ಬೆಂಗಳೂರು: ಯಲಹಂಕದ RNZ ಅಪಾರ್ಟ್ಮೆಂಟ್ ನಲ್ಲಿ ತನ್ನ 13 ವರ್ಷದ ಮಗನನ್ನು ಕೊಂದು ತಾಯಿಯೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. 13 ವರ್ಷದ ಭಾರ್ಗವ್ ಪುಲಿವರ್ತ ಹಾಗೂ 40 ವರ್ಷದ ರಮ್ಯಾ ಮೃತರು. 19 ವರ್ಷದ ಮಗಳು ಪಿಜಿ ಯಲ್ಲಿದ್ದು ಓದುತ್ತಿದ್ದಾಳೆ.
ರಮ್ಯಾ, ಶ್ರೀದರ್ ಎಂಬುವವರನ್ನು ಪ್ರೀತಿಸಿ ಮದುವೆಯಾಗಿದ್ದರು. ಇಬ್ಬರದ್ದು ಅಂತರ್ಜಾತಿ ವಿವಾಹವಾಗಿತ್ತು. ದಂಪತಿಗೆ ಇಬ್ಬರು ಮಕ್ಕಳಿದ್ದರು. ಆದರೆ ಕಳೆದ ಮೂರು ತಿಂಗಳ ಹಿಂದೆ ಶ್ರೀದರ್ ನಿಧನರಾಗಿದ್ದರು. ಇದಾದ ಮೇಲೆ ಎಲ್ಲಾ ಜವಾಬ್ದಾರಿ ರಮ್ಯಾ ಮೇಲೆ ಬಿತ್ತು. ಇವರಿದ್ದ ಪ್ಲ್ಯಾಟ್ ಬಾಡಿಗೆ 45 ಸಾವಿರ, ಮಕ್ಕಳ ಶಿಕ್ಷಣ ಹೀಗೆ ಮನೆ ಖರ್ಚೆಲ್ಲಾ ರಮ್ಯಾಗೆ ನಿಭಾಯಿಸುವುದಕ್ಕೆ ಕಷ್ಟವಾಯಿತು. ಗಂಡನ ಸಾವಿನ ಬಳಿಕ ರಮ್ಯಾ ಅವರು ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ. ಎಷ್ಟೋ ಸಲ ನಾನೂ ಸಾಯಿತ್ತೀನಿ ಎಂದೆಲ್ಲಾ ಹೇಳಿದ್ದರಂತೆ.
ಇದೀಗ ಮಗನನ್ನು ಕೊಂದು, ತಾನೂ ನೇಣಿಗೆ ಶರಣಾಗಿದ್ದಾರೆ. ಮೊದಲಿಗೆ ಮಗನಿಗೆ ನೇಣು ಬಿಗಿದು ಕೊಲ್ಲಲಾಗಿದೆ. ಬಳಿಕ ಆತನನ್ನು ಹಾಸಿಗೆ ಮೇಲೆ ಮಲಗಿಸಿ, ರಮ್ಯಾ ಅವರು ನೇಣಿ ಬಿಗಿದುಕೊಂಡು ಸಾವನ್ನಪ್ಪಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. ರಮ್ಯಾ ಅವರು ಈ ಸಂಬಂಧ ಪೊಲೀಸರು, ಡಾಕ್ಟರ್ ಹಾಗೂ ಮಗಳಿಗೆ ಪತ್ರ ಬರೆದಿಟ್ಟಿದ್ದಾರೆ. ಮಗಳು ಇನ್ನು ಓದುತ್ತಿದ್ದಾಳೆ. 19 ವರ್ಷ. ಈಗ ಮಗಳಿಗೂ ಯಾರು ದಿಕ್ಕು ಎಂಬ ಚಿಂತೆ ಕಾಡುತ್ತಿದೆ. ಅಮ್ಮ, ತಮ್ಮನನ್ನು ಕಳೆದುಕೊಂಡ ಆ ಯುವತಿ ಈಗ ಕಣ್ಣೀರಿಡುತ್ತಿದ್ದಾಳೆ.
ಬೆಂಗಳೂರು: ರಾಜ್ಯ ಬಜೆಟ್ ಮಂಡನೆಗೆ ದಿನಗಣನೆ ಶುರುವಾಗಿದೆ. ಗ್ಯಾರಂಟಿ ಯೋಜನೆಗಳ ನಡುವೆ ಇನ್ನು ಏನೆಲ್ಲಾ ಕೊಡಬಹುದು ಎಂಬ ನಿರೀಕ್ಷೆಗಳು ಜನ…
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಫೆ. 20…
ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳೆಗೆರೆ, ಚಳ್ಳಕೆರೆ, ಮೊ : 84314 13188 ಸುದ್ದಿಒನ್, ಚಳ್ಳಕೆರೆ, ಫೆಬ್ರವರಿ. 20…
ಬೆಂಗಳೂರು: ರಾಜ್ಯದಲ್ಲಿ ಸಿಎಂ ಬದಲಾವಣೆಯ ಚರ್ಚೆ ಜೋರಾಗಿದೆ. ಸಿದ್ದರಾಮಯ್ಯನವರು ಖುರ್ಚಿ ಬಿಟ್ಟುಕೊಟ್ಟರೆ ಕೂರೋದಕ್ಕೆ ಹಲವರು ಇದ್ದಾರೆ.…
ಚಿತ್ರದುರ್ಗ. ಫೆ.20: “ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ಸಂರಕ್ಷಣೆ ಕಾಯ್ದೆ” ಕುರಿತು ಮಹಿಳೆಯರಿಗೆ ಹೆಚ್ಚಿನ ಅರಿವು ಮೂಡಿಸಬೇಕು ಎಂದು ಜಿಲ್ಲಾ…
ಹಿರಿಯೂರು, ಫೆಬ್ರವರಿ. 20: ರಾಜ್ಯದಲ್ಲಿ ಸಮಸಮಾಜ ನಿರ್ಮಾಣ ಮಾಡಲು ನಾವೆಲ್ಲರೂ ಒಂದಾಗಬೇಕು ಎಂದು ಸಾಮಾಜಿಕ ಹೋರಾಟಗಾರ ಹಾಗೂ ನಟ ಚೇತನ್…