Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ದಾವಣಗೆರೆಯ ಬಯೋಕೆಮಿಕಲ್ ಗೋದಾಮಿನಲ್ಲಿ ಬೆಂಕಿ ಅವಘಡ…!

Facebook
Twitter
Telegram
WhatsApp

ದಾವಣಗೆರೆ: ಮೆಡಿಕಲ್ ನ ಬಯೋಕೆಮಿಕಲ್ ಸಂಗ್ರಹದ ಗೋದಾಮಿನಲ್ಲಿ ಬೆಂಕಿ ಅವಘಡ ಸಂಭವಿಸಿದ ಘಟನೆ ಅಕ್ಕಮಹಾದೇವಿ ರಸ್ತೆಯಲ್ಲಿರುವ ಮೈಸೂರು ಮೆಡಿಕಲ್ ಬಯೋ ಕೆಮಿಕಲ್ ಏಜೆನ್ಸಿಯಲ್ಲಿ ನಡೆದಿದೆ. ಈ ದಾಸ್ತಾನುವಿನಿಂದ ಎಲ್ಲೆಡೆ ಬಯೋ ಕೆಮಿಕಲ್ಸ್ ನ್ನು ಸರಬರಾಜು ಮಾಡಲಾಗುತ್ತಿತ್ತು.

ದೀಪಾವಳಿ ಅಮವಾಸ್ಯೆಯ ಪ್ರಯುಕ್ತ ಗೋದಾಮಿನಲ್ಲಿ ಲಕ್ಷ್ಮೀ ಪೂಜೆ ಮಾಡಲಾಗಿತ್ತು. ಆದರೆ ಇಂದು ರಾತ್ರಿ ಸುಮಾರು 8 ಗಂಟೆಯ ವೇಳೆ ಸಿಬ್ಬಂದಿಗಳು ಪಟಾಕಿ ಸಿಡಿಸುವ ವೇಳೆ ಮೊದಲ ಮಹಡಿಯ ಗೋದಾಮಿನಲ್ಲಿ ಸಂಗ್ರಹಿಸಿಟ್ಟಿದ್ದ ಬಯೋ ಕೆಮಿಕಲ್ಸ್ ಗೆ ಕಿಟಕಿಯ ಮೂಲಕ ಪಟಾಕಿಯ ಕಿಡಿ ಸಿಡಿದಿದೆ. ಪರಿಣಾಮ ಗೋದಾಮು ಹೊತ್ತಿ ಉರಿದಿದ್ದು, ಬೆಂಕಿಯ ಜ್ವಾಲೆ ಅತಿಯಾಗಿ ಹಬ್ಬಿತ್ತು. ಬಯೋಕೆಮಿಕಲ್ ಗೆ ಕೂಡ ಬೆಂಕಿ ಹೊತ್ತಿತ್ತು. ಹೊಗೆಯ ದಟ್ಟತೆ ಜಾಸ್ತಿಯಾಗಿದೆ. ಸಮೀಪದ ಕಟ್ಟಡದಲ್ಲಿನ ಸಾರ್ವಜನಿಕರು ಬೆಂಕಿ ಹತ್ತಿರುವ ಬಗ್ಗೆ ಏಜೆನ್ಸಿ ಮಾಲೀಕರ ಗಮನಕ್ಕೆ ತಂದಿದ್ದಾರೆ.

ಕೆಳ ಮಹಡಿಯಲ್ಲಿದ್ದ ಏಜೆನ್ಸಿಯ ಮಾಲೀಕರು, ಸಿಬ್ಬಂದಿಗಳು ತಕ್ಷಣವೇ ಎಚ್ಚೆತ್ತುಕೊಂಡು ಅಗ್ನಿಶಾಮಕ ದಳಕ್ಕೆ ವಿಷಯ ಮುಟ್ಟಿಸಿದರು. ತಕ್ಷಣವೇ ಬಂದ ಅಗ್ನಿಶಾಮಕದವರು ಬೆಂಕಿ ನಂದಿಸಲು ಹರಸಾಹಸಪಟ್ಟರು. ಒಂದು ಅಗ್ನಿಶಾಮಕ ವಾಹನದಿಂದ ಬೆಂಕಿ ನಂದಿಸಲು ಆಗದಿದ್ದಾಗ ಮತ್ತೊಂದು ಅಗ್ನಿ ಶಾಮಕ ವಾಹನ ಸ್ಥಳಕ್ಕೆ ದೌಡಾಯಿಸಿ ಬೆಂಕಿ ಜ್ವಾಲೆ ತಹಬಂದಿಗೆ ತರಲು ಪ್ರಯತ್ನಿಸಿದ್ದಾರೆ. ಮುನ್ನೆಚ್ಚರಿಕಾ ಕ್ರಮವಾಗಿ ಆ ಪ್ರದೇಶದಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗಿತ್ತು. ಅದೃಷ್ಟವಶಾತ್ ಯಾವುದೇ ಸಾವು-ನೋವು ಸಂಭವಿಸಿಲ್ಲ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಜೇನುತುಪ್ಪ ಬಳಸುವುದರಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ ?

ಸುದ್ದಿಒನ್ : ಜೇನುತುಪ್ಪದ ಬಗ್ಗೆ ವಿಶೇಷವಾಗಿ ಹೇಳಬೇಕಾಗಿಲ್ಲ. ಜೇನುತುಪ್ಪದಿಂದ ಅನೇಕ ಪ್ರಯೋಜನಗಳಿವೆ. ಜೇನು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದು ಎಲ್ಲಾ ಔಷಧೀಯ ಗುಣಗಳನ್ನು ಹೊಂದಿದೆ.  ಮಕ್ಕಳಿಂದ ಹಿಡಿದು ದೊಡ್ಡವರವರೆಗೆ ಎಲ್ಲರಿಗೂ ಜೇನು ತುಂಬಾ ಆರೋಗ್ಯಕಾರಿ.

ಈ ರಾಶಿಯವರು ಅಪಾರ ಖಜಾನೆ ಸಂಪತ್ತು ಹೊಂದಿರುವರು.

ಈ ರಾಶಿಯವರು ಅಪಾರ ಖಜಾನೆ ಸಂಪತ್ತು ಹೊಂದಿರುವರು. ಈ ರಾಶಿಯವರು ಬಯಸಿದ್ದೆಲ್ಲಾ ಪಡೆಯುವ ಆಶಾವಾದಿಗಳು.   ಸೋಮವಾರ ರಾಶಿ ಭವಿಷ್ಯ -ಮೇ-13,2024 ಸೂರ್ಯೋದಯ: 05:48, ಸೂರ್ಯಾಸ್ತ : 06:36 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ

ಚಳ್ಳಕೆರೆ | ರೈತ ಆತ್ಮಹತ್ಯೆ

ಸುದ್ದಿಒನ್, ಚಳ್ಳಕೆರೆ, ಮೇ. 12 : ತಾಲೂಕಿನ ಬಾಲೇನಹಳ್ಳಿ ಗ್ರಾಮದ ಮೋಹನ್ ಕುಮಾರ್(36) ಎಂಬ ರೈತ ಬೆಳಗಾಗಿ ಮಾಡಿದ ಸಾಲವನ್ನು ತೀರಿಸಲಾಗದೆ ಭಾನುವಾರ ಬೆಳಗಿನ ಜಾವ ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ

error: Content is protected !!