Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಡ್ರಾಗನ್ ಹಣ್ಣು ಬೆಳೆದು ಯಶಸ್ಸು ಕಂಡ ರೈತ : ಚಿತ್ರನಾಯಕನಹಳ್ಳಿ ನಾರಾಯಣರೆಡ್ಡಿಗೆ ಉತ್ತಮ ಆದಾಯ

Facebook
Twitter
Telegram
WhatsApp

 

ಚಿತ್ರದುರ್ಗ.ಸೆ.29: ಜಿಲ್ಲೆಯ ಚಳ್ಳಕೆರೆ ತಾಲ್ಲೂಕು ರಾಜ್ಯದಲ್ಲಿಯೇ ಅತ್ಯಂತ ಕಡಿಮೆ ಮಳೆ ಬೀಳುವ ತಾಲ್ಲೂಕು ಆಗಿದ್ದರೂ ಇಲ್ಲಿನ ರೈತರ ಪ್ರಯೋಗಶೀಲತೆಯಲ್ಲಿ ಕೊರತೆ ಕಾಣದು. ಚಳ್ಳಕೆರೆ ತಾಲ್ಲೂಕಿನ ಚಿತ್ರನಾಯಕನಹಳ್ಳಿ ಗ್ರಾಮದ ಶ್ರೀ ನಾರಾಯಣರೆಡ್ಡಿ ಬಿನ್ ಲೇಟ್ ನಣಜೀವರೆಡ್ಡಿ ರವರು ಕಡಿಮೆ ನೀರಿನಲ್ಲಿ ಉತ್ತಮ ಬೆಳೆ ಕೊಡುವ ಅಪ್ರಧಾನ ಹಣ್ಣಿನ ಜಾತಿಯ ಡ್ರಾಗನ್ ಹಣ್ಣಿನ ಬೆಳೆ ಬೆಳೆದು ಉತ್ತಮ ಆದಾಯ ಗಳಿಸುತ್ತಿದ್ದಾರೆ.

ಈ ಹಿಂದೆ ಇವರು ಇರುವ 2 ಎಕರೆ ಜಮೀನಿನಲ್ಲಿ ಮೆಕ್ಕೆಜೋಳ. ಟೊಮೋಟೋ, ಈರುಳ್ಳಿ ಬೆಳೆಯುತ್ತಿದ್ದರೂ, ಕಡಿಮೆ ನೀರಿರುವ ಕಾರಣ ಲಾಭ ನಿರೀಕ್ಷಿತ ಮಟ್ಟದಲ್ಲಿ ಬಂದಿರುವುದಿಲ್ಲ. ಆದ ಕಾರಣ ಕಡಿಮೆ ನೀರಿನಲ್ಲಿ ಬೆಳೆಯಬಹುದಾದ ಬೆಳೆಯ ಕುರಿತಾಗಿ ತೋಟಗಾರಿಕೆ ಇಲಾಖೆ ರೈತ ಸಂಪರ್ಕ ಕೇಂದ್ರದ ತೋಟಗಾರಿಕೆ ಅಧಿಕಾರಿ ಅವರಿಂದ ಡ್ರಾಗನ್ ಹಣ್ಣಿನ ಬೆಳೆ ಕುರಿತಾಗಿ ಮಾಹಿತಿ ಪಡೆದು ಮಹಾತ್ಮಗಾಂಧಿ ಉದ್ಯೋಗ ಖಾತರಿ ಯೋಜನೆಯ ಸದುಪಯೋಗ ಪಡೆಯಲು ಆಸಕ್ತಿ ತೋರಿ ಡ್ರಾಗನ್ ಹಣ್ಣಿನ ಬೆಳೆಯನ್ನು ಬೆಳೆದಿದ್ದಾರೆ.

2 ಎಕರೆಯಲ್ಲಿ 10*9 ಅಡಿ ಅಂತರದಲ್ಲಿ ಸುಮಾರು 960 Poleಗಳನ್ನು ನೆಟ್ಟು 3840 ಸಸಿಗಳನ್ನು ನಾಟಿ ಮಾಡಿರುತ್ತಾರೆ. ರೂ. 55 ಕ್ಕೆ 01 ರಂತೆ ರೋಜ್ ರೆಡ್ ತಳಿಯ ಸಸಿಯನ್ನು ದೊಡ್ಡಬಳ್ಳಾಪುರದಿಂದ ಖರೀದಿ ಮಾಡಿ ಕೊಟ್ಟಿಗೆ ಗೊಬ್ಬರ ಹಾಕಿ ನಾಟಿ ಮಾಡಿರುತ್ತಾರೆ. ಸಸಿ ನಾಟಿ ಮಾಡಿದ ನಂತರ 1.5 ವರ್ಷಕ್ಕೆ ಇಳುವರಿ ಪ್ರಾರಂಭವಾಗಿರುತ್ತದೆ. ಹೂ ಕಚ್ಚಿದ ಸಮಯದಲ್ಲಿ 3-4 ದಿನಗಳಿಗೊಮ್ಮೆ ನೀರು ಹರಿಸಬೇಕು. ಉಳಿದಂತೆ ವಾರಕೊಮ್ಮೆ ನೀರು ಹರಿಸಿದರೆ ಸಾಕು. ಹೂ ಕಚ್ಚಿದ 1.5 ತಿಂಗಳಿಗೆ ಹಣ್ಣು ಕಟಾವಿಗೆ ಬರುತ್ತದೆ.

ನಾರಾಯಣ ರೆಡ್ಡಿಯವರು ಮೊದಲನೆ ಬೆಳೆ ಹಣ್ಣು ಕಟಾವು ಮಾಡಿ ಬೆಂಗಳೂರು ಮಾರುಕಟ್ಟೆಯಲ್ಲಿ ಬಾಂಬೆ ಕಂಪನಿಯ ಖರೀದಿದಾರರಿಗೆ ಕೆ.ಜಿ.ಗೆ ರೂ.110-120 ರಂತೆ ಮೂರು ಬಾರಿ ಕಟಾವಿನ ಒಟ್ಟು 6 ಟನ್ ಹಣ್ಣನ್ನು ಮಾರಾಟ ಮಾಡಿರುತ್ತಾರೆ. ಒಂದು ಹಣ್ಣಿನ ತೂಕ 400-500 ಗ್ರಾಂ ವರೆಗೂ ಬಂದಿರುತ್ತದೆ. ಮೊದಲನೇ ಬೆಳೆಯಿಂದ ನಾಟಿ ಮಾಡಿದ ಬಂಡವಾಳದ ಹಣವನ್ನು ಪಡೆದಿರುತ್ತಾರೆ.

ಮುಂಬರುವ ದಿನಗಳಲ್ಲಿ ಬರುವ ಬೆಳೆಯಿಂದ ಲಾಭದ ಮೊತ್ತದ ನಿರೀಕ್ಷೆಯಲ್ಲಿದ್ದಾರೆ. ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಪಡೆದ 1.5 ಲಕ್ಷ ಸಹಾಯಧನದಿಂದ ಪ್ರಾರಂಭಿಕ ಬಂಡವಾಳಕ್ಕೆ ಅನುಕೂಲವಾಗಿರುತ್ತದೆ ಹಾಗೂ ಹನಿ ನೀರಾವರಿ ಒಗ್ಗೂಡಿಸುವಿಕೆ ಅಡಿಯಲ್ಲಿ ಹನಿ ನೀರಾವರಿಗೆ ಸಹಾಯಧನ ಪಡೆದಿರುತ್ತಾರೆ.

ಸರ್ಕಾರದ ಯೋಜನೆಗಳ ಸಹಾಯಧನದಿಂದಾಗಿ ಸಾಲದ ಹೊರೆ ಕಡಿಮೆಯಾಗಿ ಪ್ರಾರಂಭಿಕ ಬಂಡವಾಳಕ್ಕೆ ಹೆಚ್ಚಿನ ಅನುಕೂಲವಾಗಿರುವ ಕುರಿತಾಗಿ ಹರ್ಷ ವ್ಯಕ್ತಪಡಿಸಿರುತ್ತಾರೆ. ಜಿಲ್ಲೆಯ ರೈತರಿಗೆ ಸರ್ಕಾರದ ಯೋಜನೆಗಳ ಸದುಪಯೋಗ ಪಡಿಸಿಕೊಳ್ಳಲು ಸಲಹೆ ನೀಡಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ  9740153343, 8951820256 ಕ್ಕೆ ರೈತರನ್ನು ಸಂಪರ್ಕಿಸಬಹುದಾಗಿದೆ ಎಂದು ತೋಟಗಾರಿಕೆ ಇಲಾಖೆ ಉಪನಿರ್ದೇಶಕಿ ಸವಿತಾ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ದೇಹದಲ್ಲಿ ರಕ್ತ ಹೆಪ್ಪುಗಟ್ಟಲು ಕಾರಣವೇನು ?

ಸುದ್ದಿಒನ್ : ದೇಹದಲ್ಲಿ ರಕ್ತ ಹೆಪ್ಪುಗಟ್ಟುವುದು ತುಂಬಾ ಅಪಾಯಕಾರಿ. ಪರಿಣಾಮವಾಗಿ, ಅನೇಕ ರೀತಿಯ ಮಾರಣಾಂತಿಕ ಸಮಸ್ಯೆಗಳು ಉದ್ಭವಿಸುತ್ತವೆ. ದೇಹದಲ್ಲಿ ರಕ್ತ ಹೆಪ್ಪುಗಟ್ಟುವಿಕೆಗೆ ಅಪಾಯಕಾರಿ ಅಂಶಗಳು ಯಾವುವು ? ಅವುಗಳನ್ನು ತಡೆಯುವುದು ಹೇಗೆ ? ಮುಂತಾದ

ನಿಮ್ಮದೇ ರಾಶಿ ಹೊಂದಿರುವರು ಶ್ರೀಮಂತರಾಗಿದ್ದಾರೆ, ಸರಕಾರಿ ಉದ್ಯೋಗದಲ್ಲಿದ್ದಾರೆ ನೀವೇಕೆ ಇಲ್ಲ?

ನಿಮ್ಮದೇ ರಾಶಿ ಹೊಂದಿರುವರು ಶ್ರೀಮಂತರಾಗಿದ್ದಾರೆ, ಸರಕಾರಿ ಉದ್ಯೋಗದಲ್ಲಿದ್ದಾರೆ ನೀವೇಕೆ ಇಲ್ಲ? ಶನಿವಾರ ರಾಶಿ ಭವಿಷ್ಯ -ಮೇ-4,2024 ಸೂರ್ಯೋದಯ: 05:52, ಸೂರ್ಯಾಸ್ತ : 06:33 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ : ಜೂನ್ 3 ರಂದು ಮತದಾನ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಚಿತ್ರದುರ್ಗ. ಮೇ.03: ಆಗ್ನೇಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರ ಆಯ್ಕೆಯ ಚುನಾವಣೆಗೆ ವೇಳಾಪಟ್ಟಿ ಪ್ರಕಟವಾಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ 4615 ಮತದಾರರು ಇದ್ದು , ಜೂನ್ 3 ರಂದು ಮತದಾನ ಜರುಗಲಿದೆ ಎಂದು ಆಗ್ನೇಯ

error: Content is protected !!