Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮನೆಯ ಆವರಣದಲ್ಲಿ ಗಾಂಜಾ ಗಿಡ ಪತ್ತೆ, ಅಧಿಕಾರಿಗಳ ದಾಳಿ, ಅರೋಪಿ ಪರಾರಿ

Facebook
Twitter
Telegram
WhatsApp

ವರದಿ ಮತ್ತು ಫೋಟೋ ಕೃಪೆ                             ಸುರೇಶ್ ಬೆಳಗೆರೆ,                                                    ಮೊ : 97398 75729

ಸುದ್ದಿಒನ್, ಚಿತ್ರದುರ್ಗ, ಜನವರಿ.11 : ಮನೆಯ ಕಾಂಪೌಂಡ್‌ನಲ್ಲಿ ಬದನೆಕಾಯಿ ಗಿಡಗಳ ಮಧ್ಯದಲ್ಲಿ ಹೂ, ತೆನೆ, ಕಾಂಡ ಬೀಜಗಳಿಂದ ಕೂಡಿದ ಒಂದು ಹಸಿ ಗಾಂಜಾ ಗಿಡ ಬೆಳೆಸಿದ್ದ ಎನ್ನುವ ಖಚಿತ ಮಾಹಿತಿ ಮೇರೆಗೆ ಅಬಕಾರಿ ಇನ್ಸ್ಪೆಕ್ಟರ್ ಸಿ. ನಾಗರಾಜು ನೇತೃತ್ವದಲ್ಲಿ ದಾಳಿ ಮಾಡಲಾಗಿದೆ. ಈ ವೇಳೆ ಆರೋಪಿ ಪರಾರಿಯಾದ ಘಟನೆ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ಕಸವಿಗೊಂಡನಹಳ್ಳಿ ಗ್ರಾಮದಲ್ಲಿ ಬುಧವಾರ ನಡೆದಿದೆ. ಆಂಜನೇಯ (55) ಪರಾರಿಯಾದ ಆರೋಪಿ.

ಮನೆಯ ಮುಂದಿನ ಭಾಗದ ಬದನೆ ಗಿಡದಲ್ಲಿ ಗಾಂಜಾ ಗಿಡವನ್ನು ಬೆಳೆಸಲಾಗಿದ್ದು ಗಾಂಜಾ ದ ಗಿಡವನ್ನು ಬೇರು ಸಮೇತ ತೂಕ ಮಾಡಲಾಗಿದ್ದು 1.510 ಕೆ.ಜಿ‌ತೂಕವಿದ್ದು ಇದು ಸುಮಾರು 30,000 ರೂ ಬೆಲೆ ಬಾಳುತ್ತದೆ ಎಂದು ಅಬಕಾರಿ‌ ನಿರೀಕ್ಷಕ ನಾಗರಾಜ್ ತಿಳಿಸಿದ್ದಾರೆ. ಮನೆ ಮುಂದೆ ಗಾಂಜಾ ಬೆಳೆದ ಆರೋಪಿ ಆಂಜನೇಯ ಪರಾರಿಯಾಗಿದ್ದು ಅಬಕಾರಿ ಅಧಿಜಾರಿಗಳು ಪ್ರಕರಣ ದಾಖಲಿಸಿಕೊಂಡು.
ಆರೋಪಿಯ ಪತ್ತೆಗಾಗಿ ಬಲೆ ಬೀಸಿದ್ದಾರೆ.

ಚಿತ್ರದುರ್ಗ ಅಬಕಾರಿ ಉಪ ಆಯುಕ್ತರು, ರವರ ನಿರ್ದೇಶನ ಹಾಗೂ ಅಬಕಾರಿ ಉಪ‌ ಅಧೀಕ್ಷಕರು, ಹಿರಿಯೂರು ರವರ‌ಮಾರ್ಗದರ್ಶನದಲ್ಲಿ ದಾಳಿ ಮಾಡಲಾಗಿದೆ. ಈ ದಾಳಿ ವೇಳೆ ಅಬಕಾರಿ  ನಿರೀಕ್ಷಕ ನಾಗರಾಜು.ಸಿ.ಅಬಕಾರಿ ,ಉಪ  ನಿರೀಕ್ಷಕರಾದ ರಂಗಸ್ವಾಮಿ-ಡಿ.ತಿಪ್ಪಯ್ಯ,  ಚಳ್ಳಕೆರೆ ವಲಯ
ಮತ್ತು ಅಬಕಾರಿ ಮುಖ್ಯ ಪೇದೆ ಎಸ್.ರಘುನಾಥ ಮತ್ತು‌ಅಬಕಾರಿ ಪೇದೆಗಳಾದ ಎನ್.ನಾಗರಾಜ,
ಟಿ.ಸೋಮಶೇಖರ,ಎನ್ ಶಾಂತಣ್ಣ ಇದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

Cold Water Side Effects : ಬೇಸಿಗೆಯಲ್ಲಿ ಫ್ರಿಡ್ಜ್ ನಲ್ಲಿರುವ ತಣ್ಣೀರು ಕುಡಿದರೆ ಎಷ್ಟೆಲ್ಲಾ ಸಮಸ್ಯೆ ಗೊತ್ತಾ ?

  ಸುದ್ದಿಒನ್ : ಈ ಬೇಸಿಗೆಯ ತಾಪವನ್ನು ನಿವಾರಿಸಲು ತಣ್ಣೀರಿಗಿಂತ ಉತ್ತಮ ಪರ್ಯಾಯವಿಲ್ಲ. ಅದಕ್ಕಾಗಿಯೇ ನಮ್ಮಲ್ಲಿ ಹೆಚ್ಚಿನವರು ಬಿಸಿಲಿನಿಂದ ಮನೆಗೆ ಬಂದ ತಕ್ಷಣ ರೆಫ್ರಿಜರೇಟರ್‌ನಿಂದ ತಣ್ಣೀರು ಕುಡಿಯುವ ಅಭ್ಯಾಸವನ್ನು ಹೊಂದಿರುತ್ತಾರೆ. ಆದರೆ ಈ ರೀತಿ

ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ

ಈ ರಾಶಿಯ ಜನಪ್ರತಿನಿಧಿಗಳಿಗೆ ಆತ್ಮೀಯರಿಂದ ಕಂಟಕ, ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ, ಈ ರಾಶಿಯ ವಿವಾಹಿತ ಜೀವನವು ಸಂತೋಷವಾಗಿ ಕಾಣುತ್ತದೆ, ಶುಕ್ರವಾರ-ರಾಶಿ ಭವಿಷ್ಯ ಮೇ-3,2024 ಸೂರ್ಯೋದಯ: 05:52, ಸೂರ್ಯಾಸ್ತ

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

error: Content is protected !!