ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ದರ್ಶನ್ಗೆ ಅಭಿಮಾನಿಗಳ ಸಂಖ್ಯೆ ಕಡಿಮೆ ಏನು ಇಲ್ಲ ಎಂಬುದನ್ನು ಬಿಡಿಸಿ ಹೇಳಬೇಕಾಗಿಲ್ಲ. ಕ್ರಾಂತಿ ಪ್ರಮೋಷನ್ ಗಾಗಿ ಜಿಲ್ಲೆ ಜಿಲ್ಲೆಗೆ ಹೋದಾಗಲೂ ಇದು ಪ್ರೂವ್ ಆಗಿದೆ. ತಮ್ಮ ಡಿ ಬಾಸ್ ನೋಡಲು ಎಲ್ಲೆಲ್ಲಿಂದಾನೋ ಬರುತ್ತಾರೆ. ಡಿ ಬಾಸ್ಗಾಗಿ ಕಾಯುತ್ತಾರೆ. ದರ್ಶನ್ ಸಿನಿಮಾ ಬರುತ್ತಾ ಇದೆ ಅಂದ್ರೆ ಅವರಿಗೆ ಹಬ್ಬವೇ ಸರಿ. ಈ ಹಬ್ಬಕ್ಕಾಗಿ ಕಾಯುತ್ತಿದ್ದ ಅಭಿಮಾನಿಯೊಬ್ಬ ನಿಧನರಾಗಿರುವ ಘಟನೆ ನಡೆದಿದೆ.
ಅಭಿ ಎಂಬ ಯುವಕ ದರ್ಶನ್ ಅವರಿಗೆ ಅಪ್ಪಟ ಅಭಿಮಾನಿಗಿದ್ದರು. ಕ್ರಾಂತಿ ಸಿನಿಮಾದ ಟ್ರೇಲರ್ ನೋಡಿ ಹರ್ಷ ವ್ಯಕ್ತಪಡಿಸಿದ್ದರು. ಸಿನಿಮಾವನ್ನು ನೋಡಬೇಕೆಂದು ಕಾತುರರಾಗಿದ್ದರು. ಡಿ ಬಾಸ್ ಗೋಸ್ಕರ ಒಂದು ಗುಡಿಯನ್ನು ಕಟ್ಟಿಸುತ್ತೇನೆ ಎಂದು ಹೇಳಿದ್ದರು. ಆದರೆ ವಿಧಿ ಅದಕ್ಕೆ ಅವಕಾಶ ನೀಡಿಲ್ಲ. ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಬೈಕ್ ಓಡಿಸುವಾಗ ಅಪಘಾತಕ್ಕೀಡಾಗಿ ಪ್ರಾಣ ಕಳೆದುಕೊಂಡಿದ್ದಾರೆ.
ಅಭಿಮಾನಿಯ ಸಾವಿಗೆ ನಟ ದರ್ಶನ್ ಕಂಬನಿ ಮಿಡಿದಿದ್ದು, ತಮ್ಮ ಸೆಲೆಬ್ರೆಟಿಗಳಿಗೆ ಸಲಹೆಯನ್ನು ನೀಡಿದ್ದಾರೆ. “ಎಲ್ಲರಿಗೂ ಕಳಕಳಿಯ ಮನವಿ. ಗಾಡಿಯಲ್ಲಿ ಚಲಿಸುವಾಗ ದಯಮಾಡಿ ಅತೀ ಜಾಗೃಕತೆಯಿಂದ ಓಡಿಸಿ. ನಿಮ್ಮ ಕುಟುಂಬ ನಿಮ್ಮ ಮೇಲೆ ಅವಲಂಬಿತವಾಗಿರುತ್ತದೆ ಎಂಬುದನ್ನು ಮರೆಯದಿರಿ. ಕೆಲವೊಮ್ಮೆ ನಮ್ಮ ಪ್ರಜ್ಞೆಯಲ್ಲಿದ್ದರೂ ಸಹ ದುರದೃಷ್ಟವಶಾತ್ ಅಪಘಾತಗಳು ಸಂಭವಿಸುತ್ತವೆ.ಅಭಿ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ.” ಎಂದಿದ್ದಾರೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್