೊಂದಿಗೆ ಗಂಭೀರವಾಗಿ ಚರ್ಚೆ ಮಾಡಲಾಗುವುದು, ವಸ್ತು ಸ್ಥಿತಿ ವಿವರಿಸಲಾಗುವುದು ಎಂದು ಭರವಸೆ ನೀಡಿದರು.
ಭೋವಿ ಸಮಾಜದ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ, ಸಮಾಜ ಕಲ್ಯಾಣ ಸಚಿವ ಡಾ: ಹೆಚ್ .ಸಿ ಮಹದೇವಪ್ಪ, ಮಾಜಿ ಸಚಿವ ವೆಂಕಟರಮಣನಪ್ಪ, ಶಾಸಕ ವೆಂಕಟೇಶ್ , ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಸಮಾಜದ ಮುಖಂಡರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











