Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಗಂಡ ಸತ್ತ ಮೇಲೆ ಖಿನ್ನತೆಗೆ ಒಳಗಾದ ಹೆಂಡತಿ 13 ವರ್ಷದ ಮಗನನ್ನು ಸಾಯಿಸಿ, ತಾನೂ ಆತ್ಮಹತ್ಯೆ : ಬೆಂಗಳೂರಲ್ಲೊಂದು ಹೃದಯ ವಿದ್ರಾವಕ ಘಟನೆ..!

Facebook
Twitter
Telegram
WhatsApp

 

ಬೆಂಗಳೂರು: ಯಲಹಂಕದ RNZ ಅಪಾರ್ಟ್ಮೆಂಟ್ ನಲ್ಲಿ ತನ್ನ 13 ವರ್ಷದ ಮಗನನ್ನು ಕೊಂದು ತಾಯಿಯೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. 13 ವರ್ಷದ ಭಾರ್ಗವ್ ಪುಲಿವರ್ತ ಹಾಗೂ 40 ವರ್ಷದ ರಮ್ಯಾ ಮೃತರು. 19 ವರ್ಷದ ಮಗಳು ಪಿಜಿ ಯಲ್ಲಿದ್ದು ಓದುತ್ತಿದ್ದಾಳೆ.

ರಮ್ಯಾ, ಶ್ರೀದರ್ ಎಂಬುವವರನ್ನು ಪ್ರೀತಿಸಿ ಮದುವೆಯಾಗಿದ್ದರು. ಇಬ್ಬರದ್ದು ಅಂತರ್ಜಾತಿ ವಿವಾಹವಾಗಿತ್ತು. ದಂಪತಿಗೆ ಇಬ್ಬರು ಮಕ್ಕಳಿದ್ದರು. ಆದರೆ ಕಳೆದ ಮೂರು‌ ತಿಂಗಳ ಹಿಂದೆ ಶ್ರೀದರ್ ನಿಧನರಾಗಿದ್ದರು. ಇದಾದ ಮೇಲೆ ಎಲ್ಲಾ ಜವಾಬ್ದಾರಿ ರಮ್ಯಾ ಮೇಲೆ ಬಿತ್ತು. ಇವರಿದ್ದ ಪ್ಲ್ಯಾಟ್ ಬಾಡಿಗೆ 45 ಸಾವಿರ, ಮಕ್ಕಳ ಶಿಕ್ಷಣ ಹೀಗೆ ಮನೆ ಖರ್ಚೆಲ್ಲಾ ರಮ್ಯಾಗೆ ನಿಭಾಯಿಸುವುದಕ್ಕೆ ಕಷ್ಟವಾಯಿತು. ಗಂಡನ ಸಾವಿನ ಬಳಿಕ ರಮ್ಯಾ ಅವರು ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ. ಎಷ್ಟೋ ಸಲ ನಾನೂ ಸಾಯಿತ್ತೀನಿ ಎಂದೆಲ್ಲಾ ಹೇಳಿದ್ದರಂತೆ.

ಇದೀಗ ಮಗನನ್ನು ಕೊಂದು, ತಾನೂ ನೇಣಿಗೆ ಶರಣಾಗಿದ್ದಾರೆ. ಮೊದಲಿಗೆ ಮಗನಿಗೆ ನೇಣು ಬಿಗಿದು ಕೊಲ್ಲಲಾಗಿದೆ. ಬಳಿಕ ಆತನನ್ನು ಹಾಸಿಗೆ ಮೇಲೆ ಮಲಗಿಸಿ, ರಮ್ಯಾ ಅವರು ನೇಣಿ ಬಿಗಿದುಕೊಂಡು ಸಾವನ್ನಪ್ಪಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. ರಮ್ಯಾ ಅವರು ಈ ಸಂಬಂಧ ಪೊಲೀಸರು, ಡಾಕ್ಟರ್ ಹಾಗೂ ಮಗಳಿಗೆ ಪತ್ರ ಬರೆದಿಟ್ಟಿದ್ದಾರೆ. ಮಗಳು ಇನ್ನು ಓದುತ್ತಿದ್ದಾಳೆ. 19 ವರ್ಷ. ಈಗ ಮಗಳಿಗೂ ಯಾರು ದಿಕ್ಕು ಎಂಬ ಚಿಂತೆ ಕಾಡುತ್ತಿದೆ. ಅಮ್ಮ, ತಮ್ಮನನ್ನು ಕಳೆದುಕೊಂಡ ಆ ಯುವತಿ ಈಗ ಕಣ್ಣೀರಿಡುತ್ತಿದ್ದಾಳೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ದರ್ಶನ್ ರಾಜಾತಿಥ್ಯ ಫೋಟೋ ರಿವಿಲ್ ಮಾಡಿದ್ದೇ ರಾಜ್ಯ ಸರ್ಕಾರ : ಜೋಶಿ ಹೇಳಿಕೆಗೆ ಡಿಕೆಶಿ ಹೇಳಿದ್ದೇನು..?

  ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ರೌಡಿಶೀಟರ್ ಗಳ ಜೊತೆಗೆ ಕೂತು ಟೀ ಕುಡೊಯುತ್ತಾ, ಸಿಗರೇಟು ಸೇದುತ್ತಾ, ನಗುಮುಖದಲ್ಲಿದ್ದ ದರ್ಶನ್ ಅವರ ಫೋಟೋ ಒಂದು ವೈರಲ್ ಆಗಿತ್ತು. ಆ ಬಳಿಕವೇ ದರ್ಶನ್ ಅವರನ್ನು ಬಳ್ಳಾರಿ

ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಎಂಬಿ ಪಾಟೀಲ್ : ಬೆಳೆಯುತ್ತಲೇ ಇದೆ ಆಕಾಂಕ್ಷಿಗಳ ಪಟ್ಟಿ..!

  ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ಆಗಾಗ ಸಿಎಂ ಬದಲಾವಣೆಯ ವಿಚಾರ ಚರ್ಚೆಗೆ ಬರ್ತಾನೆ ಇರುತ್ತದೆ. ಸಿಎಂ ಸ್ಥಾನದಿಂದ ಸಿದ್ದರಾಮಯ್ಯ ಅವರು ಕೆಳಗಿಳಿಯುತ್ತಾರೆ ಎಂಬ ಚರ್ಚೆಯ ಜೊತೆಗೆ ನಾನು ಕೂಡ ಸಿಎಂ ಆಗಬಹುದು ಎಂಬ ಆಸೆ

Mobile phone : ಮೊಬೈಲ್ ಫೋನ್ ಬಳಸುವುದರಿಂದ ಮೆದುಳಿನ ಕ್ಯಾನ್ಸರ್ ಬರುತ್ತದೆಯೇ ? ಇಲ್ಲಿದೆ ಸ್ಪಷ್ಟತೆ..!

  ಸುದ್ದಿಒನ್ : ಮೊಬೈಲ್ ಫೋನ್ ಬಳಸುವುದರಿಂದ ಮೆದುಳಿನ ಕ್ಯಾನ್ಸರ್ ಬರುತ್ತದೆಯೇ ? ಇದೀಗ ಈ ಪ್ರಶ್ನೆಗೆ WHO ಉತ್ತರ ನೀಡಿದೆ. ವಿಶ್ವ ಆರೋಗ್ಯ ಸಂಸ್ಥೆ ನಡೆಸಿದ ಇತ್ತೀಚಿನ ಅಧ್ಯಯನದಲ್ಲಿ, ಮೊಬೈಲ್ ಫೋನ್ ಬಳಕೆಯಿಂದ

error: Content is protected !!