Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮನೆಯ ಆವರಣದಲ್ಲಿ ಗಾಂಜಾ ಗಿಡ ಪತ್ತೆ, ಅಧಿಕಾರಿಗಳ ದಾಳಿ, ಅರೋಪಿ ಪರಾರಿ

---Advertisement---

ವರದಿ ಮತ್ತು ಫೋಟೋ ಕೃಪೆ                             ಸುರೇಶ್ ಬೆಳಗೆರೆ,                                                    ಮೊ : 97398 75729

ಸುದ್ದಿಒನ್, ಚಿತ್ರದುರ್ಗ, ಜನವರಿ.11 : ಮನೆಯ ಕಾಂಪೌಂಡ್‌ನಲ್ಲಿ ಬದನೆಕಾಯಿ ಗಿಡಗಳ ಮಧ್ಯದಲ್ಲಿ ಹೂ, ತೆನೆ, ಕಾಂಡ ಬೀಜಗಳಿಂದ ಕೂಡಿದ ಒಂದು ಹಸಿ ಗಾಂಜಾ ಗಿಡ ಬೆಳೆಸಿದ್ದ ಎನ್ನುವ ಖಚಿತ ಮಾಹಿತಿ ಮೇರೆಗೆ ಅಬಕಾರಿ ಇನ್ಸ್ಪೆಕ್ಟರ್ ಸಿ. ನಾಗರಾಜು ನೇತೃತ್ವದಲ್ಲಿ ದಾಳಿ ಮಾಡಲಾಗಿದೆ. ಈ ವೇಳೆ ಆರೋಪಿ ಪರಾರಿಯಾದ ಘಟನೆ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ಕಸವಿಗೊಂಡನಹಳ್ಳಿ ಗ್ರಾಮದಲ್ಲಿ ಬುಧವಾರ ನಡೆದಿದೆ. ಆಂಜನೇಯ (55) ಪರಾರಿಯಾದ ಆರೋಪಿ.

ಮನೆಯ ಮುಂದಿನ ಭಾಗದ ಬದನೆ ಗಿಡದಲ್ಲಿ ಗಾಂಜಾ ಗಿಡವನ್ನು ಬೆಳೆಸಲಾಗಿದ್ದು ಗಾಂಜಾ ದ ಗಿಡವನ್ನು ಬೇರು ಸಮೇತ ತೂಕ ಮಾಡಲಾಗಿದ್ದು 1.510 ಕೆ.ಜಿ‌ತೂಕವಿದ್ದು ಇದು ಸುಮಾರು 30,000 ರೂ ಬೆಲೆ ಬಾಳುತ್ತದೆ ಎಂದು ಅಬಕಾರಿ‌ ನಿರೀಕ್ಷಕ ನಾಗರಾಜ್ ತಿಳಿಸಿದ್ದಾರೆ. ಮನೆ ಮುಂದೆ ಗಾಂಜಾ ಬೆಳೆದ ಆರೋಪಿ ಆಂಜನೇಯ ಪರಾರಿಯಾಗಿದ್ದು ಅಬಕಾರಿ ಅಧಿಜಾರಿಗಳು ಪ್ರಕರಣ ದಾಖಲಿಸಿಕೊಂಡು.
ಆರೋಪಿಯ ಪತ್ತೆಗಾಗಿ ಬಲೆ ಬೀಸಿದ್ದಾರೆ.

ಚಿತ್ರದುರ್ಗ ಅಬಕಾರಿ ಉಪ ಆಯುಕ್ತರು, ರವರ ನಿರ್ದೇಶನ ಹಾಗೂ ಅಬಕಾರಿ ಉಪ‌ ಅಧೀಕ್ಷಕರು, ಹಿರಿಯೂರು ರವರ‌ಮಾರ್ಗದರ್ಶನದಲ್ಲಿ ದಾಳಿ ಮಾಡಲಾಗಿದೆ. ಈ ದಾಳಿ ವೇಳೆ ಅಬಕಾರಿ  ನಿರೀಕ್ಷಕ ನಾಗರಾಜು.ಸಿ.ಅಬಕಾರಿ ,ಉಪ  ನಿರೀಕ್ಷಕರಾದ ರಂಗಸ್ವಾಮಿ-ಡಿ.ತಿಪ್ಪಯ್ಯ,  ಚಳ್ಳಕೆರೆ ವಲಯ
ಮತ್ತು ಅಬಕಾರಿ ಮುಖ್ಯ ಪೇದೆ ಎಸ್.ರಘುನಾಥ ಮತ್ತು‌ಅಬಕಾರಿ ಪೇದೆಗಳಾದ ಎನ್.ನಾಗರಾಜ,
ಟಿ.ಸೋಮಶೇಖರ,ಎನ್ ಶಾಂತಣ್ಣ ಇದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment